Karnataka's Exports: Debate to Increase to 100 Billion; MB Patila

ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ ಪಾಟೀಲ

ಬೆಂಗಳೂರು: ಕರ್ನಾಟಕವನ್ನು ತಯಾರಿಕಾ ವಲಯದ ಆಡುಂಬೊಲವನ್ನಾಗಿ ಮಾಡುವ ನಿಟ್ಟಿನಲ್ಲಿ ಏಪ್ರಿಲ್ ತಿಂಗಳ ಕೊನೆಯಲ್ಲಿ ನಡೆಸಲು ಉದ್ದೇಶಿಸಿರುವ ಎರಡು ದಿನಗಳ `ಉತ್ಪಾದನಾ ಮಂಥನ;’ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patila) ಮಂಗಳವಾರ ಖನಿಜ ಭವನದಲ್ಲಿ ಗಣ್ಯ ಉದ್ಯಮಿಗಳು ಹಾಗೂ ಅಧಿಕಾರಿಳೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, `ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ.

ಇದಕ್ಕಾಗಿ ರಾಜ್ಯ ಮಟ್ಟದಲ್ಲಿ ನೀತಿ ನಿರೂಪಣೆಯಲ್ಲಿ ಆಗಬೇಕಾಗಿರುವ ಕೆಲಸಗಳೇನೇನು ಮತ್ತು ಕೇಂದ್ರ ಸರಕಾರದ ಮಟ್ಟದಲ್ಲಿ ಆಗಬೇಕಿರುವ ಬದಲಾವಣೆಗಳೇನು ಎನ್ನುವುದನ್ನು ಕುರಿತು ಚರ್ಚಿಸಲಾಯಿತು. ಕೆಲವೇ ದಿನಗಳಲ್ಲಿ ಮತ್ತೊಂದು ಸಭೆ ನಡೆಸಲಾಗುವುದು’ ಎಂದಿದ್ದಾರೆ.

ರಾಜ್ಯದ ಕೈಗಾರಿಕಾ ವಲಯವು ಮುಖ್ಯವಾಗಿ ಸೇವಾಧಾರಿತ ಚಟುವಟಿಕೆಗಳನ್ನು ಹೊಂದಿದೆ. ಇದರ ಜೊತೆಯಲ್ಲೇ ನಾವು ಸ್ಥಳೀಯವಾಗಿಯೇ ಉತ್ಪನ್ನಗಳ ತಯಾರಿಕೆಗೂ ಆದ್ಯತೆ ಕೊಡಬೇಕು.

ರಾಜ್ಯದಲ್ಲಿ ಅಪಾರ ಸಂಖ್ಯೆಯಲ್ಲಿ ನವೋದ್ಯಮಗಳಿದ್ದು, ಅವುಗಳಲ್ಲಿ ಎಷ್ಟೋ ಕಂಪನಿಗಳು 250 ಕೋಟಿ ರೂ. ತನಕ ವಹಿವಾಟು ನಡೆಸುತ್ತಿವೆ. ಇವುಗಳನ್ನು ಕೂಡ ಉತ್ಪಾದನಾ ಮಂಥನದ ಭಾಗವನ್ನಾಗಿ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ, ನೆರೆಹೊರೆಯ ರಾಜ್ಯಗಳಲ್ಲೂ ಉತ್ಪಾದನಾ ವಲಯಗಳಲ್ಲಿ ನೂರಾರು ಕಂಪನಿಗಳು ಸಕ್ರಿಯವಾಗಿವೆ. ಅವುಗಳನ್ನು ಕೂಡ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು.

ಮಂಥನದಲ್ಲಿ ಪಾಲ್ಗೊಳ್ಳಲಿರುವ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಮಾಡಲು ಏನೇನು ಕ್ರಮ ಕೈಗೊಳ್ಳಬೇಕು ಎಂದು ಗಂಭೀರವಾಗಿ ಚಿಂತಿಸಲಾಗುತ್ತಿದೆ ಎಂದು ಅವರು ನುಡಿದಿದ್ದಾರೆ.

