Vijayendra appeal to Withdraw Suspension Order of 18 Legislators

18 ಶಾಸಕರ ಅಮಾನತು ಆದೇಶ ಹಿಂಪಡೆಯಲು ವಿಜಯೇಂದ್ರ ಮನವಿ

ಬೆಂಗಳೂರು: ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಅವರು ತಿಳಿಸಿದ್ದಾರೆ.

18 ಶಾಸಕರನ್ನು ಅಮಾನತು ಮಾಡುವ ಆದೇಶವನ್ನು ಸ್ಪೀಕರ್ ಅವರು ಹಿಂಪಡೆಯಬೇಕು ಎಂದು ಮನವಿ ಮಾಡಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವ ಕುರಿತ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಾತ್ಮಕ, ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನ ಎಂದು ಆಕ್ಷೇಪಿಸಿದರು. ಸ್ಪೀಕರ್ ಅವರು ಶಾಸಕರು ಮಾತ್ರವಲ್ಲ ಕ್ಷೇತ್ರದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಖಂಡಿಸಿದರು.

ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಮೀಸಲಾತಿ ಕೊಟ್ಟ ಸರಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಪ್ರಕಟಿಸಿದರು. ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ನಡೆಸಿ ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದು ಘೋಷಿಸಿದರು.

ಹಿಂದೂಗಳಲ್ಲಿ ಹಾಗಿದ್ದರೆ ಬಡವರೇ ಇಲ್ಲವೇ

ನಮ್ಮ ಸಂವಿಧಾನದಲ್ಲಿ ಧರ್ಮ ಆಧರಿತ ಮೀಸಲಾತಿ ಕೊಡಲು ಅವಕಾಶವಿಲ್ಲ; ಇದರ ನಡುವೆ ಮೀಸಲಾತಿ, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ 20 ಲಕ್ಷ ಬದಲು 30 ಲಕ್ಷ ಕೊಡುವುದಾಗಿ ತಿಳಿಸುವುದು, ಮುಸ್ಲಿಂ ಹೆಣ್ಮಕ್ಕಳಿಗೆ ಆತ್ಮರಕ್ಷಣೆ ಕಲೆಗೆ ಸಂಬಂಧಿಸಿ ಬಜೆಟ್‍ನಲ್ಲಿ ಹಣ ಮೀಸಲಿಟ್ಟಿರುವುದು ಸರಿಯೇ ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು.

ಹಿಂದೂಗಳಲ್ಲಿ ಹಾಗಿದ್ದರೆ ಬಡವರೇ ಇಲ್ಲವೇ ಎಂದು ಕೇಳಿದರು. ಅವರಿಗೆ ಹೊರದೇಶಕ್ಕೆ ಉನ್ನತ ಶಿಕ್ಷಣಕ್ಕೆ ಹೋಗುವ ಕನಸುಗಳಿಲ್ಲವೇ ಎಂದರು.

ರಾಜ್ಯ- ದೇಶದಲ್ಲಿ ಹಿಂದೂ ಹೆಣ್ಮಕ್ಕಳು ಲವ್ ಜಿಹಾದ್‍ಗೆ ಬಲಿ ಆಗುತ್ತಿದ್ದಾರೆ. ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ ಅಸಾಂವಿಧಾನಿಕ ಎಂದು ಟೀಕಿಸಿದರು. ಧರ್ಮ ಆಧಾರಿತ ಮೀಸಲಾತಿ ಕೊಡಲಾಗದು ಎಂದು ಸಂವಿಧಾನ ಸ್ಪಷ್ಟವಾಗಿ ತಿಳಿಸಿದೆ. ಇದನ್ನು ನಾವು ವಿರೋಧಿಸುತ್ತಿದ್ದೇವೆ ಎಂದು ವಿವರಿಸಿದರು.

