Space for setting up jewelery park near Devanahalli: MB Patila

ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಆಭರಣ ಉದ್ಯಮಿಗಳಿಗೆ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಆಭರಣ ರಫ್ತಿಗೆ ಉತ್ತೇಜನ ನೀಡಲು ಸರ್ಕಾರ ಒತ್ತು ನೀಡಲಿದ್ದು, ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಜಾಗ ನೀಡಲು ರಾಜ್ಯ ಸರ್ಕಾರ ಮುಕ್ತವಾಗಿದ್ದು, ಇದನ್ನು ಆಭರಣ ಉದ್ಯಮಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ (MB Patila) ಶುಕ್ರವಾರ ಹೇಳಿದರು.

ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಆಭರಣ ಪ್ರದರ್ಶನ ಮತ್ತು ವಾಣಿಜ್ಯ ಮೇಳಕ್ಕೆ ಅವರು ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಆಭರಣಗಳ ರಫ್ತಿಗೆ ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಮುಂದಾಗಬೇಕು ಎಂದರು.

ಸುಸ್ಥಿರತೆಗೆ ಒತ್ತು ನೀಡುವ ದಿಸೆಯಲ್ಲಿ ‘ನೆಟ್ ಜೀರೋ ಜ್ಯುವೆಲ್ಲರಿ ಪಾರ್ಕ್’ ನಿರ್ಮಿಸಲು ಹಿತಾಸಕ್ತಿದಾರರು ಗಮನ ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

Space for setting up jewelery park near Devanahalli: MB Patila
Space for setting up jewelery park near Devanahalli: MB Patila

ಇದೇ 24ರವರೆಗೆ ನಡೆಯಲಿರುವ ದೇಶದ ಮೂರನೇ ಅತಿದೊಡ್ಡ ಚಿನ್ನಾಭರಣ ಮೇಳವನ್ನು ಮುಂಬರುವ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ದಿ ಜೆಮ್ ಅಂಡ್ ಜ್ಯೂವೆಲರಿ ಎಕ್ಸ್ಪೋರ್ಟ್ ಪ್ರಮೋಶನ್ ಕೌನ್ಸಿಲ್ ಏರ್ಪಡಿಸಿದೆ.

ವಿಶ್ವ ದರ್ಜೆಯ ಮೂಲಸೌಕರ್ಯ, ಪುರೋಗಾಮಿ ನೀತಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರನ್ನು ಹೊಂದಿರುವ ರಾಜ್ಯವು ಆಭರಣ ತಯಾರಿಕೆ ಮತ್ತು ರಫ್ತು ವಹಿವಾಟಿಗೆ ಪ್ರಶಸ್ತ ತಾಣವಾಗಿದೆ.

ಇದಕ್ಕೆ ಪೂರಕವಾಗಿ, ಉಡುಪಿಯಲ್ಲಿ ಇರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ ಅಂಡ್ ಜ್ಯೂವೆಲ್ಲರಿ ಸಂಸ್ಥೆಯು ಆಭರಣ ಕುಶಲಕರ್ಮಿಗಳನ್ನು ಸಜ್ಜುಗೊಳಿಸುತ್ತಿದೆ ಎಂದು ಸಚಿವರು ವಿವರಿಸಿದರು.

ದೇಶದಲ್ಲಿ ವಾರ್ಷಿಕ 32 ಬಿಲಿಯನ್ ಡಾಲರ್ ಮೊತ್ತದ ಆಭರಣ ವಹಿವಾಟು ನಡೆಯುತ್ತಿದೆ. ಮುಖ್ಯವಾಗಿ ಇಲ್ಲಿಂದ ಅಮೆರಿಕ, ಅರಬ್ ಸಂಯುಕ್ತ ಸಂಸ್ಥಾನ, ರಷ್ಯಾ, ಸಿಂಗಪುರ್ ಮತ್ತು ಹಾಂಕಾಂಗ್ ಮಾರುಕಟ್ಟೆಗೆ ಹೆಚ್ಚಿನ ಆಭರಣಗಳನ್ನು ಕಳುಹಿಸಲಾಗುತ್ತಿದೆ.

ಉಡುಪಿಯಲ್ಲಿರುವ ಕಾಮನ್ ಫೆಸಿಲಿಟಿ ಸೆಂಟರ್ ಐದು ವರ್ಷಗಳ ಹಿಂದೆ 55 ವಿದ್ಯಾರ್ಥಿಗಳನ್ನು ಹೊಂದಿತ್ತು. ಈಗ ಅಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರಿಗೆ ಹೊಸ ಬಗೆಯ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಯುವಜನರಿಗೆ ಆದ್ಯತೆ ನೀಡಲಾಗಿದೆ ಎಂದು ಪಾಟೀಲ ಅವರು ತಿಳಿಸಿದರು.

