Doddaballapura: Public awareness is necessary to make the country free from tuberculosis

Doddaballapura: ದೇಶವನ್ನು ಕ್ಷಯ ಮುಕ್ತವಾಗಿಸಲು ಜನ ಜಾಗೃತಿ ಅಗತ್ಯ

ದೊ॑ಡ್ಡಬಳ್ಳಾಪುರ (Doddaballapura); ದೇಶವನ್ನು ಕ್ಷಯ ಮುಕ್ತ ದೇಶವನ್ನಾಗಿಸಲು ಗ್ರಾಮ ಪಂಚಾಯಿತಿಗಳಿಂದ ಹಿಡಿದು ನಗರ ಪ್ರದೇಶ ಸೇರಿದಂತೆ ಎಲ್ಲರಲ್ಲೂ ಜಾಗೃತಿ ಮೂಡಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಲೆಕ್ಕ ಕೃಷ್ಣಾರೆಡ್ಡಿ ಹೇಳಿದರು.

ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಘಟಕದ ವತಿಯಿಂದ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷಯರೋಗದಿಂದ ಗುಣವಾಗಿರುವ ಟಿ.ಬಿ ಚಾಂಪಿಯನ್ಗಳಿಗೆ ತರಬೇತಿ ನೀಡಲಾಗುತ್ತಿದ್ದು, ಇವರು ಹೊಸ ಕ್ಷಯ ರೋಗಿಗಳಿಗೆ ಮನೋಸ್ಥರ‍್ಯ ನೀಡಿ ಚಿಕಿತ್ಸೆ ಪರ‍್ಣವಾಗಿ ಪಡೆಯಲು ಮನವೊಲಿಸಲಿದ್ದಾರೆ.

ಕ್ಷಯ ರೋಗವು ಗಾಳಿಯಲ್ಲಿ ಬಹುಬೇಗ ಹರಡುವ ಕಾಯಿಲೆಯಾಗಿದ್ದು, ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತ ಕೆಮ್ಮು, ಜ್ವರ ಸಂಜೆ ವೇಳೆ ಹೆಚ್ಚಳ, ತೂಕ ಕಡಿಮೆಯಾಗುವುದು ಪ್ರಮುಖ ಲಕ್ಷಣವಾಗಿದ್ದು, ವೈದ್ಯರು ಹೇಳುವವರೆಗೆ ನಿರಂತರ ಚಿಕಿತ್ಸೆಯಿಂದ ಮಾತ್ರ ಕ್ಷಯ ರೋಗ ಸಂಪರ‍್ಣ ಗುಣಮುಖವಾಗಲು ಸಾಧ್ಯ.

ಟಿಬಿಯು ಶ್ವಾಸಕೋಶಗಳಿಗಷ್ಟೇ ಅಲ್ಲದೇ ದೇಹದ ಇನ್ನಿತರ ಭಾಗಗಳಿಗೂ ಹರಡಬಹುದು. ರೋಗ ನಿರ್ಣಯಿಸಿದ ಎಲ್ಲಾ ಪ್ರಕರಣಗಳಿಗೆ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಕಫವನ್ನು ಪರೀಕ್ಷಿಸಿಕೊಳ್ಳಬೇಕಿದೆ.

ದೇಶವನ್ನು ಕ್ಷಯ ಮುಕ್ತವನ್ನಾಗಿಸಲು ಸಮುದಾಯದ ಸಹಕಾರದೊಂದಿಗೆ ಟಿ.ಬಿ ಚಾಂಪಿಯನ್ಗಳ ಸಹಕಾರ ಸಹ ಅಗತ್ಯವಾಗಿದೆ.

ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಲ್ಲಿ, ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಗಳಲ್ಲಿ, ಸಮುದಾಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಾಜರಾಗಿ ಜಾಗೃತಿ ಮೂಡಿಸುವುದು ಟಿ.ಬಿ ಬಗ್ಗೆ ಅರಿವು ಮೂಡಿಸುವುದು ಟಿಬಿ ಬಗ್ಗೆ ಇರುವಂತಹ ಕಳಂಕ ತಾರತಮ್ಯವನ್ನು ಹೋಗಲಾಡಿಸಿ ಕ್ಷಯ ಮುಕ್ತ ಭಾರತವನ್ನು ಮಾಡಲು ಕೈಜೋಡಿಸುವುದು. ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಮಾಡುವಂತೆ ಮನವರಿಕೆ ಮಾಡುವುದು. ಆಯ್ದ ಚಾಂಪಿಯನ್ ಆಯ್ಕೆ ಮಾಡಿ ತರಬೇತಿಯನ್ನು ನೀಡುವುದು ತರಬೇತಿ ಪಡೆದ ಟಿಬಿ ಚಾಂಪಿಯನ್ ಮುಂದಿನ ದಿನಗಳಲ್ಲಿ ಬರುವ ಹೊಸ ಟಿಬಿ ರೋಗಿಗಳಿಗೆ ಮನೋಸ್ಥರ‍್ಯ ನೀಡಿ ಚಿಕಿತ್ಸೆ ಪರ‍್ಣವಾಗಿ ಪಡೆಯಲು ಮನವೊಲಿಸುವುದು ಕರ‍್ಯಕ್ರಮದ ಧ್ಯೇಯವಾಗಿದೆ ಎಂದರು.

ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ.ನಾಗೇಶ್ ಮಾತನಾಡಿ, ಈಗಾಗಲೇ ತಾಲೂಕಿನ ವ್ಯಾಪ್ತಿಯಲ್ಲಿ ಚಿಕಿತ್ಸೆಯನ್ನು ಪಡೆದು ಟಿಬಿ ಯಿಂದ ಗುಣಮುಖರಾಗಿರುವ ವ್ಯಕ್ತಿಗಳು ಟಿಬಿ ಚಾಂಪಿಯನ್ಗಳಾಗಿ ತರಬೇತಿ ನೀಡುತ್ತಿದ್ದಾರೆ. ಒಂದು ವೇಳೆ ಚಿಕಿತ್ಸೆ ಪ್ರಾರಂಭಿಸಿದ ನಂತರ ರೋಗಿಯು ರ‍್ಧದಲ್ಲಿ ಚಿಕಿತ್ಸೆ ಬಿಟ್ಟರೆ ಆತನಿಗೆ ತನ್ನ ಚಿಕಿತ್ಸೆ ಯ ಅನುಭವಗಳು ಮತ್ತು ಉದಾಹರಣೆಗಳನ್ನು ನೀಡುವುದರ ಮೂಲಕ ಚಿಕಿತ್ಸೆಯನ್ನು ಮುಂದುವರಿಸಲು ಆಪ್ತ ಸಮಾಲೋಚನೆ ಮಾಡಲಾಗುವುದು ಎಂದರು.

ಟಿ.ಬಿ ಗೆದ್ದ ವ್ಯಕ್ತಿಗಳಿಂದ ಟಿಬಿ ಚಾಂಪಿಯನ್ಗಳಾಗಿ ಪರಿವರ್ತಿಸಿದವರ ಸಮ್ಮುಖದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಆಚರಿಸಿದ್ದು ವಿಶೇಷವಾಗಿತ್ತು.

ಕಾರ‍್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾರದಾ ನಾಗನಾಥ್, ಸೇರಿದಂತೆ ಜಿಲ್ಲಾ ಕ್ಷಯ ರೋಗ ನಿರಂತರ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!