ಈ ಸಂಬಂಧ ಸುಪ್ರೀಂ ಕೋರ್ಟ್ ಸೇರಿ ವಿವಿಧ ಕೋರ್ಟ್‍ಗಳ ತೀರ್ಪನ್ನೂ ಉಲ್ಲೇಖಿಸಿದರು. ಈ ತೀರ್ಪುಗಳು ನಮ್ಮ ಅನುಭವಿ ಮುಖ್ಯಮಂತ್ರಿಗಳಿಗೆ ತಿಳಿದಿದೆ. ಇದು ಸಂವಿಧಾನ ವಿರೋಧಿ ಎಂಬುದು ಗೊತ್ತಿದ್ದರೂ ನಾಡಿನ ಹಿಂದೂಗಳ ಮೇಲೆ ದೌರ್ಜನ್ಯ- ಅವಮಾನ ಮಾಡುವ ನಿರ್ಧಾರ ಖಂಡಿತ ಅಕ್ಷಮ್ಯ ಅಪರಾಧ ಎಂದು ತಿಳಿಸಿದರು.

ಹೋರಾಟದ ಕುರಿತು ಪಕ್ಷದ ಮುಖಂಡರ ಜೊತೆ ಚರ್ಚಿಸಿದ್ದೇವೆ. ಅತಿ ಶೀಘ್ರದಲ್ಲಿ ಹೋರಾಟದ ರೂಪುರೇಷೆಯನ್ನು ಪ್ರಕಟಿಸುತ್ತೇವೆ. ಸದನದಲ್ಲಿ ಹಗಲು- ರಾತ್ರಿ ಧರಣಿ ಬಗ್ಗೆ ಚರ್ಚೆ ನಡೆದಿದೆ. ಜಿಲ್ಲೆಗಳಲ್ಲಿ ಸೋಮವಾರದಿಂದ ಹೋರಾಟ ನಡೆಯಲಿದೆ. ರಾಜ್ಯದಲ್ಲಿ ಜನಜಾಗೃತಿ ಮೂಡಿಸುವ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಸ್ಪೀಕರ್ ಅವರು ಯಾವ ಕಾರಣಕ್ಕಾಗಿ ನಮ್ಮ 18 ಶಾಸಕರನ್ನು ಅಮಾನತುಗೊಳಿಸುವ ನಿರ್ಧಾರ ಘೋಷಿಸಿದ್ದಾರೆ? ಎಂದ ಅವರು, ಹಣಕಾಸಿನ ಸಚಿವರಾದ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರಕಾರವು ಈ ರಾಜ್ಯದಲ್ಲಿರುವ ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ನೀಡುವ ತೀರ್ಮಾನ ಕೈಗೊಂಡಿದೆ.

ಬಜೆಟ್‍ನಲ್ಲೂ ಅಲ್ಪಸಂಖ್ಯಾತರ ಓಲೈಕೆ

ಹಿಂದೂಗಳನ್ನು ಅವಮಾನಿಸುವ ಅನೇಕ ಘೋಷಣೆ ಮಾಡಿದ್ದಾರೆ. ಹಿಂದೂ ವಿರೋಧಿ ನೀತಿಗಳನ್ನು ಸಿದ್ದರಾಮಯ್ಯನವರು ಅನುಸರಿಸುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ನಿರಂತರ ಹೋರಾಟ ಮಾಡುತ್ತ ಬಂದಿದ್ದೇವೆ ಎಂದರು.

18 ಶಾಸಕರು ಹಾಗಿದ್ದರೆ ಭಯೋತ್ಪಾದಕರೇ?

ಸ್ಪೀಕರ್ ಅವರು ನಮ್ಮ ರಕ್ಷಣೆಗೆ ಬರಬೇಕಿತ್ತು. 6 ತಿಂಗಳು 18 ಜನಪ್ರತಿನಿಧಿಗಳನ್ನು ಅಮಾನತು ಮಾಡುವ ಸ್ಪೀಕರ್ ಅವರ ನಡೆಯು ಸರಿಯಲ್ಲ. ಅಮಾನತಾದವರು ವಿಧಾನಸಭಾ ಲಾಬಿ, ಸಭಾಂಗಣ ಪ್ರವೇಶಿಸುವಂತಿಲ್ಲ ಎಂದಿದ್ದಾರೆ. ಹಾಗಿದ್ದರೆ ಅವರು ಭಯೋತ್ಪಾದಕರೇ, ನಕ್ಸಲೈಟರೇ ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು.

