There is no Karnataka Bandh in Doddaballapura

ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ಬಂದ್ ಆಚರಣೆ ಇಲ್ಲ

ದೊಡ್ಡಬಳ್ಳಾಪುರ (Doddaballapura): ಬೆಳಗಾವಿಯಲ್ಲಿ ಮರಾಠಿಗರ ದಬ್ಬಾಳಿಕೆ ಖಂಡಿಸಿ ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರವನ್ನು ಒತ್ತಾಯಿಸಲು, ಮಾರ್ಚ್ 22ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ಅಂದು ನಡೆಯುವ ಹೋರಾಟಕ್ಕೆ ದೊಡ್ಡಬಳ್ಳಾಪುರದ ಕನ್ನಡಪರ ಸಂಘಟನೆಗಳಿಂದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರದಲ್ಲಿ ಬಂದ್ ಆಚರಿಸದೇ ಇರಲು ನಿರ್ಧರಿಸಲಾಗಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಹೇಳಿದ್ದಾರೆ.

ಕರ್ನಾಟಕ ಬಂದ್ ಕುರಿತಂತೆ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿನ ಕನ್ನಡಪರ ಸಂಘಟನೆಗಳ ಮುಖಂಡರ ಅಭಿಪ್ರಾಯದಂತೆ, ಬಂದ್ ಆಚರಿಸದೇ ಪ್ರತಿಭಟನೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಮುಖಂಡರು, ಪ್ರಸ್ತುತ ಎಸ್‍ಎಸ್‍ಎಲ್‍ಸಿ ಹಾಗೂ ಕಾಲೇಜು ಪರೀಕ್ಷೆಗಳು ನಡೆಯುತ್ತಿವೆ. ಬಂದ್‍ನಿಂದಾಗಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುವುದು ಬೇಡ.

ಬೆಳಗಾವಿಯಲ್ಲಿ ಕನ್ನಡ ಮಾತನಾಡಿ ಎಂದ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ, ಪಂಚಾಯಿತಿ ಅಭಿವೃದ್ಧಿ ಅಕಾರಿ ಮೇಲೆ ಹಲ್ಲೆ ಪ್ರಕರಣಗಳು ಕನ್ನಡಿಗರ ಸ್ವಾಭಿಮಾನ ಕೆಣಕಿವೆ. ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ಅಪಮಾನವಾಗುತ್ತಿರುವುದು ಖಂಡನೀಯ. ಬೆಳಗಾವಿಯಲ್ಲಿ ಸದಾ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಎಂ.ಇ.ಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸಬೇಕು.

ಹಲ್ಲೆ ಮಾಡಿರುವ ಆರೋಪಿಗಳಿಗೆ ಶಿಕ್ಷೆಯಾಗಿ ಎಂ.ಇ.ಎಸ್ ಪುಂಡರನ್ನು ಗಡಿಪಾರು ಮಾಡಬೇಕು. ನಾಡಿನ ನೆಲ ಜನ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ ನಿಲ್ಲಬೇಕು. ಪರಭಾಷಿಕರ ದಬ್ಬಾಳಿಕೆ ನಿಲ್ಲಬೇಕು. ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರಾಗಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸಲು ಹೋರಾಟ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಾ.22ರಂದು ಪ್ರತಿಭಟನೆ

ಸಭೆಯ ನಿರ್ಣಯವನ್ನು ಪ್ರಕಟಿಸಿದ ಮುಖಂಡರು, ಮಾ.22ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಗುವುದು.

ಶನಿವಾರ ಸರ್ಕಾರಿ ರಜೆ ಇರುವ ಕಾರಣ ಮಾ.21ರಂದು ಬೆಳಿಗ್ಗೆ 10.30ಕ್ಕೆ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಸಮಾವೇಶಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಬಂದ್‍ಗೆ ನಮ್ಮ ಬೆಂಬಲವಿಲ್ಲ. ತಾಲೂಕಿನ ಇತರ ಸಂಘಟನೆಗಳು ಬಂದ್ ಮಾಡಲು ಹೊರಟು, ಯಾವುದೇ ತೊಂದರೆಗಳಾದರೆ ನಮ್ಮ ಸಂಘಟನೆಗಳು ಹೊಣೆಯಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ಮುಖಂಡರಾದ ಮುತ್ತೇಗೌಡ, ಸತೀಶ್, ಕನ್ನಡ ಪಕ್ಷದ ವೆಂಕಟೇಶ್, ಮುನಿಪಾಪಯ್ಯ, ಡಾ,ರಾಜ್‍ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ಉಪಾಧ್ಯಕ್ಷ ವಿ.ಪರಮೇಶ್, ತಿಮ್ಮರಾಜು, ಮುಖಂಡರಾದ ನಾಗರಾಜ್, ನವೀನ್ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!