Akshara Jatre in Kanasavadi; District Collector hoists the flag

ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ

ದೊಡ್ಡಬಳ್ಳಾಪುರ; ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿಯಲ್ಲಿ (Kanasavadi) ಏ.12 ಮತ್ತು 13ರಂದು ಶನಿವಾರ ಮತ್ತು ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಅಕ್ಷರ ಜಾತ್ರೆಗೆ ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಂಡಿದೆ.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಉಪವಿಭಾಗಾಧಿಕಾರಿ ದುರ್ಗಾಶ್ರೀ ಮತ್ತು ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್,, ಬೆಂಗಳೂರು ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ, ಕಾರ್ಯದರ್ಶಿ ಪ್ರೋ.ಕೆ.ಆರ್.ರವಿಕಿರಣ್, ಸೇವಾದಳ ಜಿಲ್ಲಾಧ್ಯಕ್ಷ ಜಿ.ಲಕ್ಷ್ಮೀಪತಿ, ತಾಲೂಕು ಅಧ್ಯಕ್ಷ ಪಿ.ಗೋವಿಂದ ರಾಜು ಸೇರಿದಂತೆ ಅನೇಕರಿದ್ದರು.

ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿವಂಗತ ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸ್ದದಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.

ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಮಧುರೆ ಹೋಬಳಿಯ ಸ್ಥಳೀಯ ಆಡಳಿತ, ಮುಖಂಡರು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್‌ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಡಾ.ಕೆ.ಸುಧಾಕರ್, ಶಾಸಕ ಧೀರಜ್‌ ಮುನಿರಾಜ್‌ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಗಣ್ಯರು ಭಾಗವಹಿಸಲಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅವರು ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕನ್ನಡಪರ ಚಿಂತಕರು, ಸಾಹಿತಿಗಳು, ಸ್ಥಳೀಯ ಸಾಧಕರು ವಿವಿಧ ವಿಚಾರಗೋಷ್ಠಿ, ಕವಿಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. 50ಕ್ಕೂ ಹೆಚ್ಚಿನ ಸಾಧಕ ಗಣ್ಯರಿಗೆ ಪುರಸ್ಕಾರ ನೀಡಲಾಗುತ್ತಿದೆ.

ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತ ಯೋಜಿಸಿದೆ. ಎರಡೂ ದಿನಗಳ ಕಾಲ ಪುಸ್ತಕ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.

ಇಂದಿನಿಂದ 2 ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಮೊದಲ ದಿನ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಕಾರ್ಯಕ್ರಮ, ಕನ್ನಡದ ಅರಿವು ಮತ್ತು ಅಭಿಯಾನ ಕುರಿತ ವಿಚಾರಗೋಷ್ಠಿ ತ.ನ.ಪ್ರಭುದೇವ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಚಿಂತಕ ಕೆ.ರಾಜಕುಮಾರ್ ವಿಚಾರ ಮಂಡನೆ ಮಾಡಲಿದ್ದಾರೆ. ಯುವ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

2ನೇ ದಿನವಾದ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ದಿ ಮತ್ತು ಆತಂಕಗಳು ಕುರಿತ ವಿಚಾರಗೋಷ್ಠಿ ವಿಮರ್ಶಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾವಯವ ಕೃಷಿ ತಜ್ಞ ಡಾ.ಶಿವನಾಪುರ ರಮೇಶ್, ಜಗನ್ನಾಥ್‌ಪ್ರಕಾಶ್‌ ವಿಷಯ ಮಂಡನೆ ಮಾಡುವರು.

ಬಳಿಕ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅಧಿವೇಶನ, ಸನ್ಮಾ ಹಾಗೂ ಸಮಾರೋಪ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!