2nd Airport: Check out the three locations

2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ ಆಗಮನ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ (MB Patila) ಶನಿವಾರ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ರೂ.1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ

ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಈ ಸಲುವಾಗಿ ಗುರುತಿಸಲಾಗಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ.

ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ.

ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಪಾಟೀಲ ಹೇಳಿದ್ದಾರೆ.

`ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಕಾರ್ಯಬೇಡಿಕೆ ಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅಷ್ಟೆ.

ಬೆಂಗಳೂರಿನ ಜನರಿಗೆ‌ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಲ್ದೋಟ ಮಾಲಿನ್ಯ: ಸೂಕ್ತ ಕ್ರಮ

ಕೊಪ್ಪಳದಲ್ಲಿ ಬಲ್ದೋಟ ಸಮೂಹವು 54 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕು ತಯಾರಿಕೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.

ಮಾಲಿನ್ಯದ ಬಗ್ಗೆ ಐಐಎಸ್ಸಿಯಂತಹ ತಟಸ್ಥ ಸಂಸ್ಥೆಯಿಂದ ಅಧ್ಯಯನ ನಡೆಸಲಾಗುತ್ತಿದೆ. ಅದರ ವರದಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯತೆ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಪಾಟೀಲ ಭರವಸೆ ನೀಡಿದ್ದಾರೆ.

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!