Suspension of 18 MLAs: BJP surrenders to Speaker who called it dictatorship

18 ಶಾಸಕರ ಅಮಾನತು ಪ್ರಕರಣ: ಸರ್ವಾಧಿಕಾರಿ ಎಂದಿದ್ದ ಬಿಜೆಪಿ ಸ್ಪೀಕರ್‌ಗೆ ಶರಣು

ಬೆಂಗಳೂರು: ಸದನದಲ್ಲಿ ಅಗೌರವವಾಗಿ ವರ್ತಿಸಿದ್ದಾರೆ ಎಂಬ ಕಾರಣ ಬಿಜೆಪಿಯ (BJP) 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವ ಪ್ರಕರಣ ಕುರಿತು, ಸ್ಪೀಕರ್ ಅವರನ್ನು ಸರ್ವಾಧಿಕಾರಿ ಎಂದಿದ್ದ ಬಿಜೆಪಿ, ಕೊನೆಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮೂಲಕ ಸಭಾಪತಿ ಅವರಿಗೆ ಮನವಿ ಪತ್ರ ಬರೆಸುವ ಅಳಲು ತೋಡಿಕೊಂಡಿದೆ.

ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕೆಂದು ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದೇನೆ ಎಂದು ಆರ್. ಅಶೋಕ ತಿಳಿಸಿದ್ದಾರೆ.

ಪತ್ರದಲ್ಲಿ ಉಲ್ಲೇಖ ಮಾಡಿರುವಂತೆ, ಕರ್ನಾಟಕ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ 4% ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ.

ಈ ಸಂದರ್ಭದಲ್ಲಿ ತಾವು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡಿರುತ್ತೀರೆಂದು, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿರುತ್ತೀರೆಂದು ವಿಧಾನಸಭೆಯ 18 ಸದಸ್ಯರನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾಮಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿರುತ್ತದೆ ಹಾಗೂ ಅದರ ಜೊತೆಗೆ ಇತರ ನಿರ್ಬಂಧಗಳನ್ನೂ ವಿಧಿಸಲಾಗಿರುತ್ತದೆ.

ರಾಜ್ಯದ ವಿಧಾನಮಂಡಲದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳು ಈ ಸ್ಥಳಗಳು “ಪ್ರಜಾಪ್ರಭುತ್ವದ ದೇಗುಲಗಳು” ಎಂದು ಕರೆದರೆ ತಪ್ಪೇನೂ ಇಲ್ಲ.

ಈ ದೇಗುಲಗಳಲ್ಲಿನ ಮಾನ್ಯ ಸಭಾಧ್ಯಕ್ಷರು ಮತ್ತು ಮಾನ್ಯ ಸಭಾಪತಿಗಳಿಗೆ ಇರುವ ಸ್ನಾನವೂ ಅಷ್ಟೇ ಗೌರವಾನ್ವಿತವಾದುದು. ಈ ವಿಚಾರದಲ್ಲಿ ನನಗೆ ಯಾವ ಭಿನ್ನಾಭಿಪ್ರಾಯವೂ ಇಲ್ಲ.

ದಿ.21.03.2025ರಂದು ನಡೆದ ಘಟನೆ ಉದ್ದೇಶಪೂರ್ವಕವಾದುದು ಅಲ್ಲ ಅಥವಾ ನಿಮ್ಮ ಪೀಠಕ್ಕೆ ಅಗೌರವ ತರುವ ಉದ್ದೇಶವೂ ಯಾವ ಶಾಸಕರಿಗೂ ಇರಲಿಲ. ಕಳೆದ ಎರಡು ವರ್ಷಗಳಲ್ಲಿ ತಾವು ಸದನದ ಕಲಾಪ ನಿರ್ವಹಿಸುವುದನ್ನು ನಾವು ಅತ್ಯಂತ ಹತ್ತಿರದಿಂದ ನೋಡಿದ್ದೇವೆ.

