Karnataka's Exports: Debate to Increase to 100 Billion; MB Patila

ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ ಪಾಟೀಲ

ಬೆಂಗಳೂರು: ಕರ್ನಾಟಕವನ್ನು ತಯಾರಿಕಾ ವಲಯದ ಆಡುಂಬೊಲವನ್ನಾಗಿ ಮಾಡುವ ನಿಟ್ಟಿನಲ್ಲಿ ಏಪ್ರಿಲ್ ತಿಂಗಳ ಕೊನೆಯಲ್ಲಿ ನಡೆಸಲು ಉದ್ದೇಶಿಸಿರುವ ಎರಡು ದಿನಗಳ `ಉತ್ಪಾದನಾ ಮಂಥನ;’ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patila) ಮಂಗಳವಾರ ಖನಿಜ ಭವನದಲ್ಲಿ ಗಣ್ಯ ಉದ್ಯಮಿಗಳು ಹಾಗೂ ಅಧಿಕಾರಿಳೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, `ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ.

ಇದಕ್ಕಾಗಿ ರಾಜ್ಯ ಮಟ್ಟದಲ್ಲಿ ನೀತಿ ನಿರೂಪಣೆಯಲ್ಲಿ ಆಗಬೇಕಾಗಿರುವ ಕೆಲಸಗಳೇನೇನು ಮತ್ತು ಕೇಂದ್ರ ಸರಕಾರದ ಮಟ್ಟದಲ್ಲಿ ಆಗಬೇಕಿರುವ ಬದಲಾವಣೆಗಳೇನು ಎನ್ನುವುದನ್ನು ಕುರಿತು ಚರ್ಚಿಸಲಾಯಿತು. ಕೆಲವೇ ದಿನಗಳಲ್ಲಿ ಮತ್ತೊಂದು ಸಭೆ ನಡೆಸಲಾಗುವುದು’ ಎಂದಿದ್ದಾರೆ.

ರಾಜ್ಯದ ಕೈಗಾರಿಕಾ ವಲಯವು ಮುಖ್ಯವಾಗಿ ಸೇವಾಧಾರಿತ ಚಟುವಟಿಕೆಗಳನ್ನು ಹೊಂದಿದೆ. ಇದರ ಜೊತೆಯಲ್ಲೇ ನಾವು ಸ್ಥಳೀಯವಾಗಿಯೇ ಉತ್ಪನ್ನಗಳ ತಯಾರಿಕೆಗೂ ಆದ್ಯತೆ ಕೊಡಬೇಕು.

ರಾಜ್ಯದಲ್ಲಿ ಅಪಾರ ಸಂಖ್ಯೆಯಲ್ಲಿ ನವೋದ್ಯಮಗಳಿದ್ದು, ಅವುಗಳಲ್ಲಿ ಎಷ್ಟೋ ಕಂಪನಿಗಳು 250 ಕೋಟಿ ರೂ. ತನಕ ವಹಿವಾಟು ನಡೆಸುತ್ತಿವೆ. ಇವುಗಳನ್ನು ಕೂಡ ಉತ್ಪಾದನಾ ಮಂಥನದ ಭಾಗವನ್ನಾಗಿ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ, ನೆರೆಹೊರೆಯ ರಾಜ್ಯಗಳಲ್ಲೂ ಉತ್ಪಾದನಾ ವಲಯಗಳಲ್ಲಿ ನೂರಾರು ಕಂಪನಿಗಳು ಸಕ್ರಿಯವಾಗಿವೆ. ಅವುಗಳನ್ನು ಕೂಡ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು.

ಮಂಥನದಲ್ಲಿ ಪಾಲ್ಗೊಳ್ಳಲಿರುವ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಮಾಡಲು ಏನೇನು ಕ್ರಮ ಕೈಗೊಳ್ಳಬೇಕು ಎಂದು ಗಂಭೀರವಾಗಿ ಚಿಂತಿಸಲಾಗುತ್ತಿದೆ ಎಂದು ಅವರು ನುಡಿದಿದ್ದಾರೆ.

