CM Siddaramaiah meets Union Land Transport Minister Nitin Gadkari.

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸಂಜೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು.

ಪತ್ರದ ವಿವರ:

ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಕೆಳಕಂಡ ಪ್ರಮುಖ ಯೋಜನೆಗಳ ವಿವರ ಇಂತಿದೆ.

  1. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಮೈಸೂರು ನಗರ)ದಲ್ಲಿ ಫ್ಲೈಓವರ್ ನಿರ್ಮಾಣ.
  2. 30.35 ಕಿ.ಮೀ. ಉದ್ದದ ಹುಬ್ಬಳ್ಳಿ ಧಾರವಾಡ ಷ್ಟಪಥ ಬೈಪಾಸ್ ನಿರ್ಮಾಣ
  3. ರಾ.ಹೆ 369 ಇ( ಸಿಗಂದೂರು ಸೇತುವೆ) ರಲ್ಲಿ ಶರಾವತಿ ಹಿನ್ನೀರಿನ ಮೇಲೆ ಪ್ರಮುಖ ಸೇತುವೆ ನಿರ್ಮಾಣ.
  4. ರಾ.ಹೆ.167 ಹಗರಿ-ಜೆಡ್ಚೆರ್ಲಾ ಸೆಕ್ಷನ್ ನಲ್ಲಿ ಕೃಷ್ಣಾ ನದಿ ಮೇಲೆ 180.865 ಕಿ.ಮೀ.ನಲ್ಲಿ ಪ್ರಮುಖ ಸೇತುವೆ ನಿರ್ಮಾಣ.
  5. ಹೊಸಪೇಟೆ ಯಿಂದ ಬಳ್ಳಾರಿ ಸೆಕ್ಷನ್ ನ ಹಳೆಯ ರಾ.ಹೆ-63(ಹೊಸ ರಾ.ಹೆ-67) ನ ಕಿ.ಮಿ.340+640 (ಬಳ್ಳಾರಿ ನಗರ ಮಿತಿಯಲ್ಲಿನ ಸುಧಾ ಕ್ರಾಸ್) ನಲ್ಲಿ LC-110E ಬದಲಿಗೆ 2-ಲೇನ್ ROB ನಿರ್ಮಾಣ.
  6. ರಾ.ಹೆ.150ಎ ರಲ್ಲಿನ ಸಿಂದಿಗೆರಿ-ಬಳ್ಳಾರಿ ಸೆಕ್ಷನ್ನ ಕಿ.ಮೀ.235.00 ರಿಂದ 254.800ವರೆಗೆ Two Lane with Paved Shoulders ಗೆ ಅಗಲೀಕರಣ ಯೋಜನೆ.

ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಂದಾಯ ಇಲಾಖೆಯೊಂದಿಗೆ ಹಾಗೂ ಅರಣ್ಯ ತೀರುವಳಿ ಪ್ರಕ್ರಿಯೆ ತ್ವರಿತಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ನೀರು ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ Utility Shifting ಕಾರ್ಯವನ್ನು ಚುರುಕುಗೊಳಿಸಲು ಸಂಬಂಧಪಟ್ಟ ಇಲಾಖೆಗೊಂದಿಗೆ ಸಭೆ ನಡೆಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ.

10,000 ಪಿ.ಯು.ಸಿ ಗಿಂತಲೂ ಸಂಚಾರ ತೀವ್ರತೆ ಹೆಚ್ಚಿರುವ ಇರುವ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ರಾಜ್ಯದ ಸಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಈ ಕೆಳಕಂಡ ಯೋಜನೆಗಳನ್ನು ಮಂಜೂರು ಮಾಡಬೇಕೆಂದು ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವರಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