ಪ್ರಸ್ತುತ ಮೇಳದಲ್ಲಿ ಆಭರಣ ವಲಯದ 80 ಪ್ರಮುಖ ಕಂಪನಿಗಳು ಪಾಲ್ಗೊಂಡಿವೆ. ಇವು ಹೊಸ ಬಗೆಯ ಯಂತ್ರೋಪಕರಣಗಳು, ತಂತ್ರಜ್ಞಾನ ಮತ್ತು ಪ್ಯಾಕೇಜಿಂಗ್ ಬಗ್ಗೆ ಗಮನ ಕೇಂದ್ರೀಕರಿಸಿವೆ. ಜತೆಗೆ ಭಾರತದ 15 ಸಾವಿರ ಮತ್ತು ವಿದೇಶಗಳ 300ಕ್ಕೂ ಹೆಚ್ಚು ಆಭರಣ ಖರೀದಿದಾರರು ಭಾಗವಹಿಸುತ್ತಿದ್ದಾರೆ.

ಈಗ ಹೊಸ ಬಗೆಯ ವಿನ್ಯಾಸಗಳ ಆಭರಣಗಳಿಗೆ ಇರುವ ಬೇಡಿಕೆಯನ್ನು ತಿಳಿಸಿದರೆ, ಅಂತಹ ವಿನ್ಯಾಸಗಳನ್ನು ಅಕ್ಷಯ ತೃತೀಯ ವೇಳೆಗೆ ಸಿದ್ಧಪಡಿಸಿ, ವ್ಯಾಪಾರಿಗಳಿಗೆ ಪೂರೈಸಲಾಗುವುದು ಎಂದರು.

ರಾಜ್ಯವು ಉದ್ಯಮಸ್ನೇಹಿ ಮತ್ತು ರಫ್ತುಕೇಂದ್ರಿತ ಹೊಸ ಕೈಗಾರಿಕಾ ನೀತಿಯನ್ನು ಹೊಂದಿದೆ. ವಿದೇಶಿ ಹೂಡಿಕೆಯಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ಕರ್ನಾಟಕವು ಜಿ.ಎಸ್.ಟಿ. ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಇದಲ್ಲದೆ, ಉದ್ಯಮ ಬೆಳವಣಿಗೆಗೆ ಸಂಬಂಧಿಸಿದ ಇನ್ನೂ ಕೆಲವಾರು ಸೂಚ್ಯಂಕಗಳಲ್ಲಿ ರಾಜ್ಯವು ಮೇಲ್ಪಂಕ್ತಿಯಲ್ಲಿದೆ.

2033ರ ವೇಳೆಗೆ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಲಿದ್ದು, ಅದಕ್ಕಾಗಿ ಈಗಾಗಲೇ ಕಾರ್ಯ ಆರಂಭವಾಗಿದೆ. ಹೀಗಾಗಿ, ಜವಳಿ ಉದ್ದಿಮೆದಾರರು ರಾಜ್ಯದಲ್ಲಿ ಹೂಡಿಕೆ ಮಾಡುವತ್ತ ಗಮನ ಹರಿಸಬೇಕು.

ಈ ವಲಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನೂ ಸರಕಾರವು ಒದಗಿಸಲಿದೆ ಎಂದು ಬೆಂಬಲದ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಅಧ್ಯಕ್ಷ ಕಿರೀಟ್ ಭನ್ಸಾಲಿ, ಸಂಚಾಲಕ ನೀರವ್ ಭನ್ಸಾಲಿ, ದಕ್ಷಿಣ ಭಾರತದ ಅಧ್ಯಕ್ಷ ಮಹೇಂದ್ರ ತಾಯಲ್, ಕಾರ್ಯಕಾರಿ ನಿರ್ದೇಶಕ ಸವ್ಯಸಾಚಿ ರಾಯ್, ಚೇತನ್ ಮೆಹತಾ, ಶ್ರೀಕಾಂತ್ ಕಾರಿ, ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಪ್ರಮುಖ ಆಭರಣೋದ್ಯಮಿಗಳಾದ ಬಿ ಎ ರಮೇಶ್, ಎ ಬಿ ಎಸ್ ಸಂಜಯ್ ಉಪಸ್ಥಿತರಿದ್ದರು.

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!