Despite earlier suspension, MLAs are not aware: Speaker UT Khader

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು ವಿಧಾನಸಭೆ ಸ್ಪೀಕರ್ ಸಭಾಪತಿ ಯುಟಿ ಖಾದರ್ (UT Khader) ಸಮರ್ಥಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಸಭಾಪತಿ ಪೀಠದ ವಿರುದ್ಧ ಅನುಚಿತವಾಗಿ ವರ್ತಿಸಿದ ಕಾರಣ 18 ಶಾಸಕರ ಅಮಾನತಿನ ತೀರ್ಮಾನ ನೀಡಲಾಗಿದೆ. ಸದನಕ್ಕಿಂತ ದೊಡ್ಡದು ಯಾವುದು ಇಲ್ಲ. ಸದನ ಪಾವಿತ್ರ್ಯತೆ ಬಹಳ ಮುಖ್ಯ. ಗೆದ್ದು ಬಂದಾಗ ಪ್ರತಿಜ್ಞೆ ಮಾಡಿರುತ್ತೇವೆ. ಜನರ ಪರವಾಗಿ ಇರುತ್ತೇವೆ ಅಂತ ಪ್ರತಿಜ್ಞೆ ಮಾಡಿರ್ತೇವೆ ಎಂಬುದ ಮರೆತು ವರ್ತಿಸಬಾರದು. ಅವರ ನಡುವಳಿಕೆಯನ್ನು ಸರಿಪಡಿಸುವ ಸಲುವಾಗಿ ಈ ಆದೇಶವೇ ಹೊರತು ಸರ್ಕಾರದ ಒತ್ತಡಕ್ಕೆ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಶಾಸಕರು ಸದನದ ಬಾವಿಗೆ ಪ್ರವೇಶಿಸುತ್ತಿದ್ದಂತೆ ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದರು ಮತ್ತು ಸ್ಪೀಕರ್ ಕುರ್ಚಿಯ ಮುಂದೆ ಕಾಗದಗಳನ್ನು ಹರಿದು ಎಸೆದರು.

ಪೀಠಕ್ಕೆ ಅಗೌರವ ತೋರಿದಾಗ ಸಂವಿಧಾನದ ಗೌರವ ಕಾಪಾಡುವುದು ನನ್ನ ಕರ್ತವ್ಯ. ನಾನು ಸಂವಿಧಾನದ ಪರವಾಗಿ ನಿಂತಿದ್ದೇನೆ ಮತ್ತು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಡೆದದ್ದನ್ನೆಲ್ಲ ರಾಜ್ಯದ ಜನತೆ ನೋಡಿದ್ದಾರೆ. 

ನಾನು ವಿರೋಧ ಪಕ್ಷದ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶ ನೀಡಿದ್ದೇನೆ ಮತ್ತು ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷಕ್ಕೆ ಒಲವು ತೋರದೆ ತಟಸ್ಥವಾಗಿ ವರ್ತಿಸಿದೆ.

ಸಂವಿಧಾನದ ಅಡಿಯಲ್ಲಿ ಸಭಾಪತಿ ಸ್ಥಾನಕ್ಕೆ ಗೌರವ ಇದೆ. ಆದರೆ ಅದನ್ನು ಉಲ್ಲಂಘಿಸಿ ಅಗೌರವ ತೋರಿದವರಿಗೆ ತಪ್ಪನ್ನು ತಿದ್ದುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಮನವಿ ಸಲ್ಲಿಸಿದರೆ ಹಿಂಪಡೆಯುವಿರ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ರಿಕ್ವೆಸ್ಟ್ ಮಾಡಿದ ನಂತರ ಚರ್ಚಿಸಬಹುದು. ನಾವು ತಪ್ಪು ಮಾಡಿದ್ದೇವೆ ಅನ್ನೋ ಭಾವನೆ ಅವರಿಗಿಲ್ಲ. ನಿನ್ನೆ 12 ರಿಂದ ಸಂಜೆ 4ರವರೆಗೂ ಅಲ್ಲೆ ಇದ್ದೆವು ಕನಿಷ್ಠ ಬಂದು ಏನೋ ಆಗಿದೆ ಎಂದು ಮಾತನಾಡಬೇಕೆಂಬ ಸೌಜನ್ಯ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡನೇ ಬಾರಿ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ. ಮತ್ತೆ ಈಗಾಗಲೇ ಅಮಾನತು ಆದರೂ ಅವರಿಗೆ ತಪ್ಪಿನ ಅರಿವು ಅವರಿಗೆ ಬರಬೇಕಿತ್ತಲ್ಲ..? ಬಂದಿದ್ದರೆ ಈ ಘಟನೆ ಆಗುತ್ತಿತ್ತೆ..? ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ.. ಇಲ್ಲವಾದರೆ ತಾಲೂಕು, ಜಿಲ್ಲಾ ಮಟ್ಟದ ಸಭೆಗಳಲ್ಲಿ ಇದೇ ರೀತಿ ಆಡ್ತಾರೆ ಎಂದು ತಮ್ಮ ತೀರ್ಮಾನವನ್ನು ಸಭಾಪತಿ ಸಮರ್ಥಿಸಿಕೊಂಡರು.

ರಾಜಕೀಯ

ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಉದ್ಯೋಗ ನೇಮಕಾತಿ ಮಾಡಬೇಕೆಂಬುದು ನೆನಪಿಗೆ ಬರಲಿಲ್ಲ. ಅಶೋಕಣ್ಣ, ಬೆಲ್ಲದ್ ಅವರು ಪ್ರತಿಭಟನೆಗೆ ಹೋಗುತ್ತಾರೆ. ನಿಮ್ಮ ಸರಕಾರ ಇದ್ದಾಗ ಯಾಕೆ ನೇಮಕಾತಿ ಮಾಡಿಕೊಂಡಿಲ್ಲ? ಯಡಿಯೂರಪ್ಪ, ಬೊಮ್ಮಾಯಿ ಇದ್ದಾಗ ಯಾಕೆ ನೇಮಕಾತಿ ಮಾಡಿಲ್ಲ:

[ccc_my_favorite_select_button post_id="119762"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!