4 to 6 lane Bangalore Ring Road (STRR) via Doddaballapura

ದೊಡ್ಡಬಳ್ಳಾಪುರ ಮೂಲಕ 4 ರಿಂದ 6 ಪಥದ ಬೆಂಗಳೂರು ವರ್ತುಲ ರಸ್ತೆ (STRR): ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (STRR) ಕೇಂದ್ರ ಸಂಪುಟ ಸಭೆಯ ಮುಂದೆ ಬರಲಿದೆ. ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ ಒಪ್ಪಿಗೆ ನೀಡಿದೆ.

ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದು, ಶೀಘ್ರವೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದರು.

ನವದೆಹಲಿಯಲ್ಲಿ ಗುರುವಾರ ನಿತಿನ್ ಗಡ್ಕರಿ ಅವರನ್ನು ಅವರ ಸಂಸತ್ ಭವನದ ಕಚೇರಿಯಲ್ಲಿ ಭೇಟಿಯಾದ ಸಚಿವ ಕುಮಾರಸ್ವಾಮಿ ಅವರು, ಈ ಯೋಜನೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದರು.

ಈ ಹಿಂದೆ ಗಡ್ಕರಿಯವರನ್ನು ಸಚಿವರು ಭೇಟಿಯಾಗಿದ್ದರು. ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ (Public Private Partnership Appraisal Committee – PPPAC) ಒಪ್ಪಿಗೆ ನೀಡಿದ್ದು, ಈಗ ಸಂಪುಟದ ಮುಂದೆ ಬರಲಿದೆ. ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಕೊಡಿಸಲಾಗುವುದು ಎಂದು ಅವರು ಹೆಚ್ಡಿಕೆಗೆ ತಿಳಿಸಿದರು.

ಗಡ್ಕರಿ ಅವರ ಸಕರಾತ್ಮಕ ಸ್ಪಂದನೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ಹಲವಾರು ಕಾರಣಗಳಿಂದ ಅದು ನೆನೆಗುದಿಗೆ ಬಿದ್ದಿತ್ತು.

ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಕಾರ್ಯಗತಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಅವರು ಬರೆದಿದ್ದ ಪತ್ರವನ್ನು ಗಡ್ಕರಿ ಅವರಿಗೆ ನೀಡಲಾಯಿತು ಎಂದು ಹೇಳಿದರು.

4- 6 ಪಥ

4- 6 ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ.

ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.

2018ರಿಂದ ನೆನೆಗುದಿಗೆ ಬಿದ್ದಿದ್ದ ಉಪನಗರ ಹೊರ ವರ್ತುಲ ರಸ್ತೆ ಯೋಜನೆಗೆ ಗಡ್ಕರಿ ಅವರ ಒಪ್ಪಿಗೆ ಹಾಗೂ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಮೋಕ್ಷ ಸಿಕ್ಕಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಈ ಯೋಜನೆಯಿಂದ ಹೆಚ್ಚು ಲಾಭವಾಗಲಿದೆ. ಮುಖ್ಯವಾಗಿ ಬೆಂಗಳೂರು ನಗರದ ಮೇಲೆ ಸಂಚಾರದ ಒತ್ತಡ ಕಡಿಮೆ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದ್ದು, ಯೋಜನೆಯ ಸುಮಾರು ರೂ.4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ.

ಬೆಂಗಳೂರು ಸುತ್ತಲಿನ ಉಪ ನಗರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಇದು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!