Daily story: repentance

ಹರಿತಲೇಖನಿ ದಿನಕ್ಕೊಂದು ಕಥೆ: ಪಶ್ಚಾತ್ತಾಪ

Daily story: ಫಲವತ್ತಾದ ಇಪ್ಪತ್ತೈದು ಎಕರೆ ತೋಟದ ಭೂಮಿಯ ಒಡೆಯನಾಗಿದ್ದ ನಿಂಗಪ್ಪ ಅನಕ್ಷರಸ್ಥನಾಗಿದ್ದ. ಓದಲು ಬರೆಯಲು ಬಾರದೆ ತಾನು ಅನುಭವಿಸಿದ ಕಷ್ಟಗಳನ್ನು ತನ್ನ ಮಗ ಅನುಭವಿಸಬಾರದೆಂದು ನಿರ್ಧರಿಸಿದ್ದ. ಕಷ್ಟಪಟ್ಟು ಮಗನನ್ನು ವಿದ್ಯಾವಂತನನ್ನಾಗಿ ಮಾಡಿದ್ದ.

ಆತನ ಹೆಸರು ವಿನಯ. ನಿಜಕ್ಕೂ ವಿನಯವಂತನಾಗಿದ್ದ. ಪಟ್ಟಣದ ಹಾಸ್ಟೆಲ್ನಲ್ಲಿ ಇದ್ದುಕೊಂಡು, ಹಗಲಿರುಳೂ ಓದಿ, ಉನ್ನತ ಶ್ರೇಣಿಯಲ್ಲಿ ಕೃಷಿ ಪದವಿಯನ್ನು ಪಡೆದುಕೊಂಡಿದ್ದ. ಸರ್ಕಾರಿ ನೌಕರಿಯ ಕನಸು ಕಾಣದ ಆತ ದಿನವೂ ಪಂಚೆ ಉಟ್ಟುಕೊಂಡು, ತಲೆಗೆ ಟವಲ್ಲು ಸುತ್ತಿಕೊಂಡು ಅಪ್ಪನೊಡನೆ ಹೊಲದಲ್ಲಿ ಮಣ್ಣಿನ ಮಗನಾಗಿ ಬೆವರು ಸುರಿಸಿ ದುಡಿಯುತ್ತಿದ್ದ.

ತಾನು ಕಲಿತ ಕೃಷಿ ಪದವಿಯ ಜ್ಞಾನವನ್ನು ಬಳಸಿಕೊಂಡು ಹೊಸ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದ.

ತಾತನ ಕಾಲದಿಂದಲೂ ತನ್ನಪ್ಪ ಬೆಳೆಯುತ್ತಿದ್ದ ನಾಟಿ ದ್ರಾಕ್ಷಿ ತೋಟದಲ್ಲಿ ಹೊಸ ತಳಿಯ ಬೀಜರಹಿತ ಕಪ್ಪು ದ್ರಾಕ್ಷಿ ಸಸಿಗಳನ್ನು ವಿನಯ ನಾಟಿ ಮಾಡಿದ. ಅವುಗಳ ಬುಡಕ್ಕೆ ಹನಿ ಹನಿಯಾಗಿ ನೀರು ತೊಟ್ಟಿಕ್ಕುವಂತೆ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿದ.

ಹಾಗಾಗಿ ಬಹಳ ಬೇಗನೆ ದ್ರಾಕ್ಷಿ ಸಸಿಗಳು ಆಳೆತ್ತರಕ್ಕೆ ಬೆಳೆದುನಿಂತವು. ಮಾರುದ್ದ ಅಂತರದಲ್ಲಿ ಕಲ್ಲಿನ ಕಂಬಗಳನ್ನು ನೆಟ್ಟು ನಿರ್ಮಿಸಿದ್ದ ಚಪ್ಪರದ ತುಂಬ ಬಳ್ಳಿಯಾಗಿ ಹರಡಿಕೊಂಡವು. ಕೆಲ ತಿಂಗಳುಗಳು ಕಳೆಯುತ್ತಲೇ ದ್ರಾಕ್ಷಿ ಬಳ್ಳಿಗಳಲ್ಲಿ ಹೂವುಗಳು ಕಾಣಿಸಿಕೊಂಡವು.

ಆ ಹೂವುಗಳನ್ನು ಕೀಟಗಳು ತಿನ್ನಬಾರದು, ತಿಂದರೆ ಇಳುವರಿ ಕಡಿಮೆಯಾದೀತೆಂದು ಮುಂಜಾಗ್ರತೆಯಿಂದ ವಿನಯ ಹದಿನೈದು ದಿನಕ್ಕೊಮ್ಮೆ ರಾಸಾಯನಿಕ ಕೀಟನಾಶಕವನ್ನು ಸಿಂಪಡಿಸತೊಡಗಿದ.