ಸಂಸದೀಯ ಚರ್ಚೆಯ ಗುಣಮಟ್ಟ, ಭಾಷೆಯ ಬಳಕೆ, ಕಲಾವಗಳಲ್ಲಿನ ನಿಯಮಗಳ ಪಾಲನೆ ಇತ್ಯಾದಿಗಳೆಲ್ಲವು ದಿನದಿಂದ ದಿನಕ, ಕುಸಿಯುತ್ತಿರುವ ಈ ದಿನಗಳಲ್ಲಿ ಯಾರಿಗೇ ಆಗಲೀ ಇದು ಅತ್ಯಂತ ಕಷ್ಟದ ಕಲಸ ಎಂಬುದು ಅರ್ಥವಾಗುತ್ತದೆ. ಅದಕ್ಕಾಗಿಯೇ ನಿಮ್ಮ ಬಗ್ಗೆ ನಮಗೆ ಅಪಾರವಾದ ಗೌರವವಿದೆ.

ಒಂದು ವೇಳೆ ತಾವು ಅಂದು ನಮ್ಮ ಎಲ್ಲಾ ಶಾಸಕರನ್ನು ತಮ್ಮ ಕೊಠಡಿಗೆ ಕರೆದು ವಿವರಣೆ ಕೇಳಿದ್ದರೆ ನಾವುಗಳು ಖಂಡಿತ ಈ ಘಟನೆಯ ಬಗ್ಗೆ ಸೃಷೀಕರಣ ಕೊಡುತ್ತಿದ್ದೆವು. ಅದಕ್ಕೆ, ಅವಕಾಶ ಸಿಗಲಿಲ್ಲ ಈಗ ಒಂದಿಷ್ಟು ಕಠೋರ ಎನ್ನುವಂಥ ನಿರ್ಧಾರ ತಮ್ಮಿಂದ ಪ್ರಕಟವಾಗಿದೆ.

ಇದರಿಂದಾಗಿ ಒಟ್ಟು 18 ಶಾಸಕರು ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರುಗಳ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದಂತೆ ಆಗಿದೆ. ಈ ನಿರ್ಬಂಧಗಳನ್ನು ಸಡಿಲಿಸಿ ಎಂದಿನಂತೆ ಒಬ್ಬ ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರುಗಳಿಗೆ ಅವಕಾಶ ಕೊಡಬೇಕೆಂದು ಕೋರಿ ಈ ಪತ್ರವನ್ನು ಬರೆಯುತ್ತಿದ್ದೇನೆ.

ನಮ್ಮಗಳ ಪ್ರತಿಭಟನೆ ತಮ್ಮ ವಿರುದ್ಧ ಇರಲಿಲ್ಲ ಎಂಬುದನ್ನು ಅತ್ಯಂತ ಪ್ರಾಮಾಣಿಕವಾಗಿ ಮತ್ತೊಮ್ಮೆ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.

ಈ ಪತ್ರದ ಆರಂಭದಲ್ಲಿ ತಿಳಿಸಿದಂತೆ ಸದನ ದೊಡ್ಡದು, ಸಭಾಧ್ಯಕ್ಷರು ದೊಡ್ಡವರು ಎಂಬ ಪ್ರಜಾಪ್ರಭುತ್ವದ ಮೂಲಭೂತ ಆಶಯಕ್ಕೆ ಅನುಗುಣವಾಗಿ ಹಾಗೂ ನಾವೆಲ್ಲರೂ ಸೇರಿಕೊಂಡು ಈ ಸಂಸ್ಥೆಯ ಘನತೆ ಹಾಗೂ ಗೌರವವನ್ನು ಉಳಿಸಬೇಕಾಗಿದೆ ಎಂಬ ತತ್ವದಲ್ಲಿ ನಂಬಿಕೆ ಇರಿಸಿ ಅಮಾನತ್ತು ಮಾಡಿರುವ 18 ಶಾಸಕರ ಆದೇಶವನ್ನು ಮತ್ತೊಮ್ಮೆ ಮರುಪರಿಶೀಲಿಸಲು ಕೋರುತ್ತಾ ಸದರಿ ಆದೇಶವನ್ನು ಹಿಂಪಡೆಯಬೇಕಾಗಿ ತಮ್ಮನ್ನು ಕೋರುತ್ತೇನೆ ಎಂದಿದ್ದಾರೆ.

ಅಲ್ಲದೆ ಜನಸಾಮಾನ್ಯರ ಹಿತದೃಷ್ಟಿಯಿಂದ ಸನ್ಮಾನ್ಯ ಸಭಾಧ್ಯಕ್ಷರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಮತ್ತು ಆ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!