Ladies... BJP is protesting against your guarantee schemes: DK Shivakumar

ಮಹಿಳೆಯರೇ.. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಸಹಿಸದೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು: ಬಡ ಮಹಿಳೆಯರಿಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ಬಿಜೆಪಿಯವರು ಸಹಿಸದೆ ಪ್ರತಿಭಟನೆ ಮಾಡುತ್ತಿದ್ದಾರೆ, ಇವರ ನಾಟಕವನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹರಿಹಾಯ್ದರು.

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಡೆಸುತ್ತಿರು ಜನಾಕ್ರೋಶ ಸಮಾವೇಶದ ಕುರಿತು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಜನ ಆಕ್ರೋಶಗೊಂಡಿದ್ದಾರೆ. ಬಿಜೆಪಿಯವರು ಮಾಡ್ತಿರುವ ಯಾತ್ರೆ ಕೇಂದ್ರದ ಮೇಲೆ‌ ಮಾಡ್ತಿರುವ ಜನಾಕ್ರೋಶ ಯಾತ್ರೆ, ನಮ್ಮ ಮೇಲೆ‌ ಮಾಡೋದಕ್ಕೆ ಅವರಿಗೆ ಏನೂ ಇಲ್ಲ ಎಂದರು.

52 ಸಾವಿರ ಕೋಟಿ ಹಣ ಬಜೆಟ್‌ನಲ್ಲಿಟ್ಟು ನಾವು ಬಡ ಮಹಿಳೆಯರಿಗಾಗಿ, ರಾಜ್ಯದ ಜನರಿಗೆ ಸಹಾಯ ಮಾಡ್ತಿದ್ದೇವೆ. ನಿನ್ನೆ ತಾನೆ ಕಚ್ಚಾ ತೈಲ‌ ಬೆಲೆ ಇಳಿಕೆ‌ಯಾಗಿದೆ. ಟ್ಯಾಕ್ಸ್ ಹಾಕಿ 103ರೂಪಾಯಿ ಮಾಡಿದ್ದಾರೆ. ಲೀಟರ್ ಗೆ 43ರೂಪಾಯಿ ಅಷ್ಟು ಲಾಭ ಅವರಿಗೆ ಸಿಗ್ತಿದೆ, 43ಲಕ್ಷ ಕೋಟಿ ರೂಪಾಯಿ ಅವರಿಗೆ ಲೂಟಿ ಹೊಡಿಯಲು ಇದರಲ್ಲಿ ಸಿಗ್ತಿದೆ ಎಂದರು.

ರೈತರ ಬದುಕನ್ನ ಉಳಿಸಲು ನಾವು ಹಾಲಿನ ದರ ಏರಿಕೆ ಮಾಡಿದ್ದು, ಭೂಸಾ ಹಿಂಡಿ‌ ಬೆಲೆಯಾಕೆ ಕಡಿಮೆ ಮಾಡಿಸೊಕೆ ಆಗಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಹಾಲಿನೆ ದರ ಹೆಚ್ಚಿದೆ. ನಾವು ರೈತರನ್ನ ಉಳಿಸಲು ಈ ತೀರ್ಮಾನ ತೆಗೆದುಕೊಂಡಿದ್ದು, ನೀರಿನ ಬೆಲೆ ಕಡಿಮೆ ‌ಪ್ರಮಾಣದಲ್ಲಿ‌ ಹೆಚ್ಚಿಸಿದ್ದೇವೆ.

ಇನ್ನೂ ಹೆಚ್ಚು ಮಾಡಬಹುದಿತ್ತು, ಚಿನ್ನದ ದರ ಲೆಕ್ಕಾ ಹಾಕಿ ಈಗ ಎಷ್ಟಾಗಿದೆ, ಮೂರು ವರ್ಷದ ಹಿಂದೆ ಎಷ್ಟಿತ್ತು ಈಗ ಎಷ್ಟಾಗಿದೆ? ಯುಪಿಎ ಸರ್ಕಾರ ಇದ್ದಾಗ 28 ಸಾವಿರ ಇತ್ತು ಎಂದರು.

