ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

Despite earlier suspension, MLAs are not aware: Speaker UT Khader

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು ವಿಧಾನಸಭೆ ಸ್ಪೀಕರ್ ಸಭಾಪತಿ ಯುಟಿ ಖಾದರ್ (UT Khader) ಸಮರ್ಥಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಸಭಾಪತಿ ಪೀಠದ ವಿರುದ್ಧ ಅನುಚಿತವಾಗಿ ವರ್ತಿಸಿದ ಕಾರಣ 18 ಶಾಸಕರ ಅಮಾನತಿನ ತೀರ್ಮಾನ ನೀಡಲಾಗಿದೆ. ಸದನಕ್ಕಿಂತ ದೊಡ್ಡದು ಯಾವುದು ಇಲ್ಲ. ಸದನ ಪಾವಿತ್ರ್ಯತೆ ಬಹಳ ಮುಖ್ಯ. ಗೆದ್ದು ಬಂದಾಗ ಪ್ರತಿಜ್ಞೆ ಮಾಡಿರುತ್ತೇವೆ. ಜನರ ಪರವಾಗಿ ಇರುತ್ತೇವೆ ಅಂತ ಪ್ರತಿಜ್ಞೆ ಮಾಡಿರ್ತೇವೆ ಎಂಬುದ ಮರೆತು ವರ್ತಿಸಬಾರದು. ಅವರ ನಡುವಳಿಕೆಯನ್ನು ಸರಿಪಡಿಸುವ ಸಲುವಾಗಿ ಈ ಆದೇಶವೇ ಹೊರತು ಸರ್ಕಾರದ ಒತ್ತಡಕ್ಕೆ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಶಾಸಕರು ಸದನದ ಬಾವಿಗೆ ಪ್ರವೇಶಿಸುತ್ತಿದ್ದಂತೆ ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದರು ಮತ್ತು ಸ್ಪೀಕರ್ ಕುರ್ಚಿಯ ಮುಂದೆ ಕಾಗದಗಳನ್ನು ಹರಿದು ಎಸೆದರು.

ಪೀಠಕ್ಕೆ ಅಗೌರವ ತೋರಿದಾಗ ಸಂವಿಧಾನದ ಗೌರವ ಕಾಪಾಡುವುದು ನನ್ನ ಕರ್ತವ್ಯ. ನಾನು ಸಂವಿಧಾನದ ಪರವಾಗಿ ನಿಂತಿದ್ದೇನೆ ಮತ್ತು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಡೆದದ್ದನ್ನೆಲ್ಲ ರಾಜ್ಯದ ಜನತೆ ನೋಡಿದ್ದಾರೆ. 

ನಾನು ವಿರೋಧ ಪಕ್ಷದ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶ ನೀಡಿದ್ದೇನೆ ಮತ್ತು ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷಕ್ಕೆ ಒಲವು ತೋರದೆ ತಟಸ್ಥವಾಗಿ ವರ್ತಿಸಿದೆ.

ಸಂವಿಧಾನದ ಅಡಿಯಲ್ಲಿ ಸಭಾಪತಿ ಸ್ಥಾನಕ್ಕೆ ಗೌರವ ಇದೆ. ಆದರೆ ಅದನ್ನು ಉಲ್ಲಂಘಿಸಿ ಅಗೌರವ ತೋರಿದವರಿಗೆ ತಪ್ಪನ್ನು ತಿದ್ದುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಮನವಿ ಸಲ್ಲಿಸಿದರೆ ಹಿಂಪಡೆಯುವಿರ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ರಿಕ್ವೆಸ್ಟ್ ಮಾಡಿದ ನಂತರ ಚರ್ಚಿಸಬಹುದು. ನಾವು ತಪ್ಪು ಮಾಡಿದ್ದೇವೆ ಅನ್ನೋ ಭಾವನೆ ಅವರಿಗಿಲ್ಲ. ನಿನ್ನೆ 12 ರಿಂದ ಸಂಜೆ 4ರವರೆಗೂ ಅಲ್ಲೆ ಇದ್ದೆವು ಕನಿಷ್ಠ ಬಂದು ಏನೋ ಆಗಿದೆ ಎಂದು ಮಾತನಾಡಬೇಕೆಂಬ ಸೌಜನ್ಯ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡನೇ ಬಾರಿ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ. ಮತ್ತೆ ಈಗಾಗಲೇ ಅಮಾನತು ಆದರೂ ಅವರಿಗೆ ತಪ್ಪಿನ ಅರಿವು ಅವರಿಗೆ ಬರಬೇಕಿತ್ತಲ್ಲ..? ಬಂದಿದ್ದರೆ ಈ ಘಟನೆ ಆಗುತ್ತಿತ್ತೆ..? ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ.. ಇಲ್ಲವಾದರೆ ತಾಲೂಕು, ಜಿಲ್ಲಾ ಮಟ್ಟದ ಸಭೆಗಳಲ್ಲಿ ಇದೇ ರೀತಿ ಆಡ್ತಾರೆ ಎಂದು ತಮ್ಮ ತೀರ್ಮಾನವನ್ನು ಸಭಾಪತಿ ಸಮರ್ಥಿಸಿಕೊಂಡರು.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]