ದಿನಗಳೆದಂತೆ ಹೂವುಗಳು ಸಣ್ಣ ಸಣ್ಣ ಕಾಯಿಗಳಾದವು. ಎಲೆಗಳ ಕೆಳಗೆ ಬೊಗಸೆಯಷ್ಟು ದ್ರಾಕ್ಷಿ ಕಾಯಿಗಳ ಗೊಂಚಲು ಜೋತುಬಿದ್ದವು. ಆಗ ಊರಿನಲ್ಲಿದ್ದ ಎಲ್ಲ ರೈತರ ಕಣ್ಣುಗಳು ಅರಳಿದವು. ಪಟ್ಟಣದ ಹಾಸ್ಟೆಲ್ನಲ್ಲಿದ್ದು ಓದಿ, ಹಳ್ಳಿಗೆ ಮರಳಿದ ನಿಂಗಪ್ಪನ ಮಗ ಒಳ್ಳೆಯ ಫಸಲು ಬೆಳೆಯುತ್ತಿದ್ದಾನೆ. ಇದ್ದರೆ ಇಂತಹ ಮಗ ಇರಬೇಕು ಅಂತ ಅನೇಕರು ಹೊಗಳಿದರು.

ಆದರೆ ನಿಂಗಪ್ಪನ ಹೊಲದ ಅಕ್ಕಪಕ್ಕದ ದ್ಯಾವಪ್ಪ ಮತ್ತು ಸಂಗಪ್ಪ ಮಾತ್ರ ಹೊಗಳಿಕೆಯ ಮಾತುಗಳನ್ನು ಕೇಳಿ ಹೊಟ್ಟೆಕಿಚ್ಚುಪಟ್ಟರು. ಹೇಗಾದರೂ ಮಾಡಿ ದ್ರಾಕ್ಷಿ ತೋಟವನ್ನು ನಾಶಪಡಿಸಬೇಕೆನ್ನುವ ಕೆಟ್ಟ ಯೋಚನೆ ಅವರಿಬ್ಬರಲ್ಲಿ ಮೂಡಿತು. ಒಂದು ದಿನ ರಾತ್ರಿ ಇಬ್ಬರೂ ತಮ್ಮ ನೂರಾರು ಕುರಿಗಳನ್ನು ನಿಂಗಪ್ಪನ ತೋಟದೊಳಕ್ಕೆ ನುಗ್ಗಿಸಿಬಿಟ್ಟು ತೆಪ್ಪಗೆ ನಿದ್ದೆ ಹೋದರು.

ಬೆಳಗಾಯಿತು. ದ್ಯಾವಪ್ಪ ಮತ್ತು ಸಂಗಪ್ಪನ ಕೆಟ್ಟ ಯೋಚನೆ ಅವರಿಗೇ ತಿರುಮಂತ್ರವಾಗಿತ್ತು. ಹಿಂದಿನ ದಿನ ಸಂಜೆ ವಿನಯ ದ್ರಾಕ್ಷಿ ತೋಟಕ್ಕೆ ಕೀಟನಾಶಕವನ್ನು ಸಿಂಪಡಿಸಿದ್ದ.

ಕುರಿಗಳು ಕೀಟನಾಶಕ ಅಂಟಿದ ಒಂದಿಷ್ಟು ದ್ರಾಕ್ಷಿ ಬಳ್ಳಿಯನ್ನು ತಿನ್ನುತ್ತಲೇ ಎಚ್ಚರ ತಪ್ಪಿ, ಹೊಟ್ಟೆ ಉಬ್ಬಿಕೊಂಡು ಅರೆಜೀವವಾಗಿ ಬಿದ್ದಿದ್ದವು. ಅವುಗಳನ್ನು ನೋಡಿದ ದ್ಯಾವಪ್ಪ ಮತ್ತು ಸಂಗಪ್ಪ ಇಬ್ಬರೂ ಎದೆಬಡಿದುಕೊಂಡು ಅಳತೊಡಗಿದರು. ‘ಜೀವನಕ್ಕೆ ಆಧಾರವಾಗಿರುವ ಕುರಿಗಳು ಸಾಯುತ್ತಿವೆ. ಯಾರಾದರೂ ಕಾಪಾಡಿ’ ಎಂದು ಗೋಳಾಡತೊಡಗಿದರು.

