Suspension of 18 MLAs: BJP surrenders to Speaker who called it dictatorship

18 ಶಾಸಕರ ಅಮಾನತು ಪ್ರಕರಣ: ಸರ್ವಾಧಿಕಾರಿ ಎಂದಿದ್ದ ಬಿಜೆಪಿ ಸ್ಪೀಕರ್‌ಗೆ ಶರಣು

ಬೆಂಗಳೂರು: ಸದನದಲ್ಲಿ ಅಗೌರವವಾಗಿ ವರ್ತಿಸಿದ್ದಾರೆ ಎಂಬ ಕಾರಣ ಬಿಜೆಪಿಯ (BJP) 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವ ಪ್ರಕರಣ ಕುರಿತು, ಸ್ಪೀಕರ್ ಅವರನ್ನು ಸರ್ವಾಧಿಕಾರಿ ಎಂದಿದ್ದ ಬಿಜೆಪಿ, ಕೊನೆಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮೂಲಕ ಸಭಾಪತಿ ಅವರಿಗೆ ಮನವಿ ಪತ್ರ ಬರೆಸುವ ಅಳಲು ತೋಡಿಕೊಂಡಿದೆ.

ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕೆಂದು ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದೇನೆ ಎಂದು ಆರ್. ಅಶೋಕ ತಿಳಿಸಿದ್ದಾರೆ.

ಪತ್ರದಲ್ಲಿ ಉಲ್ಲೇಖ ಮಾಡಿರುವಂತೆ, ಕರ್ನಾಟಕ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ 4% ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ.

ಈ ಸಂದರ್ಭದಲ್ಲಿ ತಾವು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡಿರುತ್ತೀರೆಂದು, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿರುತ್ತೀರೆಂದು ವಿಧಾನಸಭೆಯ 18 ಸದಸ್ಯರನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾಮಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿರುತ್ತದೆ ಹಾಗೂ ಅದರ ಜೊತೆಗೆ ಇತರ ನಿರ್ಬಂಧಗಳನ್ನೂ ವಿಧಿಸಲಾಗಿರುತ್ತದೆ.

ರಾಜ್ಯದ ವಿಧಾನಮಂಡಲದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳು ಈ ಸ್ಥಳಗಳು “ಪ್ರಜಾಪ್ರಭುತ್ವದ ದೇಗುಲಗಳು” ಎಂದು ಕರೆದರೆ ತಪ್ಪೇನೂ ಇಲ್ಲ.

ಈ ದೇಗುಲಗಳಲ್ಲಿನ ಮಾನ್ಯ ಸಭಾಧ್ಯಕ್ಷರು ಮತ್ತು ಮಾನ್ಯ ಸಭಾಪತಿಗಳಿಗೆ ಇರುವ ಸ್ನಾನವೂ ಅಷ್ಟೇ ಗೌರವಾನ್ವಿತವಾದುದು. ಈ ವಿಚಾರದಲ್ಲಿ ನನಗೆ ಯಾವ ಭಿನ್ನಾಭಿಪ್ರಾಯವೂ ಇಲ್ಲ.

ದಿ.21.03.2025ರಂದು ನಡೆದ ಘಟನೆ ಉದ್ದೇಶಪೂರ್ವಕವಾದುದು ಅಲ್ಲ ಅಥವಾ ನಿಮ್ಮ ಪೀಠಕ್ಕೆ ಅಗೌರವ ತರುವ ಉದ್ದೇಶವೂ ಯಾವ ಶಾಸಕರಿಗೂ ಇರಲಿಲ. ಕಳೆದ ಎರಡು ವರ್ಷಗಳಲ್ಲಿ ತಾವು ಸದನದ ಕಲಾಪ ನಿರ್ವಹಿಸುವುದನ್ನು ನಾವು ಅತ್ಯಂತ ಹತ್ತಿರದಿಂದ ನೋಡಿದ್ದೇವೆ.

