Daily story: Known for his grumpiness

ಹರಿತಲೇಖನಿ ದಿನಕ್ಕೊಂದು ಕಥೆ: ಮುಂಗೋಪಕ್ಕೆ ಹೆಸರುವಾಸಿ

Daily story: ದೂರ್ವಾಸ ಅತ್ರಿ ಮುನಿ ಮತ್ತು ಅನಸೂಯ ದಂಪತಿಗಳ ಮಗ. ಇವರು ತನ್ನ ಮುಂಗೋಪಕ್ಕೆ ಹೆಸರುವಾಸಿ. ಇದರಿಂದಾಗಿ ಮಾನವರಿಂದ ಹಾಗೂ ದೇವತೆಗಳಿಂದ ಅತ್ಯಂತ ಹೆಚ್ಚು ಗೌರವ ಪಡೆಯುತ್ತಿದ್ದರು.

ಮಹಾಭಾರತದಲ್ಲಿ, ರಾಜಕುಮಾರಿ ಕುಂತಿಯು ಮಾಡಿದ ಶುಶ್ರೂಷೆಯಿಂದ ಸಂತೃಪ್ತಿಗೊಂಡು ಆಕೆಗೆ ಯಾವ ದೇವತೆಯನ್ನಾದರೂ ವಶಪಡಿಸಿಕೊಳ್ಳಬಹುದಾದ ಮಹಿಮೆಯುಳ್ಳ ಮಂತ್ರಗಳನ್ನು ಉಪದೇಶಿಸಿದ.

ಆ ಮಂತ್ರಗಳ ಮಹಿಮೆಯಿಂದಲೇ ಕುಂತಿ ಕರ್ಣ ಯುಧಿಷ್ಠಿರ ಭೀಮಾರ್ಜುನರನ್ನೂ ಮಾದ್ರಿ ನಕುಲ ಸಹದೇವರನ್ನೂ ಪಡೆದುದು.

ಅಂತಹ ಮಂತ್ರದ ‘ಅದ್ಭುತ’ ಶಕ್ತಿಯನ್ನು , ಕುಂತಿಯು ಪರೀಕ್ಷಿಸುವ ಉದ್ದೇಶದಿಂದ, ಸೂರ್ಯನ ಮೇಲೆ ಪ್ರಯೋಗಿಸಿದಾಗ, ಸೂರ್ಯ ಪ್ರತ್ಯಕ್ಷನಾಗಿದ್ದನ್ನು ಕಂಡು ಹೆದರಿದವಳಾದಳು ಮತ್ತು ಹಿಂತಿರುಗಿ ಹೋಗಲು ಬೇಡಿಕೊಂಡಳು. ಆದರೆ, ಸೂರ್ಯನು ಹೋಗುವ ಮುನ್ನ ಮಂತ್ರದ ಫಲವನ್ನು ನೀಡಿಯೇ /ಪೂರೈಸಿಯೇ ಹೋಗಬೇಕಾಗುತ್ತದೆ.

ಸೂರ್ಯನು ತನ್ನ ಮಾಯಾ ಶಕ್ತಿಯಿಂದ ‘ಕುಂತಿ’ ಗೆ ಮಗುವೊಂದನ್ನು ದಯಪಾಲಿಸಿ, ಆಕೆಯ ಶೀಲವನ್ನೂ ಸಹ ಉಳಿಸಿ ಹೋಗುತ್ತಾನೆ. ಇದರಿಂದಾಗಿ ಮದುವೆಯಾಗದ ರಾಜಕುಮಾರಿಗೆ ‘ಮಗು’ ಹೇಗಾದೀತು? ಎಂಬ ಮುಜುಗರದಿಂದ ಪಾರು ಮಾಡುತ್ತಾನೆ ಅಥವಾ ಸಮಾಜದ ಪ್ರಶ್ನೆಗಳಿಗೆ ಆಸ್ಪದ ಇಲ್ಲದಂತೆ ಮಾಡುತ್ತಾನೆ.

ಕುಂತಿಯು ಮಗುವನ್ನು ತನ್ನ ಬಳಿ ಇಟ್ಟುಕೊಳ್ಳಲು ಹಿಂಜರಿಯುತ್ತಾಳೆ. ಕುರುಕ್ಷೇತ್ರ ದ ಮಹಾಯುದ್ಧದಲ್ಲಿ , ಕರ್ಣ ನು ಒಂದು ‘ಕೇಂದ್ರೀಯ’ ಮಹಾಪಾತ್ರವನ್ನು ಹೊಂದಿ ಬೆಳೆಯುತ್ತಾನೆ. ವೃತ್ತಿಯಲ್ಲಿ ಚಮ್ಮಾರರಾಗಿದ್ದರು.

ದುರ್ಯೋಧನ ದುರ್ವಾಸನಿಗೆ ಹಲವು ಆತಿಥ್ಯ ಮಾಡಿ ಅನುಗ್ರಹಕ್ಕೆ ಪಾತ್ರನಾಗಿ, ವನವಾಸದಲ್ಲಿದ್ದ ಪಾಂಡವರಲ್ಲಿಗೆ ಅವೇಳೆಯಲ್ಲಿ ಹೋಗಿ ಅನ್ನವನ್ನು ಬೇಡಿ , ಅವರಿಗೆ ಶಾಪ ಕೊಡಬೇಕೆಂದು ಹೇಳಿ ಕಳುಹಿಸಿದ. ಆದರೆ ಶ್ರೀಕೃಷ್ಣನ ಕೃಪೆಯಿದ್ದ ಪಾಂಡವರಲ್ಲಿ ಊಟ ಮಾಡದೇ ಹೊಟ್ಟೆ ತುಂಬಿತಾಗಿ ದುರ್ವಾಸ ತನ್ನ ಶಿಷ್ಯರೊಂದಿಗೆ ಅಲ್ಲಿಂದ ಹೊರಟುಹೋದ.