ಆಗ ತೋಟದ ಸುತ್ತಮುತ್ತಲಿನ ರೈತರೆಲ್ಲರೂ ಓಡೋಡಿ ಬಂದರು. ಕಷ್ಟಪಟ್ಟು ಬೆಳೆದ ನಿಂಗಪ್ಪನ ದ್ರಾಕ್ಷಿ ತೋಟವನ್ನು ನಾಶಪಡಿಸಲು ರಾತ್ರೋರಾತ್ರಿ ಕುರಿಗಳನ್ನು ತೋಟದೊಳಗೆ ಬಿಟ್ಟಿದ್ದೂ ಅಲ್ಲದೆ, ತಮ್ಮ ಕುರಿಗಳನ್ನು ಕಾಪಾಡಿ ಎನ್ನುತ್ತಿದ್ದಾರೆ ಇವರನ್ನು ಸುಮ್ಮನೆ ಬಿಡಬಾರದು, ಪೊಲೀಸರಿಗೆ ದೂರು ಕೊಟ್ಟು, ಇವರಿಬ್ಬರನ್ನು ಜೈಲಿಗೆ ಕಳುಹಿಸಬೇಕು. ಸುಮ್ಮನಿದ್ದರೆ ಇವರಿಬ್ಬರೂ ಪಾಠ ಕಲಿಯುವುದಿಲ್ಲವೆಂದು ನಿರ್ಧರಿಸಿದರು.

ಆ ಕೂಡಲೇ ಅಪ್ಪನೊಂದಿಗೆ ಹೊಲದತ್ತ ಧಾವಿಸಿಬಂದ ವಿನಯ, ‘ಆಗಿದ್ದು ಆಗಿ ಹೋಯಿತು. ಈಗ ಅರೆಜೀವವಾಗಿ ಬಿದ್ದಿರುವ ಮೂಕಪ್ರಾಣಿಗಳಾದ ಕುರಿಗಳನ್ನು ಬದುಕಿಸೋಣ ಬನ್ನಿ, ಎಲ್ಲರೂ ಕುರಿಗಳನ್ನು ಒಂದೊಂದಾಗಿ ಎತ್ತಿಕೊಂಡು ಬನ್ನಿ…’ ಎಂದು ಹೇಳಿದವನೇ ಕುರಿಯೊಂದನ್ನು ಎತ್ತಿಕೊಂಡು ತೋಟದ ಬದುವಿನ ಮೇಲೆ ಹೋಗಿ ಕುಳಿತ.

ಅದೇ ಬದುವಿನ ಮೇಲೆ ಬೆಳೆದಿದ್ದ ಒಂದೆರಡು ಜಾತಿಯ ಗಿಡದ ಸೊಪ್ಪನ್ನು ಕಿತ್ತುಕೊಂಡ. ಅಗಲವಾದ ಕಲ್ಲಿನ ಮೇಲೆ ಹಾಕಿ ಕುಟ್ಟಿ ಅರೆದು, ಅಗತ್ಯವಾದ ಔಷಧಿಯನ್ನು ತಯಾರಿಸಿದ. ಆ ಔಷಧಿಯನ್ನು ಕುರಿಗಳಿಗೆ ಕುಡಿಸಿದ. ಸ್ವಲ್ಪ ಸಮಯದ ಬಳಿಕ ಎಲ್ಲ ಕುರಿಗಳು ತಲೆಕೊಡವಿಕೊಂಡು ಎದ್ದು ನಿಂತವು. ‘ಬ್ಯಾ.. ಬ್ಯಾ…’ ಅಂತ ಅರಚತೊಡಗಿದವು.

ನಿಂಗಪ್ಪ ಮತ್ತು ಆತನ ಮಗ ವಿನಯನ ಶ್ರಮದ ಫಲವನ್ನು ನೋಡಲಾಗದೆ ಹೊಟ್ಟೆಕಿಚ್ಚುಪಟ್ಟು ನಾಶಪಡಿಸಲು ಹೋಗಿ ತಾವೇ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಕ್ಕೆ ದ್ಯಾವಪ್ಪ ಮತ್ತು ಸಂಗಪ್ಪ ಪಶ್ಚಾತ್ತಾಪಪಟ್ಟರು.

ಸಕಾಲಕ್ಕೆ ತಮ್ಮ ಕುರಿಗಳಿಗೆಲ್ಲ ಔಷಧಿಯುಣಿಸಿ ಕಾಪಾಡಿದ್ದಕ್ಕೆ ಇಬ್ಬರೂ ವಿನಯನ ಕಾಲಿಗೆ ಎರಗಿದರು. ಕೂಡಲೇ ವಿನಯ ಅವರ ಭುಜಗಳನ್ನು ಹಿಡಿದು ಮೇಲಕ್ಕೆ ಎತ್ತಿದ. ಪಶ್ಚಾತ್ತಾಪ ತುಂಬಿದ ಅವರಿಬ್ಬರ ಕಣ್ಣಂಚಿನಲ್ಲಿ ಹನಿಗಳು ಉದುರಿದವು.

ಕೃಪೆ: ಸಾಮಾಜಿಕತಾಣ. (ಸಾಮಾಜಿಕ ಜಾಲತಾಣದಲ್ಲಿ ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]