ಬೆಂಗಳೂರು: ಸರಕಾರಿ ಅಧಿಕಾರಿಗಳಂತೆ ನಟಿಸಿ ನಿಮ್ಮನ್ನು ಯಾಮಾರಿ ಸಬಹುದು. ಹಾಗಾಗಿ ಎಚ್ಚರವಾಗಿ ಎಂದು ಇತ್ತೀಚೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಹೆಚ್ಚುತ್ತಿರುವ ಸೈಬರ್ ಅಪರಾಧದ ಬಗ್ಗೆ ಸಲಹೆ ನೀಡಿದ್ದರು. ಆದರೆ ಸೈಬರ್ ಖದೀಮರು ಆಯುಕ್ತರ ಫೇಸ್ಬುಕ್ ಖಾತೆಯನ್ನೇ ಮಾಡಿ ನಕಲಿ ಖಾತೆ ಸೃಷ್ಟಿಸಿದ್ದಾರೆ (cyber attack).
ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿರುವ ವಂಚಕರು ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿರುವುದು ಬೆಳಕಿಗೆ ಬಂದಿದೆ.
ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಸೈಬರ್ ಖದೀಮರು ಹಿಂದಿ ಭಾಷೆಯಲ್ಲಿ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿದೆ. ಒಂದು ವೇಳೆ ಈ ರಿಕ್ವೆಸ್ಟ್ಗಳನ್ನು ಸ್ವೀಕರಿಸಿದರೆ, ವಂಚಕರು ವೈಯಕ್ತಿಕ ಮಾಹಿತಿ ಕದಿಯುವ ಅಥವಾ ಹಣಕಾಸಿನ ವಂಚನೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ಎಚ್ಚರಿಸಿವೆ.
ನಕಲಿ ವಾಟ್ಸ್ ಆ್ಯಪ್ ಖಾತೆ
ಇತ್ತೀಚೆಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ನಕಲಿ ವಾಟ್ಸ್ ಆ್ಯಪ್ ಖಾತೆ ತೆರೆದಿದ್ದ ಖದೀಮರು ವಂಚನೆಗೆ ಮುಂದಾಗಿದ್ದರು. ಖದೀಮರು ಪೊಲೀಸ್ ಕಮಿಷನರ್ ಪೋಟೋವನ್ನು ವಾಟ್ಸ್ ಆ್ಯಪ್ ಡಿಪಿಗೆ ಹಾಕಿದ್ದರು.
ಬಳಿಕ ನಾನು ಬಿ.ದಯಾನಂದ್, ಬೆಂಗಳೂರು ಪೊಲೀಸ್ ಕಮಿಷನರ್ ಎಂದು ಆಪ್ತರಿಗೆ, ಸಾರ್ವಜ ನಿಕರಿಗೆ, ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವು ಜನರಿಗೆ ಮೆಸೇಜ್ ಕಳುಹಿಸಲಾಗಿತ್ತು.
ಆ ಮೂಲಕ ಕಮಿಷನರ್ ಹೆಸರಲ್ಲಿ ಹಣ ವಸೂಲಿಗೆ ಮುಂದಾಗಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಈ ವಿಚಾರ ಸೈಬರ್ ಕ್ರೈಂ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ನಕಲಿ ಖಾತೆಯನ್ನು ಡಿ ಆಕ್ಟಿವೇಟ್ ಮಾಡಲಾಗಿತ್ತು.
ಸೈಬರ್ ಕ್ರೈಂ ಪೊಲೀಸರಿಂದ ಆರೋಪಿಗಾಗಿ ಶೋಧ ನಡೆದಿತ್ತು. ಕರ್ನಾಟಕದಲ್ಲಿ ಇತ್ತೀಚೆಗೆ ಮಿತಿಮೀರಿದ ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಆಯುಕ್ತ ಬಿ.ದಯಾನಂದ ಹೇಳಿದ್ದರು.
ಸರಕಾರಿ ಅಧಿಕಾರಿ ಗಳಂತೆ ನಟಿಸಿ ನಿಮ್ಮನ್ನು ಯಾಮಾರಿಸಬಹುದು. ಹಣಕ್ಕೆ ಬೇಡಿಕೆ ಇಡಬಹುದು. ಹಾಗಾಗಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದರು. ಆಯುಕ್ತರ ಹೆಸರಿನಲ್ಲಿ ತೆರೆಯಲಾಗಿರುವ ಈ ನಕಲಿ ಫೇಸ್ಬುಕ್ ಖಾತೆಯು ಹಿಂದಿ ಭಾಷೆಯಲ್ಲಿದೆ.
ಈ ಖಾತೆಯ ಮೂಲಕ ಖದೀಮರು, ಸಾಮಾನ್ಯ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಈ ಖಾತೆಯಿಂದ ಕಳುಹಿಸಲಾಗುವ ಸಂದೇಶ ಅಥವಾ ರಿಕ್ವೆಸ್ಟ್ ಆಯುಕ್ತರಿಂದ ಬಂದಿರುವಂತೆ ತೋರಿಸುವಂತೆ ರಚಿತವಾಗಿವೆ, ಇದು ಗೊಂದಲವನ್ನುಂಟು ಮಾಡುತ್ತಿದೆ ಎಂದು ವರದಿಯಾಗಿದೆ.