ಸಿಮೆಂಟ್, ಕಬ್ಬಿಣ, ವೆಹಿಕಲ್, ಮೊಬೈಲ್, ಟಿವಿ, ಪ್ರಿಡ್ಜ್ ಬೆಲೆ ಹೆಚ್ಚಾಗಿದೆ. ಇದೆಲ್ಲಾ ಬಿಜೆಪಿಯವರಿಗೆ‌ ಕಾಣಿಸ್ತಿಲ್ವಾ. ಏನ್ರಿ ಅಶೋಕ್ ,ವಿಜಯೇಂದ್ರ ಕಾಣಿಸ್ತಿಲ್ವಾ? ಇದು ರೈತರ ವಿರೋದಿ ಪಕ್ಷ,. ಬ್ಯಾಂಕ್‌ನಲ್ಲಿ ಎಲ್ಲದಕ್ಕೂ ದುಡ್ಡೂ ವಸೂಲು ಮಾಡ್ತಿದ್ದಾರೆ.. ಖರ್ಗೆ ಸಾಹೇಬ್ರು ಹೇಳ್ತಿದ್ರು ಇದು ದೊಡ್ಡ ಸ್ಕ್ಯಾಮ್ ಆಗಿದೆ ಎಂದು, ಚೆಕ್ ಬುಕ್ ತಕೊಂಡ್ರು ದುಡ್ಡು, ಪ್ರತಿ ಟ್ರಾನ್ಸಾಕ್ಷನ್ ಗೂ ದುಡ್ಡು. ನೀವು ಇದೆಲ್ಲದಕ್ಕೂ ಉತ್ತರ ಕೊಡಬೇಕು. .

ನಿಮ್ಮ ನ್ಯಾಷನಲ್ ಲೀಡರ್ ಫೋಟೋ ಹಾಕೊಳ್ಳಿ

ಪೊಸ್ಟರ್‌ನಲ್ಲಿ ನಂದು, ಸಿದ್ದರಾಮಯ್ಯ ಪೋಟೋ‌ ಅಲ್ಲಾ ನಿಮ್ಮ ನ್ಯಾಷನಲ್ ಲೀಡರ್ ಪೊಟೋ ಹಾಕಿ.

ಮಹಿಳೆಯರೆ ಗಮನಿಸಿ ನಿಮಗಾಗಿ ಗ್ಯಾರಂಟಿ ಯೋಜನೆ ನೀಡಿದರೆ ಅದರ ವಿರುದ್ಧವಾಗಿ ಬಿಜೆಪಿ ಹೋರಾಟ, ನಾವು ಹೀಗೆ ಗ್ಯಾರಂಟಿ ಯೋಜನೆಗಳನ್ನ ಇಂಪ್ಲಿಮೆಂಟ್ ಮಾಡ್ತೇವೆ ಎಂದು ಅದ್ಕೊಂಡಿರಲಿಲ್ಲ. ಈಗ ತಳಮಳಗೊಂಡಿದ್ದಾರೆ.

ಕೇಂದ್ರದ ವಿರುದ್ಧ ಪ್ರತಿಭಟನೆ

ಬಿಜೆಪಿಯವರು ಹೋರಾಟ ನಿಲ್ಲಿಸಿ ಎನ್ನಲ್ಲ ನಾನು, ಜನಾಕ್ರೋಶ ಯಾತ್ರೆಯನ್ನು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಎಂದು ಹಾಕಿ ಹೋರಾಡಿ. ಇದೇ 17ರಂದು ಜನಾಕ್ರೋಶ ಯಾತ್ರೆ ಮಾಡ್ತೇವೆ, ನಮ್ಮ ಸಿಎಂ ಸಿದ್ದರಾಮಯ್ಯ ನೇತ್ರತ್ವದಲ್ಲಿ ಮಾಡ್ತೇವೆ. ಸುಜ್ರೇವಾಲ ಅವರು ಇರ್ತಾರೆ. ನಾನು ಭಾಗಿಯಾಗ್ತೇನೆ ಎಂದರು.

ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡ್ತೇವೆ, ಸರ ಬಿಡಿ ಮಾಂಗಲ್ಯ ತೆಗೆದುಕೊಳ್ಳೊಕೆ ಆಗಲ್ಲ. ಅಮೇರಿಕಾದ ನಿರ್ಧಾರದ ಬಗ್ಗೆ ಯಾಕೆ ಮಾತಾಡ್ತಿಲ್ಲ, ಫಾರಿನ್ ಪಾಲೀಸಿ ಬಗ್ಗೆ ಮಾತಾಡ್ತಿಲ್ಲ. ನಾವು ಕೇಂದ್ರ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮಾಡ್ತೇವೆ ಎಂದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!