Daily story Maharana Pratapa

ಹರಿತಲೇಖನಿ ದಿನಕ್ಕೊಂದು ಕಥೆ: ಮಹಾರಾಣಾ ಪ್ರತಾಪ

Daily story: ಭಾರತದ ಇತಿಹಾಸದಲ್ಲಿ ರಾಜಸ್ಥಾನದ ಶೂರವೀರ ಮತ್ತು ಸ್ವಾಭಿಮಾನಿ ರಾಜರಾಗಿದ್ದ ಮಹಾರಾಣಾ ಪ್ರತಾಪರ ಹೆಸರು ಅಜರಾಮರವಾಗಿದೆ.

ಜಯಪುರದ ರಾಣಾ ಮಾನಸಿಂಗನು ಅಕ್ಬರನಿಂದ ರಾಜ್ಯಕ್ಕೆ ಕಷ್ಟವಾಗಬಾರದೆಂದು ತನ್ನ ತಂಗಿಯನ್ನು ಅಕಬರನಿಗೆ ಕೊಟ್ಟು ಮದುವೆ ಮಾಡಿದನು. ಒಂದು ಸಲ ತನ್ನ ವೈಭವವನ್ನು ಪ್ರದರ್ಶಿಸಲು ರಾಣಾ ಮಾನಸಿಂಗನು ದೆಹಲಿಗೆ ಹೋಗುವಾಗ ದಾರಿಯಲ್ಲಿ ಮಹಾರಾಣಾ ಪ್ರತಾಪರನ್ನು ನೋಡಲು ಕುಂಭಲಗಢಕ್ಕೆ ಹೋದನು.

ಮಹಾರಾಣಾ ಪ್ರತಾಪರು ಅವರೆಲ್ಲರನ್ನು ಯೋಗ್ಯವಾಗಿ ಸತ್ಕರಿಸಿದರು ಆದರೆ ಜೊತೆಯಲ್ಲಿ ಕುಳಿತು ಊಟ ಮಾಡುವುದಿಲ್ಲ ಎಂದು ತಿಳಿಸಿದರು.

ಏಕೆ ಜೊತೆಯಲ್ಲಿ ಊಟ ಮಾಡುವುದಿಲ್ಲವೆಂದು ರಾಣಾ ಮಾನಸಿಂಗನು ಕೇಳಿದಾಗ ಮಹಾರಾಣಾ ಪ್ರತಾಪರು ಹೇಳುತ್ತಾರೆ, “ರಾಜ್ಯವನ್ನು ಉಳಿಸಿಕೊಳ್ಳಬೇಕೆಂಬ ಕಾರಣದಿಂದ ತನ್ನ ಮನೆಯ ಹೆಣ್ಣು ಮಕ್ಕಳನ್ನು ಮೊಗಲರಿಗೆ ಮದುವೆ ಮಾಡಿಕೊಟ್ಟಂತಹ ಸ್ವಾಭಿಮಾನ ಶೂನ್ಯ ರಾಜಪೂತನೊಂದಿಗೆ ನಾನು ಕುಳಿತು ಊಟ ಮಾಡುವುದಿಲ್ಲ”.

ಮಹಾರಾಣಾ ಪ್ರತಾಪರ ಉತ್ತರವನ್ನು ಕೇಳಿ ಮಾನಸಿಂಗನು ಕೋಪದಿಂದು ಊಟದ ತಟ್ಟೆಯನ್ನು ಅರ್ಧದಲ್ಲಿಯೇ ಬಿಟ್ಟು ಎದ್ದನು ಮತ್ತು ಹೇಳಿದನು, “ಮಹಾರಾಣಾ ಪ್ರತಾಪ! ಯುದ್ಧದಲ್ಲಿ ನಿನ್ನ ಸರ್ವನಾಶ ಮಾಡದಿದ್ದರೆ ನನ್ನ ಹೆಸರು ಮಾನಸಿಂಗನೇ ಅಲ್ಲ!”

ಸ್ವಲ್ಪ ಸಮಯದ ನಂತರ ಮಾನಸಿಂಗನು, ಅಕಬರನ ಮಗ ಸಲೀಂ ಮತ್ತು ಪ್ರಚಂಡ ಸೈನ್ಯದೊಂದಿಗೆ ಮಹಾರಾಣಾ ಪ್ರತಾಪರ ಮೇಲೆ ಯುದ್ಧಕ್ಕಾಗಿ ಹೊರಟನು.

ಸುದ್ದಿ ತಿಳಿದ ಕೂಡಲೇ ಮಹಾರಾಣಾ ಪ್ರತಾಪನು ತತ್ಪರತೆಯಿಂದ ಅರಾವಲಿ ಪರ್ವತದ ಮೇಲಿಂದ ಕೆಳಗೆ ಬರುತ್ತಿದ್ದ ಶತ್ರು ಸೈನ್ಯದ ಮೇಲೆ ದಾಳಿ ಮಾಡಿ ಅವರ ಅಧಿಕಾಂಶ ಸೈನಿಕರನ್ನು ಮಣ್ಣುಪಾಲು ಮಾಡಿದರು. ಮಹಾರಾಣಾ ಪ್ರತಾಪರ ಕತ್ತಿಯಿಂದ ಸಲೀಂನ ವಧೆಯಾಗಬೇಕಿತ್ತು ಆದರೆ ಆ ಹೊಡೆತವು ಸಲೀಂನ ಆನೆಗೆ ಬಿತ್ತು ಮತ್ತು ಸಲೀಂನು ಉಳಿದನು.