ಸ್ಥಾಯಿ ಸಮಿತಿ ಸಭೆಯಲ್ಲಿ ಭಾಗವಹಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದು ಶಾಸಕರ ಹಕ್ಕು ಮೊಟಕುಗೊಳಿಸುವ, ಹಕ್ಕು ಕಿತ್ತುಕೊಳ್ಳುವ ಕಾರ್ಯ ಎಂದು ಆಕ್ಷೇಪಿಸಿದರು. ಕ್ಷೇತ್ರಾಭಿವೃದ್ಧಿಗೆ ಎರಡು ಕಾಸು ಬಿಡುಗಡೆ ಮಾಡುವ ಯೋಗ್ಯತೆ ಸರಕಾರಕ್ಕೆ ಇಲ್ಲ; ಸ್ಪೀಕರ್ ಆದೇಶ ಅಸಾಂವಿಧಾನಾತ್ಮಕ, ಮನಸೋಇಚ್ಛೆಯದು ಎಂದು ಆರೋಪಿಸಿದರು.

ನಿನ್ನೆ ನಮ್ಮ ಶಾಸಕರು ಬಾವಿಗಿಳಿದು ಹೋರಾಟ ನಡೆಸುತ್ತಿರುವಾಗ ಏಕಾಏಕಿಯಾಗಿ ಅಮಾನತು ಮಾಡಿದ್ದು ಸಂಪೂರ್ಣ ಕಾನೂನುಬಾಹಿರ ಎಂದು ಟೀಕಿಸಿದರು.

ಸಂವಿಧಾನದ ಬಗ್ಗೆ ಪಾಠ ಹೇಳುವ, ಪದೇಪದೇ ಡಾ. ಅಂಬೇಡ್ಕರರ ಹೆಸರು ದುರುಪಯೋಗ ಪಡಿಸಿಕೊಳ್ಳುವ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮುಖಂಡರು ಬಜೆಟ್‍ನಲ್ಲಿ ತೆಗೆದುಕೊಂಡ ನಿರ್ಧಾರಗಳು ಕೇವಲ ಅಲ್ಪಸಂಖ್ಯಾತರ ಓಲೈಕೆಯಷ್ಟೇ ಅಲ್ಲ; ಹಿಂದೂಗಳನ್ನು ಅಪಮಾನಿಸುವ ನಿರ್ಧಾರ ಎಂದು ದೂರಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಹನಿಟ್ರ್ಯಾಪ್ ಕುರಿತ ಸಚಿವರ ಹೇಳಿಕೆ- ಮುಸ್ಲಿಮರಿಗೆ ಸಂವಿಧಾನವಿರೋಧಿಯಾಗಿ ಮೀಸಲಾತಿ ವಿಚಾರ ಮುಂದಿಟ್ಟು ನಾವು ಹೋರಾಟ ಮಾಡಿದ್ದೇವೆ. ಸ್ಪೀಕರ್ ನಡವಳಿಕೆ ತುಘಲಕ್ ದರ್ಬಾರ್‍ನಂತಿದೆ; ಹಿಟ್ಲರ್ ಸಂಸ್ಕೃತಯನ್ನು ನಾವು ನೋಡುತ್ತಿದ್ದೇವೆ ಎಂದು ಟೀಕಿಸಿದರು.

ಸಿದ್ದರಾಮಯ್ಯನವರು ಬೂಟುಗಾಲು ಹಾಕಿ ಬಾಗಿಲು ಒದ್ದು ಹಾಕಿದ್ದು, ಜಮೀರ್ ಅಹ್ಮದ್ ಸ್ಪೀಕರ್ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆಸಿದ್ದನ್ನು ಸದನದಲ್ಲಿ ನೋಡಿದ್ದೇವೆ ಎಂದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಪರಿಷತ್ತಿನಲ್ಲಿ ಪಕ್ಷಗಳ ಬಲ, ಮೇಲ್ಮನೆಯಲ್ಲಿ ಹೋರಾಟ ಕುರಿತು ಮಾಹಿತಿ ನೀಡಿದರು. ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!