There is no Karnataka Bandh in Doddaballapura

ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ಬಂದ್ ಆಚರಣೆ ಇಲ್ಲ

ದೊಡ್ಡಬಳ್ಳಾಪುರ (Doddaballapura): ಬೆಳಗಾವಿಯಲ್ಲಿ ಮರಾಠಿಗರ ದಬ್ಬಾಳಿಕೆ ಖಂಡಿಸಿ ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರವನ್ನು ಒತ್ತಾಯಿಸಲು, ಮಾರ್ಚ್ 22ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ಅಂದು ನಡೆಯುವ ಹೋರಾಟಕ್ಕೆ ದೊಡ್ಡಬಳ್ಳಾಪುರದ ಕನ್ನಡಪರ ಸಂಘಟನೆಗಳಿಂದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರದಲ್ಲಿ ಬಂದ್ ಆಚರಿಸದೇ ಇರಲು ನಿರ್ಧರಿಸಲಾಗಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಹೇಳಿದ್ದಾರೆ.

ಕರ್ನಾಟಕ ಬಂದ್ ಕುರಿತಂತೆ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿನ ಕನ್ನಡಪರ ಸಂಘಟನೆಗಳ ಮುಖಂಡರ ಅಭಿಪ್ರಾಯದಂತೆ, ಬಂದ್ ಆಚರಿಸದೇ ಪ್ರತಿಭಟನೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಮುಖಂಡರು, ಪ್ರಸ್ತುತ ಎಸ್‍ಎಸ್‍ಎಲ್‍ಸಿ ಹಾಗೂ ಕಾಲೇಜು ಪರೀಕ್ಷೆಗಳು ನಡೆಯುತ್ತಿವೆ. ಬಂದ್‍ನಿಂದಾಗಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುವುದು ಬೇಡ.

ಬೆಳಗಾವಿಯಲ್ಲಿ ಕನ್ನಡ ಮಾತನಾಡಿ ಎಂದ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ, ಪಂಚಾಯಿತಿ ಅಭಿವೃದ್ಧಿ ಅಕಾರಿ ಮೇಲೆ ಹಲ್ಲೆ ಪ್ರಕರಣಗಳು ಕನ್ನಡಿಗರ ಸ್ವಾಭಿಮಾನ ಕೆಣಕಿವೆ. ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ಅಪಮಾನವಾಗುತ್ತಿರುವುದು ಖಂಡನೀಯ. ಬೆಳಗಾವಿಯಲ್ಲಿ ಸದಾ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಎಂ.ಇ.ಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸಬೇಕು.

ಹಲ್ಲೆ ಮಾಡಿರುವ ಆರೋಪಿಗಳಿಗೆ ಶಿಕ್ಷೆಯಾಗಿ ಎಂ.ಇ.ಎಸ್ ಪುಂಡರನ್ನು ಗಡಿಪಾರು ಮಾಡಬೇಕು. ನಾಡಿನ ನೆಲ ಜನ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ ನಿಲ್ಲಬೇಕು. ಪರಭಾಷಿಕರ ದಬ್ಬಾಳಿಕೆ ನಿಲ್ಲಬೇಕು. ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರಾಗಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸಲು ಹೋರಾಟ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಾ.22ರಂದು ಪ್ರತಿಭಟನೆ

ಸಭೆಯ ನಿರ್ಣಯವನ್ನು ಪ್ರಕಟಿಸಿದ ಮುಖಂಡರು, ಮಾ.22ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಗುವುದು.

ಶನಿವಾರ ಸರ್ಕಾರಿ ರಜೆ ಇರುವ ಕಾರಣ ಮಾ.21ರಂದು ಬೆಳಿಗ್ಗೆ 10.30ಕ್ಕೆ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಸಮಾವೇಶಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಬಂದ್‍ಗೆ ನಮ್ಮ ಬೆಂಬಲವಿಲ್ಲ. ತಾಲೂಕಿನ ಇತರ ಸಂಘಟನೆಗಳು ಬಂದ್ ಮಾಡಲು ಹೊರಟು, ಯಾವುದೇ ತೊಂದರೆಗಳಾದರೆ ನಮ್ಮ ಸಂಘಟನೆಗಳು ಹೊಣೆಯಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ಮುಖಂಡರಾದ ಮುತ್ತೇಗೌಡ, ಸತೀಶ್, ಕನ್ನಡ ಪಕ್ಷದ ವೆಂಕಟೇಶ್, ಮುನಿಪಾಪಯ್ಯ, ಡಾ,ರಾಜ್‍ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ಉಪಾಧ್ಯಕ್ಷ ವಿ.ಪರಮೇಶ್, ತಿಮ್ಮರಾಜು, ಮುಖಂಡರಾದ ನಾಗರಾಜ್, ನವೀನ್ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!