  1. ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಮೈಸೂರಿನ ರಾಷ್ಟ್ರೀಯ ಹೆದ್ದಾರಿ -275ರಲ್ಲಿ 9 ಗ್ರೇಡ್ ಸಪರೇಟರ್ಗಳ ನಿರ್ಮಾಣ.
  2. ರಾಷ್ಟ್ರೀಯ ಹೆದ್ದಾರಿ -75 ( ಹಳೆಯ ರಾ.ಹೆ 48) ರ ಶಿರಾಡಿ ಘಾಟ್ ನ 237+000 ರಿಂದ 263+000 ( ಮಾರನಹಳ್ಳಿಯಿಂದ ಅಡ್ಡಹೊಳೆ ಸೆಕ್ಷನ್) ವರೆಗೆ ಸುರಂಗ ನಿರ್ಮಾಣ ಮಾಡುವ ಮೂಲಕ ಮಂಗಳೂರು ಬಂದರು (ದೇಶದ 7 ನೇ ಅತಿ ದೊಡ್ಡ ಬಂದರು) ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವೆ ಸಂಪರ್ಕವನ್ನು ಸುಧಾರಿಸುವುದು.
  3. ಪುಣೆ- ಬೆಂಗಳೂರು ಗ್ರೀನ್ ಫೀಲ್ಡ್ ಎಕ್ಸ್ ಪ್ರೆಸ್ ವೇ ನ್ನು ಶೀಘ್ರವಾಗಿ ಮಂಜೂರು ಮಾಡುವುದು.
  4. ಮುಂಬರಲಿರುವ ವಾರ್ಷಿಕ ಯೋಜನೆ 20205-26 ರಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು 24000 ಕೋಟಿಗಳಿಗೆ ಹೆಚ್ಚಿಸಿ ಇಮಂಜೂರು ಮಾಡುವುದು.
  5. ಬೆಂಗಳೂರಿ ನಗರದ ಹೆಬ್ಬಾಳ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಮೇಲ್ಸೇತುವೆ ನಿರ್ಮಾಣ.
  6. ತಾತ್ವಿಕವಾಗಿ ಘೋಷಿತವಾಗಿರುವ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಆದ್ಯತೆ ಮೇಲೆ ಮೇಲ್ದರ್ಜೆಗೇರಿಸುವುದು.
  7. ಬೆಂಗಳೂರು ನಗರದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುರಂಗದ ನಿರ್ಮಾಣ ( ರಾ.ಹೆ- 275) ಮತ್ತು ಹೊಸೂರು ರಸ್ತೆ ( ರಾ.ಹೆ-48 ಮತ್ತು ರಾ.ಹೆ-75) ( ಎಲೆಕ್ಟ್ರಾನಿಕ್ ಸಿಟಿ) ಮಾರ್ಗವಾಗಿ ತುಮಕೂರು ರಸ್ತೆ (ರಾ.ಹೆ-48), ಬಳ್ಳಾರಿ ರಸ್ತೆ ( ರಾ.ಹೆ-44) ಮತ್ತು ಹಳೆ ಮದ್ರಾಸು ರಸ್ತೆ ( ಹಳೆ ರಾ.ಹೆ -4)
  8. ಬೆಳಗಾವಿ ನಗರ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಬೆಳಗಾವಿ ನಗರದ ರಾ.ಹೆ-4 ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ
  9. ಕಲಬುರ್ಗಿ-ವಾಡಿ-ಯಾದಗಿರಿ-ಕೆಂದೆಚೂರ್-ಜಡ್ ಚೇರ್ಲಾ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಿ ರಸ್ತೆ ಅಗಲೀಕರಣ ಕೈಗೊಳ್ಳುವುದು.
  10. ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ರಾ.ಹೆ 150ಎ ( ಜೇವರ್ಗಿ- ಚಾಮರಾಜನಗರ ವಿಭಾಗ) ರಲ್ಲಿ ಭೀಮರಾಯನಗುಡಿ ಮತ್ತು ಶಹಪುರ ಪಟ್ಟಣ ಕ್ಕೆ 2 ಎಲ್+ ಪಿಎಸ್ ಗ್ರೀನ್ ಫೀಲ್ಡ್ ಸಂಯೋಜಿತ ಬೈಪಾಸ್ ನಿರ್ಮಾಣ
  11. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ರಾ.ಹೆ-752ಕೆ ನಿಂದ ರಾ.ಹೆ -65 ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು
  12. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ದೇವಲ್ ಗಾಣಗಾಪುರದಿಂದ ಪಂಡರಾಪುರವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು ಈ ಎಲ್ಲಾ ಪ್ರಸ್ತಾವನೆಗಳನ್ನು ಪರಿಗಣಿಸಿ ಮಂಜೂರಾತಿಗಳನ್ನು ನೀಡಲು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಪತ್ರದಲ್ಲಿ ಕೋರಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!