Yatnal expelled after Amit Shah's visit: Basavaraja Bommai said this

ಅಮಿತ್ ಶಾ ಭೇಟಿ ಬೆನ್ನಲ್ಲೇ ಯತ್ನಾಳ್ ಉಚ್ಚಾಟನೆ: ಬಸವರಾಜ ಬೊಮ್ಮಾಯಿ ಹೇಳಿದ್ ಇಷ್ಟು

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು (Basavaraja Bommai) ನವ ದೆಹಲಿಯಲ್ಲಿ ಸೋಮವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ‌. ಇದರ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇನ್ನೂ ಈ ಕುರಿತು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ವಿಷಯದ ಬಗ್ಗೆ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಸಂಜೆ 6 ಗಂಟೆವರೆಗೂ ಸಂಸತ್ತಿನಲ್ಲಿ ಇದ್ದೆವು. ಅಲ್ಲಿಂದ ಹೊರಗೆ ಬಂದಾಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯ ಸುದ್ದಿ ಕೇಳಿ ಬಂದಿತು.

ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ ತನ್ನದೇ ಆದ ನೀತಿ ನಿರ್ಧಾರಗಳನ್ನು ಹಾಕಿಕೊಂಡಿರುವ ಪಕ್ಷ. ಕರ್ನಾಟಕದ ವಿಚಾರದಲ್ಲಿ ಕಳೆದ ಒಂದು ವರ್ಷದಿಂದ ಪಕ್ಷದ ಹೈಕಮಾಂಡ್ ಎಲ್ಲರನ್ನು ಕರೆದು ಮಾತನಾಡಿಸಿ ಒಗ್ಗೂಡಿಸುವ ಪ್ರಯತ್ನ ಮಾಡಿದೆ ಎಂದು ಹೇಳಿದರು.

ಈಗ ಶಿಸ್ತು ಮುಖ್ಯ ಎಂದು ಒಂದು ಕಾಲಘಟ್ಟಕ್ಕೆ ಬಂದಿರುವುದರಿಂದ ಕೆಲವರಿಗೆ ನೊಟೀಸ್ ಕೊಟ್ಟಿದ್ದಾರೆ. ಕೆಲವರ ಮೇಲೆ ಕ್ರಮ ಕೈಗೊಂಡಿದ್ದಾರೆ. ಈ ವಿಚಾರವಾಗಿ ಏನೆಲ್ಲ ಇದೆ ಎಂದು ವರಿಷ್ಠರನ್ನು ಭೇಟಿ ಮಾಡಿಲ್ಲ. ಆದಷ್ಟು ಎಲ್ಲರನ್ನು ಒಂದುಗೂಡಿಸಿ ಕರೆದುಕೊಂಡು ಹೋಗುವುದು ಇಂದಿನ ಅನಿವಾರ್ಯತೆ ಇದೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ.

ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ಶಾಸಕ ಬಸನಗೌಡ ಯತ್ನಾಳ ಅವರ ವಿಷಯದ ಬಗ್ಗೆ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ ಎಂದು ಹೇಳಿದರು.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡು ಬಾರಿ ನೊಟೀಸ್ ಕೊಟ್ಟಿದ್ದರು. ಅವರು ಅದಕ್ಕೆ ಉತ್ತರ ಕೊಟ್ಟಿದ್ದರು. ಆದರೆ, ಅವರು ಏನು ಉತ್ತರ ಕೊಟ್ಟಿದ್ದರು ಎಂದು ಗೊತ್ತಿಲ್ಲ. ಯಾವ ಕಾರಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಕೊಳ್ಳುತ್ತೇನೆ. ಇಂತಹ ಕಾಲದಲ್ಲಿ ಒಕ್ಕಟ್ಟಾಗಿ ಹೋಗುವ ಅವಶ್ಯಕತೆ ಇದೆ ಎಂದರು.

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಯತ್ನಾಳ್ ಅವರು ಅವರ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಆಹ್ವಾನ ನೀಡಿದ್ದರು. ಆ ಮೇಲೆ ಭೇಟಿಯಾಗಿಲ್ಲ ಎಂದರು.

ಪಕ್ಷದಲ್ಲಿ ಇನ್ನಷ್ಟು ಜನರಿಗೆ ನೊಟೀಸ್ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉಳಿದವರಿಗೂ ನೊಟೀಸ್ ಕೊಟ್ಟಿದ್ದು, ಅವರು ಏನು ಉತ್ತರ ಕೊಡುತ್ತಾರೆ ಎನ್ನುವುದರ ಮೇಲೆ ಶಿಸ್ತು ಸಮಿತಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತದೆ. ಪಕ್ಷದ ಶಿಸ್ತು ಸಮಿತಿಗೆ ತನ್ನದೇ ಆದ ನಿಯಮಗಳಿವೆ ಎಂದು ಹೇಳಿದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!