Vijayendra demands judicial or CBI probe into honeytrap

ಹನಿಟ್ರ್ಯಾಪ್ ಕುರಿತು ನ್ಯಾಯಮೂರ್ತಿ ಅಥವಾ ಸಿಬಿಐ ತನಿಖೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಹನಿಟ್ರ್ಯಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಅವರು ಆಗ್ರಹಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ಪ್ರಮುಖರು ಹನಿಟ್ರ್ಯಾಪ್‍ಗೆ ಒಳಗಾದ ಕುರಿತು ತಿಳಿಸಿ ತನಿಖೆ ಆಗಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಇದು ಬಹಳ ಗಂಭೀರ ವಿಚಾರ ಎಂದು ತಿಳಿಸಿದ ಗೃಹ ಸಚಿವರು, ಇದರ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದರು.

ಸದನ ಮುಗಿದ ಬಳಿಕ ಹೊರಕ್ಕೆ ಬಂದ ಗೃಹ ಸಚಿವರು, ತಮಗೆ ಅಧಿಕೃತವಾಗಿ ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದಿದ್ದಾರೆ ಎಂದು ವಿವರಿಸಿದರು.
ಅಧಿಕಾರಿಗಳು ಮಾಹಿತಿ ಕೊಟ್ಟ ಮೇಲೆ ಅದರ ಕುರಿತು ಆಲೋಚಿಸುವುದಾಗಿ ತಿಳಿಸಿ ದ್ವಂದ್ವ ನೀತಿ ಪ್ರದರ್ಶನ ಮಾಡಿದ್ದಾರೆ.

ನಾವು ಸದನದಲ್ಲಿ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯುವ ಪ್ರಯತ್ನ ಮಾಡಿದ್ದೇವೆ. ಅವರು ಯಾವುದೇ ರೀತಿ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ಟೀಕಿಸಿದರು. ಇದೊಂದು ಗಂಭೀರ ಪ್ರಕರಣ. ಇದು ಸದನದ 224 ಶಾಸಕರ, ರಾಜ್ಯದ ಗೌರವದ ಪ್ರಶ್ನೆ. ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಪ್ರತಿಭಟಿಸುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ನೀಡಿದ ಬಗ್ಗೆ ಮುಖ್ಯಮಂತ್ರಿಗಳು ಹೇಳಿಕೆ ಕೊಟ್ಟಿದ್ದಾರೆ. ಇದರ ವಿರುದ್ಧ ನಾವು ರಾಜ್ಯಾದ್ಯಂತ ಜನಾಂದೋಲನಕ್ಕೆ ಕರೆ ಕೊಡಲಿದ್ದೇವೆ ಎಂದು ಪ್ರಕಟಿಸಿದರು.

ಬಿಜೆಪಿ- ಜೆಡಿಎಸ್ ಪಕ್ಷಗಳು ಮುಸಲ್ಮಾನರ ವಿರೋಧಿ ಅಲ್ಲ; ಆದರೆ, ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಹಣಕಾಸಿನ ಸಚಿವರಾದ ಮುಖ್ಯಮಂತ್ರಿಗಳು ನಡೆದುಕೊಳ್ಳುತ್ತಿದ್ದಾರೆ. ಇದನ್ನು ನಾವು ಧಿಕ್ಕರಿಸುತ್ತಿದ್ದೇವೆ ಎಂದು ತಿಳಿಸಿದರು.

ವಿದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸಲ್ಮಾನರಿಗೆ ಕೊಡುವ ಮೊತ್ತವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೂಗಳಲ್ಲಿ ಬಡವರಿಲ್ಲವೇ? ಅವರು ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋದರೆ ಅವರಿಗೆ ಹಣಕಾಸಿನ ಅವಶ್ಯಕತೆ ಇಲ್ಲವೇ? ಎಂದು ಕೇಳಿದರು. ಮುಸಲ್ಮಾನ ಹೆಣ್ಮಕ್ಕಳ ಆತ್ಮರಕ್ಷಣೆಗಾಗಿ ಬಜೆಟ್‍ನಲ್ಲಿ ಹಣ ಇಟ್ಟಿದ್ದಾರೆ. ರಾಜ್ಯದಲ್ಲಿ ಲವ್ ಜಿಹಾದ್‍ಗೆ ಬಲಿ ಆಗುತ್ತಿರುವುದು ಹಿಂದೂ ಹೆಣ್ಮಕ್ಕಳೇ ಹೊರತು ಮುಸ್ಲಿಂ ಹೆಣ್ಮಕ್ಕಳಲ್ಲ ಎಂದು ಗಮನ ಸೆಳೆದರು.

ಮುಸಲ್ಮಾನರ ಓಲೈಕೆ ಮೂಲಕ ಧರ್ಮಗಳ ನಡುವೆ ಬೆಂಕಿ ಹಚ್ಚಲು ಮುಖ್ಯಮಂತ್ರಿಗಳು ಹೊರಟಿದ್ದು, ಇದನ್ನು ನಾವು ವಿರೋಧಿಸುತ್ತೇವೆ. ಈ ಎಲ್ಲ ವಿಚಾರಗಳನ್ನು ಮುಂದಿಟ್ಟು ಬಿಜೆಪಿ- ಜೆಡಿಎಸ್ ರಾಜ್ಯವ್ಯಾಪಿ ಹೋರಾಟ ಮಾಡಲಿದೆ. ಓಲೈಕೆ ರಾಜಕಾರಣಕ್ಕೆ ಇತಿಶ್ರೀ ಹಾಕಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ಸಿನವರು ಹನಿಟ್ರ್ಯಾಪ್ ಮುಚ್ಚಿ ಹಾಕದಿರಲಿ- ಅಶೋಕ್

ವಿಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಹನಿಟ್ರ್ಯಾಪ್ ವಿಚಾರದಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ, ಸಚಿವರ ಹೆಸರು ತಂದಿದ್ದಾರೆ. ಇದರ ಜುಡಿಷಿಯಲ್ ತನಿಖೆ ಅಥವಾ ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಕೇಂದ್ರದ ನಾಯಕರ ಫೋನ್ ಬಂತೆಂದು ಇದನ್ನು ಮುಚ್ಚಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಬಾರದು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ತಾವು ಮುಸ್ಲಿಮರಿಗೆ ಶೇ 4 ಮೀಸಲಾತಿ ಪರ ಇರುವುದಾಗಿ, ಹಲಾಲ್ ಬಜೆಟ್ ಪರ ಇದ್ದೇನೆ ಎಂಬುದಾಗಿ ಹಾಗೂ ಮುಸ್ಲಿಮರಿಗೆ ರಾಜ್ಯವನ್ನೇ ಮಾರಿ ಬಿಡುತ್ತೇನೆ ಎಂದಿದ್ದಾರೆ. ಟೋಪಿ ಹಾಕಿಲ್ಲ ಎಂಬುದು ಬಿಟ್ಟರೆ ಸಿದ್ದರಾಮಯ್ಯನವರು ಮುಸಲ್ಮಾನರ ಬಜೆಟ್ ಮಂಡಿಸಿದ್ದಾರೆ ಎಂದು ಟೀಕಿಸಿದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!