ದೊಡ್ಡಬಳ್ಳಾಪುರ (Doddaballapura): ಮಾ.14 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯೋರ್ವ ಶವದ ಕುರಿತು ತನಿಖೆ ನಡೆಸುತ್ತಿರುವ ತಾಲೂಕಿನ ಹೊಸಹಳ್ಳಿ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಬಂಧಿತನನ್ನು 40 ವರ್ಷದ ರಂಗಸ್ವಾಮಿ ಎಂದು ಗುರುತಿಸಲಾಗಿದೆ.
ಬಂಧಿತನ ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂಬ ಆರೋಪದ ಅಡಿಯಲ್ಲಿ ಬಂಧಿಸಿರುವುದಾಗಿ ಡಿವೈಎಸ್ಪಿ ರವಿ ಅವರು ಹರಿತಲೇಖನಿಗೆ ತಿಳಿಸಿದ್ದಾರೆ.
ಘಟನೆಯ ವಿವರ
ಇದೇ ತಿಂಗಳ 14ರಂದು ದೊಡ್ಡಬಳ್ಳಾಪುರ ತಾಲೂಕಿನ ಗರಿಕೇನಹಳ್ಳಿ ಗ್ರಾಮದ 40 ವರ್ಷದ ಗಂಗರತ್ಮಮ್ಮ ಎನ್ನುವ ಮಹಿಳೆಯ ಶವ ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ಕುರಿತು ದಾಖಲಾದ ದೂರಿನ ಅನ್ವಯ ಎಸ್ಪಿ ಸಿಕೆ ಬಾಬಾ, ಡಿವೈಎಸ್ಪಿ ರವಿ ಅವರ ಸೂಚನೆಯ ಮೇರೆಗೆ ಹೊಸಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ತನಿಖೆ ಆರಂಭಿಸಿದರು.

ಈ ವೇಳೆ ಆರೋಪಿ ರಂಗಸ್ವಾಮಿಯನ್ನು ಬಂಧಿಸಿ, ಮೊಬೈಲ್ ಕರೆ ಆಧರಿಸಿ ತನಿಖೆ ನಡೆಸಿದಾಗ ಮಾ.13 ರಂದು ಸಂಜೆ ರಂಗಸ್ವಾಮಿ ಮಡದಿಯೊಂದಿಗೆ ಕೌಟುಂಬಿಕ ಕಲಹಕ್ಕೆ ನೀನೆ (ಗಂಗರತ್ನಮ್ಮ) ಕಾರಣ, ಎಲ್ಲಾದ್ರೂ ಹೋಗಿ ಸಾಯಿ ಎಂಬಂತೆ ಆತ್ಮಹತ್ಯೆಗೆ ಪ್ರಚೋದನೆ ಮಾಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.
ನಂತರ ಆರೋಪಿ ರಂಗಸ್ವಾಮಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ತನಿಖೆ ಪೊಲೀಸರ ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.