Suspension of BJP MLAs is condemnable: R. Ashoka

ಶಾಸಕರನ್ನು ಅಮಾನತು ಮಾಡಿರುವುದು ಖಂಡನೀಯ: ಆರ್‌.ಅಶೋಕ

ಬೆಂಗಳೂರು: ನ್ಯಾಯಕ್ಕಾಗಿ ಆಗ್ರಹಿಸಿದ ಶಾಸಕರನ್ನು ಅಮಾನತು ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್‌ನ ದುರುಳ ನೀತಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

Guarantee scheme
ಎನ್ ವಿಶ್ವನಾಥ್

ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸಚಿವ ರಾಜಣ್ಣ ಅವರು ಹನಿಟ್ರ್ಯಾಪ್‌ ಆಗಿದೆ ಎಂದಾಗ, ಕಾಂಗ್ರೆಸ್‌ನ ಇತರೆ ಸಚಿವರಿಗೆ, ಮುಖ್ಯಮಂತ್ರಿಗೆ ಅದು ಅಶ್ಲೀಲ ಎಂದು ಅನ್ನಿಸಲೇ ಇಲ್ಲ.

ಹಿಂದೆ ಶಾಸಕರು ಮೊಬೈಲ್‌ ನೋಡಿದ್ದಕ್ಕೆ ಕಾಂಗ್ರೆಸ್‌ನವರು ಎದ್ದು ಕುಣಿದಿದ್ದರು. ಆದರೆ ಹನಿಟ್ರ್ಯಾಪ್‌ ಅಶ್ಲೀಲ ಎಂದು ಅನಿಸಿಲ್ಲ. ಸದನಕ್ಕೆ ಗೌರವ ಇರಲಿ ಎಂದು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದೇವೆ. ಹನಿಟ್ರ್ಯಾಪ್‌ ಆಗಿರುವುದು ತಮ್ಮ ಪಕ್ಷದ ನಾಯಕರಿಂದಲೇ ಎಂದು ಹೇಳಿದರೂ ಸರ್ಕಾರ ಸುಮ್ಮನಿದೆ ಎಂದು ದೂರಿದರು.

ಬಿಜೆಪಿ ಶಾಸಕರು ನ್ಯಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರ ಮೇಲೆ ಸ್ಪೀಕರ್‌ ಯು.ಟಿ.ಖಾದರ್‌ ಗದಾ ಪ್ರಹಾರ ಮಾಡಿರುವುದು ಯಾವ ನ್ಯಾಯ? ಯಾವ ಮುಖ ಇಟ್ಟುಕೊಂಡು ಸಚಿವರು ಸದನಕ್ಕೆ ಬಂದಿದ್ದಾರೆ? 18 ಶಾಸಕರನ್ನು ಅಮಾನತು ಮಾಡಿರುವುದು ಅನ್ಯಾಯ.

ಸ್ಪೀಕರ್‌ಗೆ ನಾವು ಯಾವುದೇ ಅನ್ಯಾಯ ಮಾಡಿಲ್ಲ. ನಾವು ನ್ಯಾಯ ಕೇಳಿದ್ದೇವೆ. ಸ್ಪೀಕರ್‌ರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಇದು ಕಾಂಗ್ರೆಸ್‌ನ ದುರುಳ ನೀತಿ. ಅವರು ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತಾರೆ ಎಂದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸುತ್ತೇವೆ. ಇದು ಸದನಕ್ಕೆ ಅಗೌವರ. ನ್ಯಾಯಾಂಗ ತನಿಖೆಗೆ ಆಗ್ರಹಿಸುವುದು ಗೂಂಡಾಗಿರಿ ಆಗುತ್ತದೆಯೇ? ಕಾಂಗ್ರೆಸ್‌ನ ಏಜೆಂಟರಂತೆ ಸ್ಪೀಕರ್‌ ಕೆಲಸ ಮಾಡುತ್ತಿದ್ದಾರೆ ಎಂದರು.

ಗುತ್ತಿಗೆ ಮೀಸಲಾತಿ ಮಸೂದೆ ಅಸಂವಿಧಾನಿಕ

ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮಸೂದೆ ಸಂವಿಧಾನ ವಿರೋಧಿ. ಧರ್ಮದ ಆಧಾರದ ಮೇಲೆ ಯಾವುದೇ ರೀತಿಯ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಅಂಬೇಡ್ಕರ್ ಅವರ ಸಂವಿಧಾನ ಎಲ್ಲ ಧರ್ಮಗಳು ಒಟ್ಟಿಗೆ ಹೋಗಬೇಕು ಎನ್ನುವ ಆಶಯ ಹೊಂದಿದ್ದರೆ, ಈ ಮಸೂದೆ ಸಮಾಜವನ್ನ ಒಡೆಯುವ ಬಿಲ್ ಆಗಿದೆ.

ಕಾಂಗ್ರೆಸ್ ಪಕ್ಷ ಈಗಾಗಲೇ ಒಂದು ಬಾರಿ ದೇಶವನ್ನ ವಿಭಜನೆ ಮಾಡಿದೆ. ಈಗ ವೋಟಿನ ರಾಜಕಾರಣಕ್ಕೆ ಮತ್ತೂಮ್ಮೆ ಒಂದು ಸಮುದಾಯದ ಓಲೈಕೆ ಮಾಡಲು ಹೊರಟಿದೆ.

ಈ ಮಸೂದೆ ಹಿಂದೂಗಳ ಭಾವನೆಗೆ ದಕ್ಕೆ ತರುವುದರ ಜೊತೆಗೆ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ಸಮುದಾಯಗಳಿಗೆ ಸೇರಿದ ಗುತ್ತಿಗೆದಾರರ ಹಕ್ಕನ್ನು ಕಸಿದುಕೊಳ್ಳಲ್ಲಿದೆ ಎಂದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!