ರಾಜ್ಯದಲ್ಲಿ ಹಲವು ಬಗೆಯ ತಯಾರಿಕಾ ಕಂಪನಿಗಳು ಚದುರಿದಂತೆ ಇವೆ. ಆದ್ದರಿಂದ ಹಳೆ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗಗಳಲ್ಲಿ ಏನೇನು ಉಪಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತಿಸಲಾಗುತ್ತಿದೆ.

ಇದನ್ನು ಕಾರ್ಯರೂಪಕ್ಕೆ ತರಲು ನಿರ್ದಿಷ್ಟ ಕಾರ್ಯತಂತ್ರಗಳ ಅವಶ್ಯಕತೆ ಇರುವುದನ್ನು ಮನಗಾಣಲಾಗಿದೆ. ಈ ನಿಟ್ಟಿನಲ್ಲಿ ಪರಿಣತ ಉದ್ಯಮಿಗಳ ಸಲಹೆ ಮತ್ತು ಮಾರ್ಗದರ್ಶನಗಳನ್ನು ಸರಕಾರ ಪಡೆದುಕೊಳ್ಳಲಿದೆ ಎಂದು ಪಾಟೀಲ ಹೇಳಿದ್ದಾರೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಏಕಸ್ ಕಂಪನಿಯ ಅಧ್ಯಕ್ಷ ಅರವಿಂದ ಮೆಳ್ಳಿಗೇರಿ, `ರಾಜ್ಯದಲ್ಲಿನ ತಯಾರಿಕಾ ವಲಯವು ಗಣನೀಯ ಪ್ರಮಾಣದಲ್ಲಿ ಸುಧಾರಿಸಬೇಕಾಗಿದೆ.

ನಿದರ್ಶನಕ್ಕೆ ಹೇಳುವುದಾದರೆ, ಉಕ್ಕು ತಯಾರಿಕೆಯಲ್ಲಿ ನಾವು ಮುಂಚೂಣಿಯಲ್ಲಿದ್ದರೂ ವೈಮಾನಿಕ ಎಂಜಿನ್ ತಯಾರಿಸುವಂತಹ ಉತ್ಕೃಷ್ಟ ಗುಣಮಟ್ಟ ನಮ್ಮಲ್ಲಿಲ್ಲ. ಹೀಗಾಗಿ ನಾವು ಇಂಥದ್ದಕ್ಕೆಲ್ಲ ಬೇರೆ ದೇಶಗಳನ್ನೇ ಅವಲಂಬಿಸಬೇಕಾಗಿದೆ.

ಪಾಶ್ಚಾತ್ಯ ದೇಶಗಳಲ್ಲಿ ಇರುವ ಗುಣಮಟ್ಟ ನಮಗೊಂದು ಮಾದರಿಯಾಗಬೇಕು’ ಎಂದು ಸಲಹೆ ನೀಡಿದ್ದಾರೆ.

ವರ್ಚುಯಲ್ ಆಗಿ ಪಾಲ್ಗೊಂಡಿದ್ದ ಉದ್ಯಮಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಮುಂದುವರಿದ ದೇಶಗಳಲ್ಲಿರುವ ಕೈಗಾರಿಕಾ ವಲಯದ ಚಿತ್ರಣವನ್ನು ವಿವರಿಸಿದರು. ಉತ್ಪಾದನಾ ಮಂಥನದಲ್ಲಿ ಶೇ 25ರಿಂದ 30ರಷ್ಟು ಉದ್ಯಮಗಳು ನವೋದ್ಯಮ ವಲಯದಿಂದ ಬರುವ ಹಾಗೆ ಮಾಡಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ತಾಂತ್ರಿಕ ನಿರ್ದೇಶಕ ರಮೇಶ ಉಪಸ್ಥಿತರಿದ್ದರು.

ರಾಜಕೀಯ

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು" ಎಂದು

[ccc_my_favorite_select_button post_id="120333"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!