BJP is constantly fighting to convince people: B.Y. Vijayendra

ಜನರಿಗೆ ಮನವರಿಕೆ ಮಾಡಲು ಬಿಜೆಪಿ ನಿರಂತರ ಹೋರಾಟ: ಬಿ.ವೈ.ವಿಜಯೇಂದ್ರ

ಬೆಂಗಳೂರು: ದರಿದ್ರ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಜನರ ವಿಶ್ವಾಸ ಮತ್ತು ಆಶೀರ್ವಾದ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೀಗ ಎಲ್ಲವನ್ನೂ ಗಾಳಿಗೆ ತೂರಿ ರೈತರು, ಬಡವರು, ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನೋವಿದೆ ಎಂದು ತಿಳಿಸಿದರು.

40 ಶೇಕಡಾ ಸರಕಾರ ಎಂದು ಬಿಜೆಪಿಯನ್ನು ಕರೆದಿದ್ದರು. ಅದಕ್ಕೆ ಪುರಾವೆ ಇಲ್ಲ. ನಾವು ಮುಗ್ಗರಿಸಿದ್ದೂ ಆಗಿದೆ. ಬಿಜೆಪಿ ನಿರಂತರ ಹೋರಾಟ ಮಾಡುವ ಮೂಲಕ ಈ ಸರಕಾರಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ನುಡಿದರು.

ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ

ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ ಎಂದು ವಿಜಯೇಂದ್ರ ಅವರು ವಿವರಿಸಿದರು.

ಹಿಂದೆ ಬಿಜೆಪಿ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ ಸಹ ಅಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಸಾಕಷ್ಟು ಅಪಪ್ರಚಾರ ಮಾಡಿದರು. ಜನರ ಒಳಿತಿಗಾಗಿ ಈ ಸರಕಾರ ಬಂದಿಲ್ಲ; ಜನರ ಒಳಿತಿಗಾಗಿ ಅಧಿಕಾರ ಪಡೆದಿದ್ದರೆ ಇಂಥ ದರಿದ್ರ ಸರಕಾರವನ್ನು ಜನತೆ ನೋಡಬೇಕಿರಲಿಲ್ಲ ಎಂದು ವಿಶ್ಲೇಷಿಸಿದರು.

ಹೈಕಮಾಂಡ್ ಅಥವಾ ಗಾಂಧಿ ಕುಟುಂಬಕ್ಕೆ ಕರ್ನಾಟಕ ರಾಜ್ಯವನ್ನು ಅಡ ಇಡಲು ಮತ್ತು ಚುನಾವಣೆ ವೇಳೆ ಎಟಿಎಂ ಆಗಿ ಪರಿವರ್ತಿಸಲು ಕಾಂಗ್ರೆಸ್ಸಿಗೆ ಇಲ್ಲಿ ಸರಕಾರ ಬೇಕಿದೆ ಎಂದು ಟೀಕಿಸಿದರು.

ಹಿಂದಿನ ಬಿಜೆಪಿ ಸರಕಾರದ ಮೇಲಿನ ಅಪಪ್ರಚಾರವನ್ನು ನಾವು ಸರಿಯಾಗಿ ನಿಭಾಯಿಸಿಲ್ಲ; ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಅದರ ಪರಿಣಾಮವಾಗಿ ವಿಪಕ್ಷದಲ್ಲಿದ್ದೇವೆ. ಅದರ ಬಗ್ಗೆ ನೋವಿಲ್ಲ ಎಂದು ತಿಳಿಸಿದರು.

ಜನಜಾಗೃತಿ ಮೂಡಿಸಲು ಜನಾಕ್ರೋಶ ಯಾತ್ರೆ

ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆ ಮತ್ತು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ, ಪರಿಶಿಷ್ಟ ಜಾತಿ, ಜನಾಂಗದ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣ ದುರ್ಬಳಕೆ- ಇವೆಲ್ಲವನ್ನೂ ರಾಜ್ಯದ ಜನತೆ ಮುಂದೆ ತೆಗೆದುಕೊಂಡು ಹೋಗುತ್ತೇವೆ.

ನಿನ್ನೆ ಆರಂಭವಾದ ಅಹೋರಾತ್ರಿ ಧರಣಿಯ ಹೋರಾಟವು ಏ.7ರಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರದ ಹಗಲುದರೋಡೆಯನ್ನು ಜನರಿಗೆ ಮನದಟ್ಟು ಮಾಡುತ್ತೇವೆ. ಜನರ ಹಣ ಲೂಟಿ ಮಾಡಿ, ಜನರಿಗೆ ಬರೆ ಎಳೆದು ಅಧಿಕಾರ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ದೋಖಾಗಳನ್ನು ಜನರ ಮುಂದಿಡಲಿದ್ದೇವೆ ಎಂದು ಹೇಳಿದರು. ಈ ಸರಕಾರದ ನೈಜ ಮುಖವಾಡವನ್ನು ತಿಳಿಸುವ ಕೆಲಸವನ್ನು ಮುಂದಿನ ಒಂದು ತಿಂಗಳು ಮಾಡಲಿದ್ದೇವೆ ಎಂದರು.

ವಕ್ಫ್ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು

ಕಾಂಗ್ರೆಸ್ಸಿಗರು ವಕ್ಫ್ ಹೆಸರು ಹೇಳಿ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದವರು, ಇದಕ್ಕೆ ಕರ್ನಾಟಕವೇ ತಾಜಾ ಉದಾಹರಣೆ. ಈ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು ಕೂಡ ಈ ಹಿಂದೆಯೂ ಕೇಳಿಬಂದಿತ್ತು.

ಹಾಗಾಗಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ಸಿನವರು ಸಹಜವಾಗಿಯೇ ವಿರೋಧಿಸುತ್ತಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಏಕಾಏಕಿ ವಕ್ಫ್ ಹೆಸರು ಹೇಳಿಕೊಂಡು ಸಾವಿರಾರು ವರ್ಷಗಳ ಇತಿಹಾಸ ಇರುವ ಮಠಮಾನ್ಯಗಳ, ದೇವಾಲಯಗಳ ಜಮೀನನ್ನು ವಶಕ್ಕೆ ಪಡೆಯುತ್ತಿದ್ದರು. ನಮ್ಮ ರಾಜ್ಯದಲ್ಲೂ ರೈತರ ಜಮೀನು ಕಬ್ಜಾ ಮಾಡಿಕೊಂಡಿದ್ದಾರೆ. ಅದನ್ನು ಯಾರಿಗೂ ಪ್ರಶ್ನೆ ಮಾಡಲು ಅವಕಾಶ ಇಲ್ಲದಿದ್ದರೆ ಇದ್ಯಾವ ನ್ಯಾಯ? ನಾವು ಯಾವ ದೇಶದಲ್ಲಿದ್ದೇವೆ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!