Vijayendra appeal to Withdraw Suspension Order of 18 Legislators

ಶಾಸಕರ ಅಮಾನತು.. ಸ್ಪೀಕರ್‌ ಅವರಿಂದ ಪ್ರಜಾಪ್ರಭುತ್ವ ವಿರೋಧಿ ನಡೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸುವ ಕುರಿತ ಗೌರವಾನ್ವಿತ ಸ್ಪೀಕರ್ ಅವರ ನಿರ್ಧಾರವು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಆಡಳಿತ ಪಕ್ಷದ ಹಿರಿಯ ಸಚಿವರಾದ ರಾಜಣ್ಣ ಅವರು ಸದನದ ಒಳಗೆ ಬಂದು ಅಂಗಲಾಚಿದ್ದಾರೆ. ಹನಿಟ್ರ್ಯಾಪ್ ಗೆ ಒಳಗಾಗಿದ್ದೇನೆ, ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ರಾಜಕಾರಣಿಗಳು ಹನಿಟ್ರ್ಯಾಪ್‍ಗೆ ಒಳಗಾಗಿದ್ದಾರೆ ಎಂದು ಬಹಿರಂಗವಾಗಿ ಸದನದಲ್ಲಿ ತಿಳಿಸಿದ ಸಂದರ್ಭದಲ್ಲಿ ಆ ಸಚಿವರಿಗೆ ರಕ್ಷಣೆ ಕೊಡುವ ಕರ್ತವ್ಯ ಸಭಾನಾಯಕರಾದ ಮುಖ್ಯಮಂತ್ರಿಗಳದು; ಅದೇ ರೀತಿ ಮಾನ್ಯ ಸಭಾಪತಿಗಳದ್ದು ಎಂದರು.

ಸದನದ 224 ಶಾಸಕರ ಮೇಲೂ ಕಳಂಕ ಬಂದಿದೆ. ಈ 224 ಶಾಸಕರಿಗೆ ರಕ್ಷಣೆ ಕೊಡುವ ಸ್ಥಾನದಲ್ಲಿ ಸಭಾಧ್ಯಕ್ಷರು ಕುಳಿತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ವಿಪಕ್ಷವಾಗಿ ನಾವು ಸಚಿವರ ಪರವಾಗಿ ಹೋರಾಟ ಮಾಡಿದರೆ ನಮ್ಮನ್ನು ಕತ್ತು ಹಿಡಿದು ಹೊರದಬ್ಬುವ ಕೆಲಸ ಮಾಡಿದ್ದು ಇದು ಖಂಡಿತ ಸರಿಯಲ್ಲ ಎಂದು ಖಂಡಿಸಿದರು.

ಮುಖ್ಯಮಂತ್ರಿಗಳು ರಕ್ಷಣೆಯ ಹೊಣೆಗಾರಿಕೆ ವಹಿಸಬೇಕಿತ್ತು. ನೀವೇ ಸಚಿವರ ರಕ್ಷಣೆಗೆ ಬರಬೇಕಿತ್ತು. ರಕ್ಷಣೆ ವಿಚಾರಕ್ಕೆ ಪ್ರತಿಭಟನೆ ಮಾಡಿದರೆ ನಮ್ಮ ಶಾಸಕರನ್ನು ಎತ್ತಿ ಹಾಕುವ ಕೆಲಸ ಮಾಡಿದ್ದಾರೆ. ಇದು ಖಂಡಿತ ಸರಿಯಲ್ಲ ಎಂದು ಆಕ್ಷೇಪಿಸಿದರು.

