Not by the self-proclaimed 'Pujya', but by the BJP organization workers themselves; Yatnal

ಬಿಜೆಪಿ ಸಂಘಟನೆ ಕಾರ್ಯಕರ್ತರಿಂದಲೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ; ಯತ್ನಾಳ್ ವಾಗ್ದಾಳಿ

ಬೆಂಗಳೂರು: ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Basana gouda Patila Yatnal) ಹೇಳಿದ್ದಾರೆ.

ಬಿಜೆಪಿಯಿಂದ 6 ವರ್ಷಗಳ ಉಚ್ಚಾಟನೆ ಬಳಿಕ ಇಂದು ಟ್ವಿಟ್ ಮಾಡಿರುವ ಅವರು, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ.

ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ, ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಜಸ್ಟ್ಮೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ್.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು.

ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು.

ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ.

ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ.

Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!