Suspension of 18 MLAs.. B.Y. Vijayendra told BJP's next move

18 ಶಾಸಕರ ಅಮಾನತು.. ಬಿಜೆಪಿಯ ಮುಂದಿನ ನಡೆ ತಿಳಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ನುಡಿದರು.

ಕೆಂಗಲ್ ಪ್ರತಿಮೆಯ ಎದುರು ಪ್ರತಿಭಟನೆ

ಅಧಿವೇಶನ ಮುಗಿಯುವ ಕೊನೆಯ ದಿನ ಗೌರವಾನ್ವಿತ ಸ್ಪೀಕರ್ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಸರಿಯಲ್ಲ, 2ರಂದು ಬೆಳಿಗ್ಗೆ ವಿಧಾನಸೌಧ ಮುಂಭಾಗದ ಕೆಂಗಲ್ ಪ್ರತಿಮೆಯ ಮುಂದೆ ನಮ್ಮೆಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ಮಾಡುತ್ತೇವೆ. ಸ್ಪೀಕರ್ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಸ್ಪೀಕರ್ ಅವರ ತೀರ್ಮಾನವು ಮತದಾರರಿಗೆ ಮಾಡಿದ ಅವಮಾನ ಎಂದು ತಿಳಿಸಿದರು. 18 ಶಾಸಕರ ಅಮಾನತನ್ನು ಹಿಂದಕ್ಕೆ ಪಡೆಯುವವರೆಗೆ ಬಿಜೆಪಿಯ ಶಾಸಕರು, ವಿಧಾನಪರಿಷತ್ ಸದಸ್ಯರು ಕಮಿಟಿ ಮೀಟಿಂಗ್‍ಗಳಿಗೆ ಹಾಜರಾಗುವುದಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

4ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 5ರಂದು ಎಲ್ಲ ಮಂಡಲಗಳಲ್ಲಿ ಸಹ ಬೆಲೆ ಏರಿಕೆಯ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ ಎಂದರು.

ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ ಏರಿಸಿದರು. ಪೆಟ್ರೋಲ್ ದರ ಹೆಚ್ಚಿಸಿದರು. ಹಾಲಿನ ದರವನ್ನೂ ಮೂರನೇ ಬಾರಿಗೆ ಜಾಸ್ತಿ ಮಾಡಿದ್ದಾರೆ. ಹಾಲಿನ ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.

ಬೆಲೆ ಏರಿಕೆ ಸರಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲಿದ್ದೇವೆ. ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಹಿಂದೂಗಳಿಗೆ ಮಾಡಿದ ಅವಮಾನದ ವಿರುದ್ಧ ಜನಜಾಗೃತಿ

ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರವು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡಿದ್ದು, ಇದು ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆಯಂತಿದೆ. ಹಿಂದೂಗಳಿಗೆ ಮಾಡಿದ ಈ ಅವಮಾನದ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ಕೇಂದ್ರದ ವರಿಷ್ಠರು ಹಲವು ಬಾರಿ ಬಸನಗೌಡಪಾಟೀಲ ಯತ್ನಾಳರಿಗೆ ನೋಟಿಸ್ ಕೊಟ್ಟು ಅವರನ್ನು ತಿದ್ದುವ ಪ್ರಯತ್ನ ಮಾಡಿದ್ದಾರೆ. ರಾಜ್ಯಾಧ್ಯಕ್ಷನಾಗಿ ನಾನು ಪಕ್ಷದ ಮುಖಂಡರ ಜೊತೆ ಯತ್ನಾಳರನ್ನು ಭೇಟಿ ಮಾಡಿ ಪಕ್ಷದ ಹಿತದೃಷ್ಟಿಯಿಂದ ಸಣ್ಣಪುಟ್ಟ ಗೊಂದಲ ಸರಿಪಡಿಸಿಕೊಳ್ಳೋಣ ಎಂದಿದ್ದೆ. ಸದನ ಇದ್ದಾಗ ಭೋಜನಕೂಟಕ್ಕೂ ನಾನೇ ಆಹ್ವಾನಿಸಿದ್ದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ನಾನು ಹಿಂದೊಂದು ಮುಂದೊಂದು ಮಾತನಾಡುವ ವ್ಯಕ್ತಿಯಲ್ಲ

ಯಡಿಯೂರಪ್ಪನವರು ಅನೇಕರನ್ನು ಬೆಳೆಸಿದ್ದಾರೆ. ಅವರು ತಮ್ಮ ಜೀವನದಲ್ಲಿ ಮತ್ತೊಬ್ಬರನ್ನು ತುಳಿಯುವ ಕೆಲಸ ಮಾಡಿಲ್ಲ. ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯದ ಅರಿವು ನನಗೂ ಇದೆ. ಎಲ್ಲವನ್ನೂ ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ವಿವರಿಸಿದರು.

ಪಕ್ಷದ ಕೇಂದ್ರದ ವರಿಷ್ಠರು ಸಾಕಷ್ಟು ಸಮಯ ಕಾದಿದ್ದಾರೆ. ವರಿಷ್ಠರು ಇದೆಲ್ಲವನ್ನೂ ಗಮನಿಸಿ ಉಚ್ಚಾಟನೆಯ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿಯನ್ನು ಸ್ವಂತ ಬಲದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನನಗೆ ಈ ಜವಾಬ್ದಾರಿ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಆಗಬೇಕೆಂದು ಅಲ್ಲ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!