ದೇಶದ ಮುಂದೆ ಶಾಸಕರ ಗೌರವ ಹರಾಜಾಗುವಂತಾಗಿದೆ. ಅಧಿಕಾರದ ಮದ ಎಲ್ಲಿಗೆ ಬಂದಿದೆ ಎಂದರೆ ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಇದರ ಪರಿಣಾಮವಾಗಿ ಸಚಿವರು, ಶಾಸಕರನ್ನು ಬೀದಿಗೆ ತರುವ ಕೆಲಸವನ್ನು ಆಡಳಿತ ಪಕ್ಷದವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದಲಿತ, ಪರಿಶಿಷ್ಟ ಪಂಗಡದ ಸೇರಿದ ಸಚಿವರ ಮಾನ ಹರಾಜಾಗುವ ಕೆಲಸ ನಡೆದಿದ್ದು, ಅವರ ರಕ್ಷಣೆಗೆ ಬರುವ ತಾಕತ್ತಿಲ್ಲವೇ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದರು. ಹಿಂದೆ ಇವರೇ ಮುಖ್ಯಮಂತ್ರಿ ಆಗಿದ್ದಾಗ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆಗೆ ಮುಸ್ಲಿಂ ಪುಡಾರಿಗಳು ಬೆಂಕಿ ಹಚ್ಚಿದ್ದರು. ಆದರೆ, ಆ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ರಕ್ಷಣೆಗೆ ಅಂದಿನ ಮುಖ್ಯಮಂತ್ರಿಗಳು ಬಂದಿರಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅದೇ ರೀತಿ ಮತ್ತೊಮ್ಮೆ ಪುನರಾವರ್ತನೆಯಾಗಿದೆ. ದಲಿತರ ಬಗ್ಗೆಯೂ ಕಾಳಜಿ ಇಲ್ಲ; ಪರಿಶಿಷ್ಟ ಪಂಗಡದವರ ಬಗ್ಗೆ ಕಾಳಜಿ ಇಲ್ಲ. ಕೇವಲ ಮುಸಲ್ಮಾನರ ಹಿಂದೆ ಹೊರಟ ಮುಖ್ಯಮಂತ್ರಿಗಳು ಸದನದಲ್ಲಿ ಶಾಸಕರು, ಸಚಿವರ ರಕ್ಷಣೆಗೆ ಬರುತ್ತಿಲ್ಲವೆಂದಾದರೆ ಇಂಥ ಮುಖ್ಯಮಂತ್ರಿಗಳು ಆ ಸ್ಥಾನದಲ್ಲಿ ಮುಂದುವರಿಯಬೇಕೇ ಎಂದು ಯೋಚಿಸಬೇಕು ಎಂದರು.

ನಿನ್ನೆ ದಿನ ಸದನ ನಡೆಯುವ ಸಂದರ್ಭದಲ್ಲಿ ಯಾರು ಚೀಟಿ ಕೊಟ್ಟರು? ಎಲ್ಲವೂ ತನಿಖೆ ಮಾಡಲಿ. ಬಿಜೆಪಿ- ಜೆಡಿಎಸ್ ಪಕ್ಷಗಳು ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸುತ್ತೇವೆ. ಅಲ್ಲದೆ ಗೌರವಾನ್ವಿತ ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ ಎಂದು ಪ್ರಕಟಿಸಿದರು.

ಆಡಳಿತ ಪಕ್ಷದ ಸಚಿವರ ರಕ್ಷಣೆಗೆ ಬಾರದ ಮುಖ್ಯಮಂತ್ರಿಗಳ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಮುಖ್ಯಮಂತ್ರಿಗಳ ನಡೆಯೂ ಪ್ರಶ್ನಾರ್ಹ ಎಂದು ಅವರು ತಿಳಿಸಿದರು. ಕರ್ನಾಟಕದ ಸಚಿವರ ಹನಿಟ್ರ್ಯಾಪ್ ಕುರಿತ ಹೇಳಿಕೆ ದೇಶವ್ಯಾಪಿ ಚರ್ಚೆಗೆ ಒಳಪಡುತ್ತಿದೆ ಎಂದು ವಿವರಿಸಿದರು.

ನಡೆದಿರುವುದು ಸತ್ಯ ಎಂದು ಸತೀಶ್ ಜಾರಕಿಹೊಳಿ ಅವರೂ ಹೇಳಿಕೆ ಕೊಟ್ಟಿದ್ದಾರೆ. ಹನಿಟ್ರ್ಯಾಪ್ ಮಾಡಿದ ಶಾಸಕರು, ಸಚಿವರ ಹೆಸರು ಬಹಿರಂಗಪಡಿಸಲು ಮುಖ್ಯಮಂತ್ರಿಗಳು ಸೂಚಿಸಬೇಕಿತ್ತು. ತನಿಖೆಗೆ ಆದೇಶಿಸುವುದಾಗಿ ಹೇಳುವ ಧೈರ್ಯ ತೋರಿಸಬೇಕಿತ್ತು ಎಂದು ಸವಾಲು ಹಾಕಿದರು. ಮುಖ್ಯಮಂತ್ರಿಗಳು ಆ ಧೈರ್ಯ ತೋರಿಲ್ಲ ಎಂದು ಟೀಕಿಸಿದರು.

ರಾಜ್ಯದ ಜನರ ಮುಂದೆ ಮುಖ್ಯಮಂತ್ರಿಗಳ ಬಂಡವಾಳ ಬಯಲಾಗಿದೆ. ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಮುಂದೆ ಬೆತ್ತಲಾಗಿದೆ ಎಂದು ತಿಳಿಸಿದರು. ರಾಜ್ಯದ ತೆರಿಗೆ ಹಣವನ್ನು ಒಂದು ಧರ್ಮಕ್ಕೆ ಸೀಮಿತವಾಗಿ ಹಂಚುವುದಾದರೆ ಇದನ್ನು ನೋಡಿಕೊಂಡು ಸುಮ್ಮನೆ ಕೂರಬೇಕೇ ಎಂದು ಕೇಳಿದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!