Despite earlier suspension, MLAs are not aware: Speaker UT Khader

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು ವಿಧಾನಸಭೆ ಸ್ಪೀಕರ್ ಸಭಾಪತಿ ಯುಟಿ ಖಾದರ್ (UT Khader) ಸಮರ್ಥಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಸಭಾಪತಿ ಪೀಠದ ವಿರುದ್ಧ ಅನುಚಿತವಾಗಿ ವರ್ತಿಸಿದ ಕಾರಣ 18 ಶಾಸಕರ ಅಮಾನತಿನ ತೀರ್ಮಾನ ನೀಡಲಾಗಿದೆ. ಸದನಕ್ಕಿಂತ ದೊಡ್ಡದು ಯಾವುದು ಇಲ್ಲ. ಸದನ ಪಾವಿತ್ರ್ಯತೆ ಬಹಳ ಮುಖ್ಯ. ಗೆದ್ದು ಬಂದಾಗ ಪ್ರತಿಜ್ಞೆ ಮಾಡಿರುತ್ತೇವೆ. ಜನರ ಪರವಾಗಿ ಇರುತ್ತೇವೆ ಅಂತ ಪ್ರತಿಜ್ಞೆ ಮಾಡಿರ್ತೇವೆ ಎಂಬುದ ಮರೆತು ವರ್ತಿಸಬಾರದು. ಅವರ ನಡುವಳಿಕೆಯನ್ನು ಸರಿಪಡಿಸುವ ಸಲುವಾಗಿ ಈ ಆದೇಶವೇ ಹೊರತು ಸರ್ಕಾರದ ಒತ್ತಡಕ್ಕೆ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಶಾಸಕರು ಸದನದ ಬಾವಿಗೆ ಪ್ರವೇಶಿಸುತ್ತಿದ್ದಂತೆ ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದರು ಮತ್ತು ಸ್ಪೀಕರ್ ಕುರ್ಚಿಯ ಮುಂದೆ ಕಾಗದಗಳನ್ನು ಹರಿದು ಎಸೆದರು.

ಪೀಠಕ್ಕೆ ಅಗೌರವ ತೋರಿದಾಗ ಸಂವಿಧಾನದ ಗೌರವ ಕಾಪಾಡುವುದು ನನ್ನ ಕರ್ತವ್ಯ. ನಾನು ಸಂವಿಧಾನದ ಪರವಾಗಿ ನಿಂತಿದ್ದೇನೆ ಮತ್ತು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಡೆದದ್ದನ್ನೆಲ್ಲ ರಾಜ್ಯದ ಜನತೆ ನೋಡಿದ್ದಾರೆ. 

ನಾನು ವಿರೋಧ ಪಕ್ಷದ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶ ನೀಡಿದ್ದೇನೆ ಮತ್ತು ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷಕ್ಕೆ ಒಲವು ತೋರದೆ ತಟಸ್ಥವಾಗಿ ವರ್ತಿಸಿದೆ.

ಸಂವಿಧಾನದ ಅಡಿಯಲ್ಲಿ ಸಭಾಪತಿ ಸ್ಥಾನಕ್ಕೆ ಗೌರವ ಇದೆ. ಆದರೆ ಅದನ್ನು ಉಲ್ಲಂಘಿಸಿ ಅಗೌರವ ತೋರಿದವರಿಗೆ ತಪ್ಪನ್ನು ತಿದ್ದುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಮನವಿ ಸಲ್ಲಿಸಿದರೆ ಹಿಂಪಡೆಯುವಿರ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ರಿಕ್ವೆಸ್ಟ್ ಮಾಡಿದ ನಂತರ ಚರ್ಚಿಸಬಹುದು. ನಾವು ತಪ್ಪು ಮಾಡಿದ್ದೇವೆ ಅನ್ನೋ ಭಾವನೆ ಅವರಿಗಿಲ್ಲ. ನಿನ್ನೆ 12 ರಿಂದ ಸಂಜೆ 4ರವರೆಗೂ ಅಲ್ಲೆ ಇದ್ದೆವು ಕನಿಷ್ಠ ಬಂದು ಏನೋ ಆಗಿದೆ ಎಂದು ಮಾತನಾಡಬೇಕೆಂಬ ಸೌಜನ್ಯ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡನೇ ಬಾರಿ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ. ಮತ್ತೆ ಈಗಾಗಲೇ ಅಮಾನತು ಆದರೂ ಅವರಿಗೆ ತಪ್ಪಿನ ಅರಿವು ಅವರಿಗೆ ಬರಬೇಕಿತ್ತಲ್ಲ..? ಬಂದಿದ್ದರೆ ಈ ಘಟನೆ ಆಗುತ್ತಿತ್ತೆ..? ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ.. ಇಲ್ಲವಾದರೆ ತಾಲೂಕು, ಜಿಲ್ಲಾ ಮಟ್ಟದ ಸಭೆಗಳಲ್ಲಿ ಇದೇ ರೀತಿ ಆಡ್ತಾರೆ ಎಂದು ತಮ್ಮ ತೀರ್ಮಾನವನ್ನು ಸಭಾಪತಿ ಸಮರ್ಥಿಸಿಕೊಂಡರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!