ರಾಜ್ಯದಲ್ಲಿ ಹಲವು ಬಗೆಯ ತಯಾರಿಕಾ ಕಂಪನಿಗಳು ಚದುರಿದಂತೆ ಇವೆ. ಆದ್ದರಿಂದ ಹಳೆ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗಗಳಲ್ಲಿ ಏನೇನು ಉಪಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತಿಸಲಾಗುತ್ತಿದೆ.

ಇದನ್ನು ಕಾರ್ಯರೂಪಕ್ಕೆ ತರಲು ನಿರ್ದಿಷ್ಟ ಕಾರ್ಯತಂತ್ರಗಳ ಅವಶ್ಯಕತೆ ಇರುವುದನ್ನು ಮನಗಾಣಲಾಗಿದೆ. ಈ ನಿಟ್ಟಿನಲ್ಲಿ ಪರಿಣತ ಉದ್ಯಮಿಗಳ ಸಲಹೆ ಮತ್ತು ಮಾರ್ಗದರ್ಶನಗಳನ್ನು ಸರಕಾರ ಪಡೆದುಕೊಳ್ಳಲಿದೆ ಎಂದು ಪಾಟೀಲ ಹೇಳಿದ್ದಾರೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಏಕಸ್ ಕಂಪನಿಯ ಅಧ್ಯಕ್ಷ ಅರವಿಂದ ಮೆಳ್ಳಿಗೇರಿ, `ರಾಜ್ಯದಲ್ಲಿನ ತಯಾರಿಕಾ ವಲಯವು ಗಣನೀಯ ಪ್ರಮಾಣದಲ್ಲಿ ಸುಧಾರಿಸಬೇಕಾಗಿದೆ.

ನಿದರ್ಶನಕ್ಕೆ ಹೇಳುವುದಾದರೆ, ಉಕ್ಕು ತಯಾರಿಕೆಯಲ್ಲಿ ನಾವು ಮುಂಚೂಣಿಯಲ್ಲಿದ್ದರೂ ವೈಮಾನಿಕ ಎಂಜಿನ್ ತಯಾರಿಸುವಂತಹ ಉತ್ಕೃಷ್ಟ ಗುಣಮಟ್ಟ ನಮ್ಮಲ್ಲಿಲ್ಲ. ಹೀಗಾಗಿ ನಾವು ಇಂಥದ್ದಕ್ಕೆಲ್ಲ ಬೇರೆ ದೇಶಗಳನ್ನೇ ಅವಲಂಬಿಸಬೇಕಾಗಿದೆ.

ಪಾಶ್ಚಾತ್ಯ ದೇಶಗಳಲ್ಲಿ ಇರುವ ಗುಣಮಟ್ಟ ನಮಗೊಂದು ಮಾದರಿಯಾಗಬೇಕು’ ಎಂದು ಸಲಹೆ ನೀಡಿದ್ದಾರೆ.

ವರ್ಚುಯಲ್ ಆಗಿ ಪಾಲ್ಗೊಂಡಿದ್ದ ಉದ್ಯಮಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಮುಂದುವರಿದ ದೇಶಗಳಲ್ಲಿರುವ ಕೈಗಾರಿಕಾ ವಲಯದ ಚಿತ್ರಣವನ್ನು ವಿವರಿಸಿದರು. ಉತ್ಪಾದನಾ ಮಂಥನದಲ್ಲಿ ಶೇ 25ರಿಂದ 30ರಷ್ಟು ಉದ್ಯಮಗಳು ನವೋದ್ಯಮ ವಲಯದಿಂದ ಬರುವ ಹಾಗೆ ಮಾಡಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ತಾಂತ್ರಿಕ ನಿರ್ದೇಶಕ ರಮೇಶ ಉಪಸ್ಥಿತರಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!