ಸಂಸದೀಯ ಚರ್ಚೆಯ ಗುಣಮಟ್ಟ, ಭಾಷೆಯ ಬಳಕೆ, ಕಲಾವಗಳಲ್ಲಿನ ನಿಯಮಗಳ ಪಾಲನೆ ಇತ್ಯಾದಿಗಳೆಲ್ಲವು ದಿನದಿಂದ ದಿನಕ, ಕುಸಿಯುತ್ತಿರುವ ಈ ದಿನಗಳಲ್ಲಿ ಯಾರಿಗೇ ಆಗಲೀ ಇದು ಅತ್ಯಂತ ಕಷ್ಟದ ಕಲಸ ಎಂಬುದು ಅರ್ಥವಾಗುತ್ತದೆ. ಅದಕ್ಕಾಗಿಯೇ ನಿಮ್ಮ ಬಗ್ಗೆ ನಮಗೆ ಅಪಾರವಾದ ಗೌರವವಿದೆ.

ಒಂದು ವೇಳೆ ತಾವು ಅಂದು ನಮ್ಮ ಎಲ್ಲಾ ಶಾಸಕರನ್ನು ತಮ್ಮ ಕೊಠಡಿಗೆ ಕರೆದು ವಿವರಣೆ ಕೇಳಿದ್ದರೆ ನಾವುಗಳು ಖಂಡಿತ ಈ ಘಟನೆಯ ಬಗ್ಗೆ ಸೃಷೀಕರಣ ಕೊಡುತ್ತಿದ್ದೆವು. ಅದಕ್ಕೆ, ಅವಕಾಶ ಸಿಗಲಿಲ್ಲ ಈಗ ಒಂದಿಷ್ಟು ಕಠೋರ ಎನ್ನುವಂಥ ನಿರ್ಧಾರ ತಮ್ಮಿಂದ ಪ್ರಕಟವಾಗಿದೆ.

ಇದರಿಂದಾಗಿ ಒಟ್ಟು 18 ಶಾಸಕರು ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರುಗಳ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದಂತೆ ಆಗಿದೆ. ಈ ನಿರ್ಬಂಧಗಳನ್ನು ಸಡಿಲಿಸಿ ಎಂದಿನಂತೆ ಒಬ್ಬ ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರುಗಳಿಗೆ ಅವಕಾಶ ಕೊಡಬೇಕೆಂದು ಕೋರಿ ಈ ಪತ್ರವನ್ನು ಬರೆಯುತ್ತಿದ್ದೇನೆ.

ನಮ್ಮಗಳ ಪ್ರತಿಭಟನೆ ತಮ್ಮ ವಿರುದ್ಧ ಇರಲಿಲ್ಲ ಎಂಬುದನ್ನು ಅತ್ಯಂತ ಪ್ರಾಮಾಣಿಕವಾಗಿ ಮತ್ತೊಮ್ಮೆ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.

ಈ ಪತ್ರದ ಆರಂಭದಲ್ಲಿ ತಿಳಿಸಿದಂತೆ ಸದನ ದೊಡ್ಡದು, ಸಭಾಧ್ಯಕ್ಷರು ದೊಡ್ಡವರು ಎಂಬ ಪ್ರಜಾಪ್ರಭುತ್ವದ ಮೂಲಭೂತ ಆಶಯಕ್ಕೆ ಅನುಗುಣವಾಗಿ ಹಾಗೂ ನಾವೆಲ್ಲರೂ ಸೇರಿಕೊಂಡು ಈ ಸಂಸ್ಥೆಯ ಘನತೆ ಹಾಗೂ ಗೌರವವನ್ನು ಉಳಿಸಬೇಕಾಗಿದೆ ಎಂಬ ತತ್ವದಲ್ಲಿ ನಂಬಿಕೆ ಇರಿಸಿ ಅಮಾನತ್ತು ಮಾಡಿರುವ 18 ಶಾಸಕರ ಆದೇಶವನ್ನು ಮತ್ತೊಮ್ಮೆ ಮರುಪರಿಶೀಲಿಸಲು ಕೋರುತ್ತಾ ಸದರಿ ಆದೇಶವನ್ನು ಹಿಂಪಡೆಯಬೇಕಾಗಿ ತಮ್ಮನ್ನು ಕೋರುತ್ತೇನೆ ಎಂದಿದ್ದಾರೆ.

ಅಲ್ಲದೆ ಜನಸಾಮಾನ್ಯರ ಹಿತದೃಷ್ಟಿಯಿಂದ ಸನ್ಮಾನ್ಯ ಸಭಾಧ್ಯಕ್ಷರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಮತ್ತು ಆ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!