ಗದಗ: ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು (cylinder blast) 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಬಸಪ್ಪ ಆದಿವರ ಎನ್ನುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ 14 ವರ್ಷದ ಶರಣಪ್ಪ ಡಾಲೀನ್ ಸೇರಿದಂತೆ ಆರು ಜನರಿಗೆ ಗಾಯಗಳಾಗಿವೆ. ಅಷ್ಟೇ ಅಲ್ಲದೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.
ಘಟನೆಯಲ್ಲಿ ಲಕ್ಷ್ಮವ್ವ ಕಣವಿ, ಬಸವಣ್ಣೆವ್ವ ಹೊರಪೇಟಿ, ಮಂಜುಳಾ, ನಿರ್ಮಲಾ ಎನ್ನುವವರಿಗೆ ಗಾಯಗಾಳಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗ್ಯಾಸ್ ಸೋರಿಕೆಯಿಂದಾಗಿ ಅಕ್ಕಪಕ್ಕದ ನಿವಾಸಿಗಳ ಗಮನಕ್ಕೆ ಬಂದು ಮನೆ ಬೀಗ ಒಡೆಯಲು ಮುಂದಾಗಿದ್ದಾರೆ. ಕಿಡಿ ಹೊತ್ತಿಕೊಂಡು ಸಿಲಿಂಡರ್ ಏಕಾ ಏಕಿ ಸ್ಪೋಟಗೊಂಡಿದೆ. ಇದರಿಂದಾಗಿ ನಾಲ್ವರು ಮಹಿಳೆಯರು ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ.
ಮನೆ ಜಖಂ ಆಗಿದೆ. ಆದ್ರೆ ಈ ಘಟನೆ ನಂತರ ಗ್ರಾಮಸ್ಥರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಸಾಕಷ್ಟು ಭಾರಿ ಕಾಲ್ ಮಾಡಿದ್ರೂ, ಆ್ಯಂಬುಲೆನ್ಸ್ ಸಕಾಲಕ್ಕೆ ಬಂದಿಲ್ಲ ಎಂದು ಕಿಡಿಕಾರಿದ್ರು.
ಬೈಕ್ ಹಾಗೂ ಟಂ ಟಂ ವಾಹನದಲ್ಲಿ ಗಾಯಾಳುಗಳನ್ನ ಕರೆದುಕೊಂಡು ಬಂದಿದ್ದೇವೆ ಎಂದು ಗ್ರಾಮಸ್ಥರು ಹಾಗೂ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.