Daily story Maharana Pratapa

ಹರಿತಲೇಖನಿ ದಿನಕ್ಕೊಂದು ಕಥೆ: ಮಹಾರಾಣಾ ಪ್ರತಾಪ

Daily story: ಭಾರತದ ಇತಿಹಾಸದಲ್ಲಿ ರಾಜಸ್ಥಾನದ ಶೂರವೀರ ಮತ್ತು ಸ್ವಾಭಿಮಾನಿ ರಾಜರಾಗಿದ್ದ ಮಹಾರಾಣಾ ಪ್ರತಾಪರ ಹೆಸರು ಅಜರಾಮರವಾಗಿದೆ.

ಜಯಪುರದ ರಾಣಾ ಮಾನಸಿಂಗನು ಅಕ್ಬರನಿಂದ ರಾಜ್ಯಕ್ಕೆ ಕಷ್ಟವಾಗಬಾರದೆಂದು ತನ್ನ ತಂಗಿಯನ್ನು ಅಕಬರನಿಗೆ ಕೊಟ್ಟು ಮದುವೆ ಮಾಡಿದನು. ಒಂದು ಸಲ ತನ್ನ ವೈಭವವನ್ನು ಪ್ರದರ್ಶಿಸಲು ರಾಣಾ ಮಾನಸಿಂಗನು ದೆಹಲಿಗೆ ಹೋಗುವಾಗ ದಾರಿಯಲ್ಲಿ ಮಹಾರಾಣಾ ಪ್ರತಾಪರನ್ನು ನೋಡಲು ಕುಂಭಲಗಢಕ್ಕೆ ಹೋದನು.

ಮಹಾರಾಣಾ ಪ್ರತಾಪರು ಅವರೆಲ್ಲರನ್ನು ಯೋಗ್ಯವಾಗಿ ಸತ್ಕರಿಸಿದರು ಆದರೆ ಜೊತೆಯಲ್ಲಿ ಕುಳಿತು ಊಟ ಮಾಡುವುದಿಲ್ಲ ಎಂದು ತಿಳಿಸಿದರು.

ಏಕೆ ಜೊತೆಯಲ್ಲಿ ಊಟ ಮಾಡುವುದಿಲ್ಲವೆಂದು ರಾಣಾ ಮಾನಸಿಂಗನು ಕೇಳಿದಾಗ ಮಹಾರಾಣಾ ಪ್ರತಾಪರು ಹೇಳುತ್ತಾರೆ, “ರಾಜ್ಯವನ್ನು ಉಳಿಸಿಕೊಳ್ಳಬೇಕೆಂಬ ಕಾರಣದಿಂದ ತನ್ನ ಮನೆಯ ಹೆಣ್ಣು ಮಕ್ಕಳನ್ನು ಮೊಗಲರಿಗೆ ಮದುವೆ ಮಾಡಿಕೊಟ್ಟಂತಹ ಸ್ವಾಭಿಮಾನ ಶೂನ್ಯ ರಾಜಪೂತನೊಂದಿಗೆ ನಾನು ಕುಳಿತು ಊಟ ಮಾಡುವುದಿಲ್ಲ”.

ಮಹಾರಾಣಾ ಪ್ರತಾಪರ ಉತ್ತರವನ್ನು ಕೇಳಿ ಮಾನಸಿಂಗನು ಕೋಪದಿಂದು ಊಟದ ತಟ್ಟೆಯನ್ನು ಅರ್ಧದಲ್ಲಿಯೇ ಬಿಟ್ಟು ಎದ್ದನು ಮತ್ತು ಹೇಳಿದನು, “ಮಹಾರಾಣಾ ಪ್ರತಾಪ! ಯುದ್ಧದಲ್ಲಿ ನಿನ್ನ ಸರ್ವನಾಶ ಮಾಡದಿದ್ದರೆ ನನ್ನ ಹೆಸರು ಮಾನಸಿಂಗನೇ ಅಲ್ಲ!”

ಸ್ವಲ್ಪ ಸಮಯದ ನಂತರ ಮಾನಸಿಂಗನು, ಅಕಬರನ ಮಗ ಸಲೀಂ ಮತ್ತು ಪ್ರಚಂಡ ಸೈನ್ಯದೊಂದಿಗೆ ಮಹಾರಾಣಾ ಪ್ರತಾಪರ ಮೇಲೆ ಯುದ್ಧಕ್ಕಾಗಿ ಹೊರಟನು.

ಸುದ್ದಿ ತಿಳಿದ ಕೂಡಲೇ ಮಹಾರಾಣಾ ಪ್ರತಾಪನು ತತ್ಪರತೆಯಿಂದ ಅರಾವಲಿ ಪರ್ವತದ ಮೇಲಿಂದ ಕೆಳಗೆ ಬರುತ್ತಿದ್ದ ಶತ್ರು ಸೈನ್ಯದ ಮೇಲೆ ದಾಳಿ ಮಾಡಿ ಅವರ ಅಧಿಕಾಂಶ ಸೈನಿಕರನ್ನು ಮಣ್ಣುಪಾಲು ಮಾಡಿದರು. ಮಹಾರಾಣಾ ಪ್ರತಾಪರ ಕತ್ತಿಯಿಂದ ಸಲೀಂನ ವಧೆಯಾಗಬೇಕಿತ್ತು ಆದರೆ ಆ ಹೊಡೆತವು ಸಲೀಂನ ಆನೆಗೆ ಬಿತ್ತು ಮತ್ತು ಸಲೀಂನು ಉಳಿದನು.