ಮಹಾರಾಣಾ ಭಯದಿಂದ ಮಾನಸಿಂಗನು ಸೈನ್ಯದ ಹಿಂದೆ ಅವಿತುಕೊಂಡಿದ್ದನು. ಮಹಾರಾಣಾ ಪ್ರತಾಪನು ತನ್ನ ಹೊಳೆಯುವ ಕತ್ತಿಯ ಸಹಾಯದಿಂದ ಶತ್ರುಗಳ ಜಾಲದಿಂದ ಹೊರಬರಲು ಪ್ರಯತ್ನಿಸುತ್ತಿದ್ದನು. ಅಷ್ಟರಲ್ಲೇ ಶತ್ರುಸೈನಿಕರ ಹೊಡೆತದಿಂದ ಮಹಾರಾಣಾ ಪ್ರತಾಪರ ಕುದುರೆ ‘ಚೇತಕ’ನ ಕಾಲಿಗೆ ಪೆಟ್ಟಾಯಿತು.

ಇಂತಹ ಸ್ಥಿತಿಯಲ್ಲೂ ಸಹ ಆ ಸ್ವಾಮಿನಿಷ್ಟ ಕುದುರೆಯು ತನ್ನ ಸ್ವಾಮಿಯ ಪ್ರಾಣವನ್ನು ಉಳಿಸಲು ಶತ್ರುಗಳ ಜಾಲದಿಂದ ಹೊರಬರಲು ಪ್ರಯತ್ನಿಸುತ್ತಿತ್ತು. ಅಷ್ಟರಲ್ಲೇ ದಾರಿಯಲ್ಲಿ ಒಂದು ಸಣ್ಣನದಿ ಎದುರಾಯಿತು. ಚೇತಕ ಆ ಸ್ಥಿತಿಯಲ್ಲೇ ತನ್ನ ಎಲ್ಲಾ ಶಕ್ತಿಯನ್ನು ಸೇರಿಸಿ ಒಂದೇ ಜಿಗಿತಕ್ಕೆ ನದಿಯನ್ನು ದಾಟಿತು, ಆದರೆ ಹೃದಯ ಬಡಿತವು ನಿಂತಿದ್ದರಿಂದ ಚೇತಕ ಅಲ್ಲೇ ಪ್ರಾಣ ಬಿಟ್ಟಿತು.

ಮಹಾರಾಣಾ ಪ್ರತಾಪರು ಹಿಂದೆ ತಿರುಗಿ ನೋಡಿದಾಗ ಅಕಬರನ ಸೈನ್ಯದಲ್ಲಿ ಸೇರಿದ್ದ ಅವನ ತಮ್ಮ ಶಕ್ತಿಸಿಂಗನು ನಾಲ್ಕು-ಐದು ಮೊಗಲ ಸೈನಿಕರನ್ನು ಹೊಡೆಯುತ್ತಿದ್ದನು. ಇದನ್ನು ನೋಡಿ ಮಹಾರಾಣಾ ಪ್ರತಾಪರು ಆಶ್ಚರ್ಯಚಕಿತರಾದರು.

ಅಷ್ಟರಲ್ಲೇ ಆ ಸೈನಿಕರನ್ನು ಸಾಯಿಸಿದ ಶಕ್ತಿಸಿಂಗನು ಮಹಾರಾಣಾ ಪ್ರತಾಪರ ಬಳಿಗೆ ಬಂದು ಅವರನ್ನು ಆಲಂಗಿಸಿಕೊಂಡು, “ಅಣ್ಣಾ, ನಾನು ಮೊಗಲರ ಸೈನ್ಯದಲ್ಲಿದ್ದೀನಿ, ಆದರೆ ನಿಮ್ಮ ಶೌರ್ಯ, ಪರಾಕ್ರಮದಿಂದ ನೀವೇ ನನ್ನ ಆದರ್ಶರಾಗಿದ್ದೀರಿ. ನಾನು ನಿಮ್ಮ ಕುದುರೆಗಿಂತಲೂ ತುಚ್ಛವಾಗಿದ್ದೇನೆ.”

ಮೇವಾಡದ ಇತಿಹಾಸವನ್ನು ಬರೆದ ಕರ್ನಲ್ ಟಾಂಡ್ ಮಹಾರಾಣಾಾ ಪ್ರತಾಪರ ಬಗ್ಗೆ ಹೇಳುತ್ತಾ, “ಉತ್ಕಟ ಮಹತ್ವಾಕಾಂಕ್ಷಿ, ಶಾಸನ ನಿಪುಣತೆ ಮತ್ತು ಅಪರಿಮಿತ ಸಂಪತ್ತಿನ ಬಲದಿಂದ ಅಕಬರನು ದೃಢ ನಿಶ್ಚಯಿ, ಧೈರ್ಯಶಾಲಿ, ಉಜ್ವಲ ಕೀರ್ತಿಮಾನ ಮತ್ತು ಸಾಹಸಿ ಮಹಾರಾಣಾ ಪ್ರತಾಪರ ಆತ್ಮಬಲವನ್ನು ಬೀಳಿಸಲು ಪ್ರಯತ್ನಿಸಿದನು, ಆದರೆ ಅದು ವಿಫಲವಾಯಿತು”.

ಕೃಪೆ: ಹಿಂದೂ ಜಾಗೃತಿ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]