Despite earlier suspension, MLAs are not aware: Speaker UT Khader

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು ವಿಧಾನಸಭೆ ಸ್ಪೀಕರ್ ಸಭಾಪತಿ ಯುಟಿ ಖಾದರ್ (UT Khader) ಸಮರ್ಥಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಸಭಾಪತಿ ಪೀಠದ ವಿರುದ್ಧ ಅನುಚಿತವಾಗಿ ವರ್ತಿಸಿದ ಕಾರಣ 18 ಶಾಸಕರ ಅಮಾನತಿನ ತೀರ್ಮಾನ ನೀಡಲಾಗಿದೆ. ಸದನಕ್ಕಿಂತ ದೊಡ್ಡದು ಯಾವುದು ಇಲ್ಲ. ಸದನ ಪಾವಿತ್ರ್ಯತೆ ಬಹಳ ಮುಖ್ಯ. ಗೆದ್ದು ಬಂದಾಗ ಪ್ರತಿಜ್ಞೆ ಮಾಡಿರುತ್ತೇವೆ. ಜನರ ಪರವಾಗಿ ಇರುತ್ತೇವೆ ಅಂತ ಪ್ರತಿಜ್ಞೆ ಮಾಡಿರ್ತೇವೆ ಎಂಬುದ ಮರೆತು ವರ್ತಿಸಬಾರದು. ಅವರ ನಡುವಳಿಕೆಯನ್ನು ಸರಿಪಡಿಸುವ ಸಲುವಾಗಿ ಈ ಆದೇಶವೇ ಹೊರತು ಸರ್ಕಾರದ ಒತ್ತಡಕ್ಕೆ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಶಾಸಕರು ಸದನದ ಬಾವಿಗೆ ಪ್ರವೇಶಿಸುತ್ತಿದ್ದಂತೆ ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದರು ಮತ್ತು ಸ್ಪೀಕರ್ ಕುರ್ಚಿಯ ಮುಂದೆ ಕಾಗದಗಳನ್ನು ಹರಿದು ಎಸೆದರು.

ಪೀಠಕ್ಕೆ ಅಗೌರವ ತೋರಿದಾಗ ಸಂವಿಧಾನದ ಗೌರವ ಕಾಪಾಡುವುದು ನನ್ನ ಕರ್ತವ್ಯ. ನಾನು ಸಂವಿಧಾನದ ಪರವಾಗಿ ನಿಂತಿದ್ದೇನೆ ಮತ್ತು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಡೆದದ್ದನ್ನೆಲ್ಲ ರಾಜ್ಯದ ಜನತೆ ನೋಡಿದ್ದಾರೆ. 

ನಾನು ವಿರೋಧ ಪಕ್ಷದ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶ ನೀಡಿದ್ದೇನೆ ಮತ್ತು ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷಕ್ಕೆ ಒಲವು ತೋರದೆ ತಟಸ್ಥವಾಗಿ ವರ್ತಿಸಿದೆ.

ಸಂವಿಧಾನದ ಅಡಿಯಲ್ಲಿ ಸಭಾಪತಿ ಸ್ಥಾನಕ್ಕೆ ಗೌರವ ಇದೆ. ಆದರೆ ಅದನ್ನು ಉಲ್ಲಂಘಿಸಿ ಅಗೌರವ ತೋರಿದವರಿಗೆ ತಪ್ಪನ್ನು ತಿದ್ದುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಮನವಿ ಸಲ್ಲಿಸಿದರೆ ಹಿಂಪಡೆಯುವಿರ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ರಿಕ್ವೆಸ್ಟ್ ಮಾಡಿದ ನಂತರ ಚರ್ಚಿಸಬಹುದು. ನಾವು ತಪ್ಪು ಮಾಡಿದ್ದೇವೆ ಅನ್ನೋ ಭಾವನೆ ಅವರಿಗಿಲ್ಲ. ನಿನ್ನೆ 12 ರಿಂದ ಸಂಜೆ 4ರವರೆಗೂ ಅಲ್ಲೆ ಇದ್ದೆವು ಕನಿಷ್ಠ ಬಂದು ಏನೋ ಆಗಿದೆ ಎಂದು ಮಾತನಾಡಬೇಕೆಂಬ ಸೌಜನ್ಯ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡನೇ ಬಾರಿ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ. ಮತ್ತೆ ಈಗಾಗಲೇ ಅಮಾನತು ಆದರೂ ಅವರಿಗೆ ತಪ್ಪಿನ ಅರಿವು ಅವರಿಗೆ ಬರಬೇಕಿತ್ತಲ್ಲ..? ಬಂದಿದ್ದರೆ ಈ ಘಟನೆ ಆಗುತ್ತಿತ್ತೆ..? ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ.. ಇಲ್ಲವಾದರೆ ತಾಲೂಕು, ಜಿಲ್ಲಾ ಮಟ್ಟದ ಸಭೆಗಳಲ್ಲಿ ಇದೇ ರೀತಿ ಆಡ್ತಾರೆ ಎಂದು ತಮ್ಮ ತೀರ್ಮಾನವನ್ನು ಸಭಾಪತಿ ಸಮರ್ಥಿಸಿಕೊಂಡರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]