2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ ಆಗಮನ

2nd Airport: Check out the three locations

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ (MB Patila) ಶನಿವಾರ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ರೂ.1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ

ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಈ ಸಲುವಾಗಿ ಗುರುತಿಸಲಾಗಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ.

ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ.

ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಪಾಟೀಲ ಹೇಳಿದ್ದಾರೆ.

`ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಕಾರ್ಯಬೇಡಿಕೆ ಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅಷ್ಟೆ.

ಬೆಂಗಳೂರಿನ ಜನರಿಗೆ‌ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಲ್ದೋಟ ಮಾಲಿನ್ಯ: ಸೂಕ್ತ ಕ್ರಮ

ಕೊಪ್ಪಳದಲ್ಲಿ ಬಲ್ದೋಟ ಸಮೂಹವು 54 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕು ತಯಾರಿಕೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.

ಮಾಲಿನ್ಯದ ಬಗ್ಗೆ ಐಐಎಸ್ಸಿಯಂತಹ ತಟಸ್ಥ ಸಂಸ್ಥೆಯಿಂದ ಅಧ್ಯಯನ ನಡೆಸಲಾಗುತ್ತಿದೆ. ಅದರ ವರದಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯತೆ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಪಾಟೀಲ ಭರವಸೆ ನೀಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!