ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

Despite earlier suspension, MLAs are not aware: Speaker UT Khader

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು ವಿಧಾನಸಭೆ ಸ್ಪೀಕರ್ ಸಭಾಪತಿ ಯುಟಿ ಖಾದರ್ (UT Khader) ಸಮರ್ಥಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಸಭಾಪತಿ ಪೀಠದ ವಿರುದ್ಧ ಅನುಚಿತವಾಗಿ ವರ್ತಿಸಿದ ಕಾರಣ 18 ಶಾಸಕರ ಅಮಾನತಿನ ತೀರ್ಮಾನ ನೀಡಲಾಗಿದೆ. ಸದನಕ್ಕಿಂತ ದೊಡ್ಡದು ಯಾವುದು ಇಲ್ಲ. ಸದನ ಪಾವಿತ್ರ್ಯತೆ ಬಹಳ ಮುಖ್ಯ. ಗೆದ್ದು ಬಂದಾಗ ಪ್ರತಿಜ್ಞೆ ಮಾಡಿರುತ್ತೇವೆ. ಜನರ ಪರವಾಗಿ ಇರುತ್ತೇವೆ ಅಂತ ಪ್ರತಿಜ್ಞೆ ಮಾಡಿರ್ತೇವೆ ಎಂಬುದ ಮರೆತು ವರ್ತಿಸಬಾರದು. ಅವರ ನಡುವಳಿಕೆಯನ್ನು ಸರಿಪಡಿಸುವ ಸಲುವಾಗಿ ಈ ಆದೇಶವೇ ಹೊರತು ಸರ್ಕಾರದ ಒತ್ತಡಕ್ಕೆ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಶಾಸಕರು ಸದನದ ಬಾವಿಗೆ ಪ್ರವೇಶಿಸುತ್ತಿದ್ದಂತೆ ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದರು ಮತ್ತು ಸ್ಪೀಕರ್ ಕುರ್ಚಿಯ ಮುಂದೆ ಕಾಗದಗಳನ್ನು ಹರಿದು ಎಸೆದರು.

ಪೀಠಕ್ಕೆ ಅಗೌರವ ತೋರಿದಾಗ ಸಂವಿಧಾನದ ಗೌರವ ಕಾಪಾಡುವುದು ನನ್ನ ಕರ್ತವ್ಯ. ನಾನು ಸಂವಿಧಾನದ ಪರವಾಗಿ ನಿಂತಿದ್ದೇನೆ ಮತ್ತು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಡೆದದ್ದನ್ನೆಲ್ಲ ರಾಜ್ಯದ ಜನತೆ ನೋಡಿದ್ದಾರೆ. 

ನಾನು ವಿರೋಧ ಪಕ್ಷದ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶ ನೀಡಿದ್ದೇನೆ ಮತ್ತು ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷಕ್ಕೆ ಒಲವು ತೋರದೆ ತಟಸ್ಥವಾಗಿ ವರ್ತಿಸಿದೆ.

ಸಂವಿಧಾನದ ಅಡಿಯಲ್ಲಿ ಸಭಾಪತಿ ಸ್ಥಾನಕ್ಕೆ ಗೌರವ ಇದೆ. ಆದರೆ ಅದನ್ನು ಉಲ್ಲಂಘಿಸಿ ಅಗೌರವ ತೋರಿದವರಿಗೆ ತಪ್ಪನ್ನು ತಿದ್ದುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಮನವಿ ಸಲ್ಲಿಸಿದರೆ ಹಿಂಪಡೆಯುವಿರ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ರಿಕ್ವೆಸ್ಟ್ ಮಾಡಿದ ನಂತರ ಚರ್ಚಿಸಬಹುದು. ನಾವು ತಪ್ಪು ಮಾಡಿದ್ದೇವೆ ಅನ್ನೋ ಭಾವನೆ ಅವರಿಗಿಲ್ಲ. ನಿನ್ನೆ 12 ರಿಂದ ಸಂಜೆ 4ರವರೆಗೂ ಅಲ್ಲೆ ಇದ್ದೆವು ಕನಿಷ್ಠ ಬಂದು ಏನೋ ಆಗಿದೆ ಎಂದು ಮಾತನಾಡಬೇಕೆಂಬ ಸೌಜನ್ಯ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡನೇ ಬಾರಿ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ. ಮತ್ತೆ ಈಗಾಗಲೇ ಅಮಾನತು ಆದರೂ ಅವರಿಗೆ ತಪ್ಪಿನ ಅರಿವು ಅವರಿಗೆ ಬರಬೇಕಿತ್ತಲ್ಲ..? ಬಂದಿದ್ದರೆ ಈ ಘಟನೆ ಆಗುತ್ತಿತ್ತೆ..? ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ.. ಇಲ್ಲವಾದರೆ ತಾಲೂಕು, ಜಿಲ್ಲಾ ಮಟ್ಟದ ಸಭೆಗಳಲ್ಲಿ ಇದೇ ರೀತಿ ಆಡ್ತಾರೆ ಎಂದು ತಮ್ಮ ತೀರ್ಮಾನವನ್ನು ಸಭಾಪತಿ ಸಮರ್ಥಿಸಿಕೊಂಡರು.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]