ಮಹಾರಾಣಾ ಭಯದಿಂದ ಮಾನಸಿಂಗನು ಸೈನ್ಯದ ಹಿಂದೆ ಅವಿತುಕೊಂಡಿದ್ದನು. ಮಹಾರಾಣಾ ಪ್ರತಾಪನು ತನ್ನ ಹೊಳೆಯುವ ಕತ್ತಿಯ ಸಹಾಯದಿಂದ ಶತ್ರುಗಳ ಜಾಲದಿಂದ ಹೊರಬರಲು ಪ್ರಯತ್ನಿಸುತ್ತಿದ್ದನು. ಅಷ್ಟರಲ್ಲೇ ಶತ್ರುಸೈನಿಕರ ಹೊಡೆತದಿಂದ ಮಹಾರಾಣಾ ಪ್ರತಾಪರ ಕುದುರೆ ‘ಚೇತಕ’ನ ಕಾಲಿಗೆ ಪೆಟ್ಟಾಯಿತು.

ಇಂತಹ ಸ್ಥಿತಿಯಲ್ಲೂ ಸಹ ಆ ಸ್ವಾಮಿನಿಷ್ಟ ಕುದುರೆಯು ತನ್ನ ಸ್ವಾಮಿಯ ಪ್ರಾಣವನ್ನು ಉಳಿಸಲು ಶತ್ರುಗಳ ಜಾಲದಿಂದ ಹೊರಬರಲು ಪ್ರಯತ್ನಿಸುತ್ತಿತ್ತು. ಅಷ್ಟರಲ್ಲೇ ದಾರಿಯಲ್ಲಿ ಒಂದು ಸಣ್ಣನದಿ ಎದುರಾಯಿತು. ಚೇತಕ ಆ ಸ್ಥಿತಿಯಲ್ಲೇ ತನ್ನ ಎಲ್ಲಾ ಶಕ್ತಿಯನ್ನು ಸೇರಿಸಿ ಒಂದೇ ಜಿಗಿತಕ್ಕೆ ನದಿಯನ್ನು ದಾಟಿತು, ಆದರೆ ಹೃದಯ ಬಡಿತವು ನಿಂತಿದ್ದರಿಂದ ಚೇತಕ ಅಲ್ಲೇ ಪ್ರಾಣ ಬಿಟ್ಟಿತು.

ಮಹಾರಾಣಾ ಪ್ರತಾಪರು ಹಿಂದೆ ತಿರುಗಿ ನೋಡಿದಾಗ ಅಕಬರನ ಸೈನ್ಯದಲ್ಲಿ ಸೇರಿದ್ದ ಅವನ ತಮ್ಮ ಶಕ್ತಿಸಿಂಗನು ನಾಲ್ಕು-ಐದು ಮೊಗಲ ಸೈನಿಕರನ್ನು ಹೊಡೆಯುತ್ತಿದ್ದನು. ಇದನ್ನು ನೋಡಿ ಮಹಾರಾಣಾ ಪ್ರತಾಪರು ಆಶ್ಚರ್ಯಚಕಿತರಾದರು.

ಅಷ್ಟರಲ್ಲೇ ಆ ಸೈನಿಕರನ್ನು ಸಾಯಿಸಿದ ಶಕ್ತಿಸಿಂಗನು ಮಹಾರಾಣಾ ಪ್ರತಾಪರ ಬಳಿಗೆ ಬಂದು ಅವರನ್ನು ಆಲಂಗಿಸಿಕೊಂಡು, “ಅಣ್ಣಾ, ನಾನು ಮೊಗಲರ ಸೈನ್ಯದಲ್ಲಿದ್ದೀನಿ, ಆದರೆ ನಿಮ್ಮ ಶೌರ್ಯ, ಪರಾಕ್ರಮದಿಂದ ನೀವೇ ನನ್ನ ಆದರ್ಶರಾಗಿದ್ದೀರಿ. ನಾನು ನಿಮ್ಮ ಕುದುರೆಗಿಂತಲೂ ತುಚ್ಛವಾಗಿದ್ದೇನೆ.”

ಮೇವಾಡದ ಇತಿಹಾಸವನ್ನು ಬರೆದ ಕರ್ನಲ್ ಟಾಂಡ್ ಮಹಾರಾಣಾಾ ಪ್ರತಾಪರ ಬಗ್ಗೆ ಹೇಳುತ್ತಾ, “ಉತ್ಕಟ ಮಹತ್ವಾಕಾಂಕ್ಷಿ, ಶಾಸನ ನಿಪುಣತೆ ಮತ್ತು ಅಪರಿಮಿತ ಸಂಪತ್ತಿನ ಬಲದಿಂದ ಅಕಬರನು ದೃಢ ನಿಶ್ಚಯಿ, ಧೈರ್ಯಶಾಲಿ, ಉಜ್ವಲ ಕೀರ್ತಿಮಾನ ಮತ್ತು ಸಾಹಸಿ ಮಹಾರಾಣಾ ಪ್ರತಾಪರ ಆತ್ಮಬಲವನ್ನು ಬೀಳಿಸಲು ಪ್ರಯತ್ನಿಸಿದನು, ಆದರೆ ಅದು ವಿಫಲವಾಯಿತು”.

ಕೃಪೆ: ಹಿಂದೂ ಜಾಗೃತಿ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!