Despite earlier suspension, MLAs are not aware: Speaker UT Khader

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು ವಿಧಾನಸಭೆ ಸ್ಪೀಕರ್ ಸಭಾಪತಿ ಯುಟಿ ಖಾದರ್ (UT Khader) ಸಮರ್ಥಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಸಭಾಪತಿ ಪೀಠದ ವಿರುದ್ಧ ಅನುಚಿತವಾಗಿ ವರ್ತಿಸಿದ ಕಾರಣ 18 ಶಾಸಕರ ಅಮಾನತಿನ ತೀರ್ಮಾನ ನೀಡಲಾಗಿದೆ. ಸದನಕ್ಕಿಂತ ದೊಡ್ಡದು ಯಾವುದು ಇಲ್ಲ. ಸದನ ಪಾವಿತ್ರ್ಯತೆ ಬಹಳ ಮುಖ್ಯ. ಗೆದ್ದು ಬಂದಾಗ ಪ್ರತಿಜ್ಞೆ ಮಾಡಿರುತ್ತೇವೆ. ಜನರ ಪರವಾಗಿ ಇರುತ್ತೇವೆ ಅಂತ ಪ್ರತಿಜ್ಞೆ ಮಾಡಿರ್ತೇವೆ ಎಂಬುದ ಮರೆತು ವರ್ತಿಸಬಾರದು. ಅವರ ನಡುವಳಿಕೆಯನ್ನು ಸರಿಪಡಿಸುವ ಸಲುವಾಗಿ ಈ ಆದೇಶವೇ ಹೊರತು ಸರ್ಕಾರದ ಒತ್ತಡಕ್ಕೆ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಶಾಸಕರು ಸದನದ ಬಾವಿಗೆ ಪ್ರವೇಶಿಸುತ್ತಿದ್ದಂತೆ ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದರು ಮತ್ತು ಸ್ಪೀಕರ್ ಕುರ್ಚಿಯ ಮುಂದೆ ಕಾಗದಗಳನ್ನು ಹರಿದು ಎಸೆದರು.

ಪೀಠಕ್ಕೆ ಅಗೌರವ ತೋರಿದಾಗ ಸಂವಿಧಾನದ ಗೌರವ ಕಾಪಾಡುವುದು ನನ್ನ ಕರ್ತವ್ಯ. ನಾನು ಸಂವಿಧಾನದ ಪರವಾಗಿ ನಿಂತಿದ್ದೇನೆ ಮತ್ತು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಡೆದದ್ದನ್ನೆಲ್ಲ ರಾಜ್ಯದ ಜನತೆ ನೋಡಿದ್ದಾರೆ. 

ನಾನು ವಿರೋಧ ಪಕ್ಷದ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶ ನೀಡಿದ್ದೇನೆ ಮತ್ತು ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷಕ್ಕೆ ಒಲವು ತೋರದೆ ತಟಸ್ಥವಾಗಿ ವರ್ತಿಸಿದೆ.

ಸಂವಿಧಾನದ ಅಡಿಯಲ್ಲಿ ಸಭಾಪತಿ ಸ್ಥಾನಕ್ಕೆ ಗೌರವ ಇದೆ. ಆದರೆ ಅದನ್ನು ಉಲ್ಲಂಘಿಸಿ ಅಗೌರವ ತೋರಿದವರಿಗೆ ತಪ್ಪನ್ನು ತಿದ್ದುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಮನವಿ ಸಲ್ಲಿಸಿದರೆ ಹಿಂಪಡೆಯುವಿರ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ರಿಕ್ವೆಸ್ಟ್ ಮಾಡಿದ ನಂತರ ಚರ್ಚಿಸಬಹುದು. ನಾವು ತಪ್ಪು ಮಾಡಿದ್ದೇವೆ ಅನ್ನೋ ಭಾವನೆ ಅವರಿಗಿಲ್ಲ. ನಿನ್ನೆ 12 ರಿಂದ ಸಂಜೆ 4ರವರೆಗೂ ಅಲ್ಲೆ ಇದ್ದೆವು ಕನಿಷ್ಠ ಬಂದು ಏನೋ ಆಗಿದೆ ಎಂದು ಮಾತನಾಡಬೇಕೆಂಬ ಸೌಜನ್ಯ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎರಡನೇ ಬಾರಿ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ. ಮತ್ತೆ ಈಗಾಗಲೇ ಅಮಾನತು ಆದರೂ ಅವರಿಗೆ ತಪ್ಪಿನ ಅರಿವು ಅವರಿಗೆ ಬರಬೇಕಿತ್ತಲ್ಲ..? ಬಂದಿದ್ದರೆ ಈ ಘಟನೆ ಆಗುತ್ತಿತ್ತೆ..? ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ.. ಇಲ್ಲವಾದರೆ ತಾಲೂಕು, ಜಿಲ್ಲಾ ಮಟ್ಟದ ಸಭೆಗಳಲ್ಲಿ ಇದೇ ರೀತಿ ಆಡ್ತಾರೆ ಎಂದು ತಮ್ಮ ತೀರ್ಮಾನವನ್ನು ಸಭಾಪತಿ ಸಮರ್ಥಿಸಿಕೊಂಡರು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!