GST reform; Modi government's Diwali gift to the people of the country: H.D. Kumaraswamy happy

ಜೆಡಿಎಸ್, ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದು ಸತ್ಯಕ್ಕೆ ದೂರ: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್; ಜೆಡಿಎಸ್ (JDS) – ಬಿಜೆಪಿ (BJP) ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರಿಗೆ ಚೆಕ್ ಮೆಟ್ ಇಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ‌.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ. ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ NDA ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ.

ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ನೇರ ಆರೋಪ ಮಾಡಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದಿರುವ ಅವರು, ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ.

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!