ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ (Sports Meet) ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ (Cultural competitions) ಉದ್ಘಾಟನಾ ಸಮಾರಂಭವು ಏಪ್ರಿಲ್ 5 (ಶನಿವಾರ) ರಂದು ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೆರವೇರಿಸಲಿದ್ದಾರೆ.
ಘನ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಹಾಗೂ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ಶಾಸಕರಾದ ಶರತ್ ಕುಮಾರ ಬಚ್ಚೇಗೌಡ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿಗೌಡ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಎನ್.ಶ್ರೀನಿವಾಸ್. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ಬೆಂಗಳೂರು ಅಂತರಾಷ್ಟೀಯ ವಿಮಾನ ನಿಲ್ದಾಣ ಪ್ರದೇಶಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿ. ಶಾಂತ ಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ್, ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಡಿ.ಎಂ.ಮುನಿಕೃಷ್ಣ, ಸರ್ಕಾರದ ಕಾರ್ಯದರ್ಶಿಗಳು,ಆರ್ಥಿಕ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಿ.ಸಿ.ಜಾಫರ್ ಉಪಸ್ತಿತರಿರುವರು.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ವಿಭಾಗೀಯ ಉಪಾಧ್ಯಕ್ಷರಾದ ಪಿ.ಗಂಗಾಧರಪ್ಪ, ದೇವನಹಳ್ಳಿ ತಹಶೀಲ್ದಾರ್ ಹೆಚ್.ಬಾಲಕೃಷ್ಣ ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಮತ್ತು ಸಾರ್ವಜನಿಕರು ಉಪಸ್ಥಿತರಿರುತ್ತಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ.ಬಾಬಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ಖಜಾಂಚಿ ಉಮಾಶಂಕರ್, ರಾಜ್ಯ ಪರಿಷತ್ ಸದಸ್ಯ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಎಲ್.ಎಸ್, ಹೊಸಕೋಟೆ ತಾಲ್ಲೂಕು ಅಧ್ಯಕ್ಷ ಸಿ.ಎನ್.ನಾರಾಯಣ ಸ್ವಾಮಿ, ನೆಲಮಂಗಲ ತಾಲ್ಲೂಕು ಅಧ್ಯಕ್ಷ ನಾಗೇಶ್ ಕೆ.ಎನ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ರಾಜಶೇಖರ್ ಉಪಸ್ಥಿತರಿರುವರು.