ದೊಡ್ಡಬಳ್ಳಾಪುರ (Doddaballapura): ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಗೂಡ್ಸ್ ವಾಹನವನ್ನು ತಡೆದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ತಿಪ್ಪಗಾನಹಳ್ಳಿ ಮತ್ತು ಗುಂಜೂರು ನಡುವೆ ನಡೆದಿದೆ.
ಹಿಂದೂಪುರದಿಂದ ಬೆಂಗಳೂರಿಗೆ ತೆರೆದ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಗೋ ಮಾಂಸ ಸಾಗಿಸುತ್ತಿದ್ದನ್ನು ಗ್ರಾಮಸ್ಥರು ತಡೆದಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಚಾಲಕ ಪರಾರಿಯಾಗಿದ್ದು, ಆತ ಪರಾರಿಯಾಗಲು ಸಹಕರಿಸಿದ ಆರೋಪದ ಅಡಿಯಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದು, ವಿಚಾರಣೆ ನಡೆಸುತ್ತಿದ್ದಾರೆ.