BJP is constantly fighting to convince people: B.Y. Vijayendra

ಜನರಿಗೆ ಮನವರಿಕೆ ಮಾಡಲು ಬಿಜೆಪಿ ನಿರಂತರ ಹೋರಾಟ: ಬಿ.ವೈ.ವಿಜಯೇಂದ್ರ

ಬೆಂಗಳೂರು: ದರಿದ್ರ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಜನರ ವಿಶ್ವಾಸ ಮತ್ತು ಆಶೀರ್ವಾದ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೀಗ ಎಲ್ಲವನ್ನೂ ಗಾಳಿಗೆ ತೂರಿ ರೈತರು, ಬಡವರು, ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನೋವಿದೆ ಎಂದು ತಿಳಿಸಿದರು.

40 ಶೇಕಡಾ ಸರಕಾರ ಎಂದು ಬಿಜೆಪಿಯನ್ನು ಕರೆದಿದ್ದರು. ಅದಕ್ಕೆ ಪುರಾವೆ ಇಲ್ಲ. ನಾವು ಮುಗ್ಗರಿಸಿದ್ದೂ ಆಗಿದೆ. ಬಿಜೆಪಿ ನಿರಂತರ ಹೋರಾಟ ಮಾಡುವ ಮೂಲಕ ಈ ಸರಕಾರಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ನುಡಿದರು.

ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ

ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ ಎಂದು ವಿಜಯೇಂದ್ರ ಅವರು ವಿವರಿಸಿದರು.

ಹಿಂದೆ ಬಿಜೆಪಿ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ ಸಹ ಅಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಸಾಕಷ್ಟು ಅಪಪ್ರಚಾರ ಮಾಡಿದರು. ಜನರ ಒಳಿತಿಗಾಗಿ ಈ ಸರಕಾರ ಬಂದಿಲ್ಲ; ಜನರ ಒಳಿತಿಗಾಗಿ ಅಧಿಕಾರ ಪಡೆದಿದ್ದರೆ ಇಂಥ ದರಿದ್ರ ಸರಕಾರವನ್ನು ಜನತೆ ನೋಡಬೇಕಿರಲಿಲ್ಲ ಎಂದು ವಿಶ್ಲೇಷಿಸಿದರು.

ಹೈಕಮಾಂಡ್ ಅಥವಾ ಗಾಂಧಿ ಕುಟುಂಬಕ್ಕೆ ಕರ್ನಾಟಕ ರಾಜ್ಯವನ್ನು ಅಡ ಇಡಲು ಮತ್ತು ಚುನಾವಣೆ ವೇಳೆ ಎಟಿಎಂ ಆಗಿ ಪರಿವರ್ತಿಸಲು ಕಾಂಗ್ರೆಸ್ಸಿಗೆ ಇಲ್ಲಿ ಸರಕಾರ ಬೇಕಿದೆ ಎಂದು ಟೀಕಿಸಿದರು.

ಹಿಂದಿನ ಬಿಜೆಪಿ ಸರಕಾರದ ಮೇಲಿನ ಅಪಪ್ರಚಾರವನ್ನು ನಾವು ಸರಿಯಾಗಿ ನಿಭಾಯಿಸಿಲ್ಲ; ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಅದರ ಪರಿಣಾಮವಾಗಿ ವಿಪಕ್ಷದಲ್ಲಿದ್ದೇವೆ. ಅದರ ಬಗ್ಗೆ ನೋವಿಲ್ಲ ಎಂದು ತಿಳಿಸಿದರು.

ಜನಜಾಗೃತಿ ಮೂಡಿಸಲು ಜನಾಕ್ರೋಶ ಯಾತ್ರೆ

ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆ ಮತ್ತು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ, ಪರಿಶಿಷ್ಟ ಜಾತಿ, ಜನಾಂಗದ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣ ದುರ್ಬಳಕೆ- ಇವೆಲ್ಲವನ್ನೂ ರಾಜ್ಯದ ಜನತೆ ಮುಂದೆ ತೆಗೆದುಕೊಂಡು ಹೋಗುತ್ತೇವೆ.

ನಿನ್ನೆ ಆರಂಭವಾದ ಅಹೋರಾತ್ರಿ ಧರಣಿಯ ಹೋರಾಟವು ಏ.7ರಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರದ ಹಗಲುದರೋಡೆಯನ್ನು ಜನರಿಗೆ ಮನದಟ್ಟು ಮಾಡುತ್ತೇವೆ. ಜನರ ಹಣ ಲೂಟಿ ಮಾಡಿ, ಜನರಿಗೆ ಬರೆ ಎಳೆದು ಅಧಿಕಾರ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ದೋಖಾಗಳನ್ನು ಜನರ ಮುಂದಿಡಲಿದ್ದೇವೆ ಎಂದು ಹೇಳಿದರು. ಈ ಸರಕಾರದ ನೈಜ ಮುಖವಾಡವನ್ನು ತಿಳಿಸುವ ಕೆಲಸವನ್ನು ಮುಂದಿನ ಒಂದು ತಿಂಗಳು ಮಾಡಲಿದ್ದೇವೆ ಎಂದರು.

ವಕ್ಫ್ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು

ಕಾಂಗ್ರೆಸ್ಸಿಗರು ವಕ್ಫ್ ಹೆಸರು ಹೇಳಿ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದವರು, ಇದಕ್ಕೆ ಕರ್ನಾಟಕವೇ ತಾಜಾ ಉದಾಹರಣೆ. ಈ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು ಕೂಡ ಈ ಹಿಂದೆಯೂ ಕೇಳಿಬಂದಿತ್ತು.

ಹಾಗಾಗಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ಸಿನವರು ಸಹಜವಾಗಿಯೇ ವಿರೋಧಿಸುತ್ತಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಏಕಾಏಕಿ ವಕ್ಫ್ ಹೆಸರು ಹೇಳಿಕೊಂಡು ಸಾವಿರಾರು ವರ್ಷಗಳ ಇತಿಹಾಸ ಇರುವ ಮಠಮಾನ್ಯಗಳ, ದೇವಾಲಯಗಳ ಜಮೀನನ್ನು ವಶಕ್ಕೆ ಪಡೆಯುತ್ತಿದ್ದರು. ನಮ್ಮ ರಾಜ್ಯದಲ್ಲೂ ರೈತರ ಜಮೀನು ಕಬ್ಜಾ ಮಾಡಿಕೊಂಡಿದ್ದಾರೆ. ಅದನ್ನು ಯಾರಿಗೂ ಪ್ರಶ್ನೆ ಮಾಡಲು ಅವಕಾಶ ಇಲ್ಲದಿದ್ದರೆ ಇದ್ಯಾವ ನ್ಯಾಯ? ನಾವು ಯಾವ ದೇಶದಲ್ಲಿದ್ದೇವೆ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!