Provisional schedule for SSLC and Second PUC exams 2026 announced

Doddaballapura: ಮೊದಲ ದಿನದ SSLC ಪರೀಕ್ಷೆ ಸುಗಮ: 27 ಮಂದಿ ಗೈರು

ದೊಡ್ಡಬಳ್ಳಾಪುರ: ಎಸ್ಎಸ್ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಗಳ ಮೊದಲ ದಿನದ ಪ್ರಥಮ ಭಾಷಾ ವಿಷಯದ ಪರೀಕ್ಷೆ ತಾಲೂಕಿನಲ್ಲಿ ಸುಗಮವಾಗಿ ನಡೆದಿದ್ದು, ತೂಬಗೆರೆ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ ಟಿವಿ ಕ್ಯಾಮರಾ ಕಿತ್ತು ಹಾಕಿರುವ ಅಹಿತಕರ ಪ್ರಕರಣ ಹೊರತುಪಡಿಸಿದರೆ ಯಾವುದೇ ಪರೀಕ್ಷಾ ಅಕ್ರಮಗಳ ಕುರಿತು ವರದಿಯಾಗಿಲ್ಲ.

ಶುಕ್ರವಾರ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 27 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3256 ಹೊಸ ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 3229 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಪೋಷಕರು ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಬಿಟ್ಟು , ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ನೋಂದಣಿ ಸಂಖ್ಯೆ ಹುಡುಕಿ, ಕೊಠಡಿಗಳಿಗೆ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಪರೀಕ್ಷಾ ಕೇಂದ್ರಗಳ 200 ಮೀ ಅಂತರದಲ್ಲಿ ನಿಷೇಧಾಜ್ಞೆ ಜಾರಿ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಝರಾಕ್ಸ್ ಅಂಗಡಿಗಳನ್ನು ಮುಚ್ಚುವಿಕೆ. ಪ್ರತಿ ಕೇಂದ್ರಕ್ಕೂ ವೈದ್ಯಕೀಯ ಸಿಬ್ಬಂದಿ ನೇಮಕ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಶ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ.

ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ತಲುಪಲು ಸಾರಿಗೆ ಸಂಸ್ಥೆಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳಂತೆ ಪರೀಕ್ಷೆಯ ಪಾವಿತ್ರ್ಯತೆ ಮತ್ತು ಪಾರದರ್ಶಕತೆಯಿಂದ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕ್ಯಾಮರಾ ಕಿತ್ತ ಕಿಡಿಗೇಡಿಗಳು

ತಾಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳನ್ನು ಕಿಡಿಗೇಡಿಗಳು ಕಿತ್ತು ಹಾಕಿರುವ ಘಟನೆ ನಡೆದಿದ್ದು, ಪರೀಕ್ಷಾ ಕೇಂದ್ರದಲ್ಲಿ ಕೆಲ ಕಾಲ ಆತಂಕ ಉಂಟಾಗಿತ್ತು.

ತೂಬಗೆರೆಯ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ನಡೆಸಲು ಸಿದ್ದತೆಗಳನ್ನು ನಡೆಸಲಾಗಿತ್ತು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗಳಲ್ಲಿಯೂ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿತ್ತು.

ಶುಕ್ರವಾರ ಪರೀಕ್ಷಾ ಸಿಬ್ಬಂದಿ ಬೆಳಿಗ್ಗೆ ಬಂದು ನೋಡಿದಾಗ ಸಿಸಿಟಿವಿ ಕ್ಯಾಮರಾಗಳು ಕೆಳಗಡೆ ಬಿದ್ದಿರುವುದು ಕಂಡಿದೆ. ಗುರುವಾರ ರಾತ್ರಿ ಯಾರೋ ಕಿಡಿಗೇಡಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಶಾಲೆಯ ಗೇಟ್ ಮುರಿದು ಒಳ ನುಗ್ಗಿ, ಕೊಠಡಿಗಳಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳನ್ನು ಕಿತ್ತುಹಾಕಿದ್ದಾರೆ.

10 ಕೊಠಡಿಗಳಿಂದ 14 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಇದರಲ್ಲಿ 6 ಹಾನಿಯಾಗಿದ್ದವು. ಕೂಡಲೇ ಪರೀಕ್ಷಾ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿ ಪರಿಶೀಲನೆ ನಡೆಸಿ ಸಿಸಿಟಿವಿ ಕ್ಯಾಮರಾಗಳನ್ನು ಪುನಃ ಅಳವಡಿಸಿ ಪರೀಕ್ಷೆ ಸುಗಮವಾಗಿ ನಡೆಯುವಂತೆ ಅನುವು ಮಾಡಿಕೊಡಲಾಯಿತು.

ಡಿ.ಸಿ. ಭೇಟಿ

ಸ್ಥಳಕ್ಕೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಕ್ಷೇತ್ರ ಶಿಕ್ಷಣಾಕಾರಿ ಸೈಯೀದಾ ಅನೀಸ್, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಭೇಟಿ ನೀಡಿ ಪರಿಶೀಲಿಸಿದರು.

ಕೃತ್ಯದಲ್ಲಿ ಭಾಗಿಯಾಗಿದ್ದ ಕಡಿಗೇಡಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಸಿಟಿವಿ ಕ್ಯಾಮರಾಗಳನ್ನು ಕಿತ್ತು ಹಾಕಿರುವ ಕಿಡಿಗೇಡಿಗಳ ಕುರುಹುಗಳ ಪತ್ತೆಯಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!