ಒಮ್ಮೆ ಅಂಬರೀಷನಲ್ಲಿಗೆ ಹೋಗಿ, ಅವನನ್ನು ಕೊಲ್ಲಲು ದುರ್ದೇವತೆಯನ್ನು ಸೃಷ್ಟಿಸಿದ. ಅಂಬರೀಷ ವಿಷ್ಣುಚಕ್ರವನ್ನು ಪ್ರಾರ್ಥಿಸಲು ಅದರ ಭಯದಿಂದ ಅಂಬರೀಷನನ್ನೇ ಮರೆಹೊಕ್ಕು ಬದುಕಿಕೊಂಡ.

ಶ್ವೇತಕಿಯೆಂಬ ಅರಸನಿಂದ ಅನೇಕ ಯಜ್ಞಗಳನ್ನು ಮಾಡಿಸಿದ, ಕುರುಕ್ಷೇತ್ರದಲ್ಲಿ ವಾಸಮಾಡುವ ಮುದ್ಗಲ ಅಥವಾ ವ್ರೀಹಿದ್ರೋಣನೆಂಬ ವಹರ್ಷಿಯನ್ನು ಪರೀಕ್ಷಿಸಿ ಅನುಗ್ರಹಿಸಿದ.

ಒಮ್ಮೆ ಈತ ದೇವಲೋಕಸಂಚಾರ ಮಾಡಿ ಬರುತ್ತಿರಲು ವಿದ್ಯಾಧರೆಯೊಬ್ಬಳ ಕೈಯಲ್ಲಿದ್ದ ಹೂಮಾಲೆಯನ್ನು ಕಂಡು, ಮೋಹಭರಿತನಾಗಿ ಅವಳಲ್ಲಿ ಬೇಡಿ ಅದನ್ನು ಪಡೆದು, ತಲೆಗೆ ಸುತ್ತಿಕೊಂಡು ಬರುತ್ತಿದ್ದ.

ಆಗ ಇಂದ್ರ ಶಚಿಯೊಂದಿಗೆ ಐರಾವತದ ಮೇಲೆ ಬರುತ್ತಿರುವುದನ್ನು ಕಂಡು ಆ ಮಾಲೆಯನ್ನು ಇಂದ್ರನ ಮೇಲೆಸೆದ. ಇಂದ್ರ ಅದನ್ನು ಐರಾವತದ ಕುಂಭ ಸ್ಥಳದ ಮೇಲೆ ಹಾಕಿದ. ಐರಾವತ ಅದರ ಪರಿಮಳದಿಂದ ಮದಿಸಿ ಹೂಮಾಲೆಯನ್ನು ನೆಲಕ್ಕೆಸೆಯಿತು. ಇದರಿಂದ ಕ್ರೋಧಗೊಂಡ ದುರ್ವಾಸ ಆತನ ಮೂರು ಲೋಕದ ಸಂಪತ್ತೂ ನಾಶವಾಗಲಿ ಎಂದು ಶಾಪವಿತ್ತ.

ಒಮ್ಮೆ ಭೂಪ್ರದಕ್ಷಿಣೆಗೆ ಹೊರಟ ಈ ಮುನಿ ಕಾಶೀ ಕ್ಷೇತ್ರಕ್ಕೆ ಬಂದ, ಒಡನೆಯೇ ಈತನ ಮನಸ್ಸು ಶಾಂತಿ ಸಮಾಧಾನಗಳಿಂದ ತುಂಬಿತು. ಕಾಶೀ ಕ್ಷೇತ್ರವನ್ನು ಹೊಗಳಿ ತಪಸ್ಸು ಮಾಡಲಾರಂಭಿಸಿದ. ಆದರೆ ಭಗವಂತ ಪ್ರಸನ್ನನಾಗಲಿಲ್ಲ.

ಕ್ರೋಧಗೊಂಡ ಮುನಿ ಕ್ಷೇತ್ರವನ್ನೇ ಶಪಿಸಲು ಮನಸ್ಸು ಮಾಡಿದ. ಇದನ್ನರಿತ ಈಶ್ವರ ಮೈದೋರಿ ಮುನಿಯನ್ನು ಸಮಾಧಾನ ಪಡಿಸಿ, ಮುಕ್ತಿ ದೊರೆಯುವ ಈ ಕ್ಷೇತ್ರದಲ್ಲಿ ನೀನು ಬೇಡುವ ವರವಾದರೂ ಯಾವುದು ಎಂದು ಕೇಳಿದ. ಆಗ ಮುನಿ ತನ್ನ ತಿಳಿಗೇಡಿತನಕ್ಕೆ ತಾನೇ ನಾಚಿ ಭಗವಂತನನ್ನು ಪ್ರಾರ್ಥಿಸಿ ಜ್ಞಾನಸಿದ್ಧಿಯನ್ನು ಪಡೆದರು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]