ದೊಡ್ಡಬಳ್ಳಾಪುರ: ತಾಲೂಕು ಹಂತದಲ್ಲಿ ಮಾ.21 ರಿಂದ ಏ.4 ರವರೆಗೆ ನಡೆಯಲಿರುವ 2024-25ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ತಾಲೂಕಿನ 14 ಕೇಂದ್ರಗಳಲ್ಲಿ ಆರಂಭವಾಗಿದೆ.
ತಾಲೂಕಿನ ಪ್ರೌಢಶಾಲೆಗಳಿಂದ ಹೊಸದಾಗಿ ಬಾಲಕರು 1921 ಮತ್ತು ಬಾಲಕಿಯರು 1879 ಸೇರಿ ಒಟ್ಟು 3800 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.
ಖಾಸಗಿಯಾಗಿ ಒಟ್ಟು -44 (ಗಂಡು-24 ಹೆಣ್ಣು-20) ಹಾಗೂ ಪುನಾವರ್ತಿತ ವಿದ್ಯಾರ್ಥಿಗಳು -99 (ಗಂಡು-75 ಹೆಣ್ಣು-24) ಒಟ್ಟಾರೆ ತಾಲೂಕಿನಲ್ಲಿ ಗಂಡು-2020 ಹೆಣ್ಣು- 1923 ಸೇರಿದಂತೆ ಒಟ್ಟು 3943 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ
ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ ಇದರಲ್ಲಿ ನಗರ ವ್ಯಾಪ್ತಿ-05 ಗ್ರಾಮೀಣ-09 ಕೇಂದ್ರಗಳಿವೆ.
ಎಲ್ಲಾ 14 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿನ ಇಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತಿದೆ.
ಪರೀಕ್ಷೆ ನಡೆಯುವ ಕೇಂದ್ರದ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಯಾವುದೇ ರೀತಿಯ ಎಸ್.ಟಿ.ಡಿ, ಜೆರಾಕ್ಸ್ ಟೈಪಿಂಗ್ ಮುಂತಾದವುಗಳನ್ನು ತೆರೆಯಲು ನಿಷೇಸಿದೆ ಪರೀಕ್ಷಾ ಕೇಂದ್ರಗಳಿಗೆ ಅನಕೃತ ವ್ಯಕ್ತಿಗಳ ಆಥವಾ ಗುಂಪು ಸೇರದಂತೆ ಪೊಲೀಸ್ ರಕ್ಷಣೆ ಪಡೆಯಲಾಗಿದೆ.
ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ,ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಸಹಾಯ ಪಡೆಯಲಾಗಿದೆ.
ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.
ಸಿಸಿಟಿವಿ ಕಿತ್ತೆಸೆದ ಕಿಡಿಗೇಡಿಗಳು
ಎಸ್ ಎಸ್ ಎಲ್ ಸಿ ಪರೀಕ್ಷೆ ದಿನವೇ ಕಿಡಿಗೇಡಿಗಳ ಅವಾಂತರ ಸೃಷ್ಟಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾ ಕೆತ್ತೆಸೆದಿದ್ದಾರೆ.
ಸರ್ಕಾರದ ಆದೇಶದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು ಕೊಠಡಿಗಳ ಬಾಗಿಲು ಮುರಿದು ಆರು ಸಿಸಿಟಿವಿ ಕ್ಯಾಮರಾಗಳನ್ನು ಕಿತ್ತೆಸೆದಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜ್, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
