BJP supports small traders' struggle: B.Y. Vijayendra

ನಮ್ಮ ಹೋರಾಟದಿಂದ ಆಡಳಿತ ಪಕ್ಷದವರಿಗೆ ಆತಂಕ, ಗಾಬರಿ; ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಅವರು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯುಪಿಎ ಸರಕಾರವು 2004ರಿಂದ 2014ರವರೆಗೆ ಅಧಿಕಾರದಲ್ಲಿ ಇದ್ದಾಗ 10 ವರ್ಷದಲ್ಲಿ ಪೆಟ್ರೋಲ್ ದರ ಶೇ 90ರಷ್ಟು ಏರಿಕೆ ಕಂಡಿತ್ತು. ಅದೇರೀತಿ ಡೀಸೆಲ್ ಬೆಲೆಯು ಶೇ 96ರಷ್ಟು ಬೆಲೆ ಏರಿಕೆ ಆಗಿತ್ತು ಎಂದು ಟೀಕಿಸಿದರು.

ಆದರೆ, ನರೇಂದ್ರ ಮೋದಿಜೀ ಅವರ ನೇತೃತ್ವದ ಎನ್‍ಡಿಎ ಸರಕಾರದಲ್ಲಿ 2014ರಿಂದ 2024ರ ನಡುವೆ ಪೆಟ್ರೋಲ್ ದರ 72 ರೂಪಾಯಿಯಿಂದ 100 ರೂ.ಗೆ ಏರಿದೆ. ಶೇ 38 ಹೆಚ್ಚಳವಾಗಿದೆ. ಡೀಸೆಲ್ ದರ 55 ರೂ. ಇದ್ದುದು 90 ರೂ. ಆಗಿದೆ. ಶೇ 63ರಷ್ಟು ಜಾಸ್ತಿ ಆಗಿದೆ ಎಂದು ತಿಳಿಸಿದರು.

ಯುಪಿಎ ಸರಕಾರದಿಂದ ಹಗರಣಗಳು.

ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಹೆಚ್ಚಾದರೂ ಸಹ ಹಗರಣಗಳು ನಡೆದವೇ ವಿನಾ ಸ್ಕೀಂಗಳು ಯಾವುವೂ ಬಂದಿರಲಿಲ್ಲ. ಹಿಂದೆ ಡಾ. ಮನಮೋಹನ ಸಿಂಗ್ ಅವರ ಸರಕಾರ ಇದ್ದಾಗ, 2 ಜಿ ಹಗರಣ, ಕಲ್ಲಿದ್ದಲು ಹಗರಣ, ಕಾಮನ್‍ವೆಲ್ತ್ ಗೇಮ್ಸ್ ಹಗರಣ ಸೇರಿ 12 ಲಕ್ಷ ಕೋಟಿ ಮೌಲ್ಯದ ಹಗರಣಗಳು ಆಗಿದ್ದವು ಎಂದು ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದರು.

ದೇಶದಲ್ಲಿ ಹಿಂದೆಂದೂ ಕೂಡ ಇಷ್ಟು ದೊಡ್ಡ ಹಗರಣಗಳು ನಡೆದಿರಲಿಲ್ಲ. ಆದರೆ ಯಾವುದೇ ಜನಪರ ಯೋಜನೆಗಳನ್ನು ಕೊಡುವುದರಲ್ಲಿ ಅಂದಿನ ಯುಪಿಎ ಸರಕಾರ ಸಂಪೂರ್ಣ ವಿಫಲವಾಗಿತ್ತು ಎಂದು ಗಮನಕ್ಕೆ ತಂದರು.

ಜನಾಕ್ರೋಶ ಯಾತ್ರೆ 1,115 ಕಿಮೀನಷ್ಟು ಪ್ರವಾಸ

ಜನಾಕ್ರೋಶ ಯಾತ್ರೆಯು 9 ಜಿಲ್ಲೆಗಳಿಗೆ ಹೋಗಿದೆ. 1,115 ಕಿಮೀನಷ್ಟು ಪ್ರವಾಸ ಮಾಡಿದ್ದೇವೆ. ಈ ಯಾತ್ರೆಯು ರಾಜ್ಯದ ಪಕ್ಷದ ಎಲ್ಲ ಮುಖಂಡರು ಭಾಗವಹಿಸಿದ್ದರು ಎಂದು ವಿವರ ನೀಡಿದರು.

ಮೈಸೂರಿನಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಮಂಡ್ಯದಲ್ಲಿ 4 ಸಾವಿರಕ್ಕೂ ಹೆಚ್ಚು, ಹಾಸನ- 5ರಿಂದ 6 ಸಾವಿರ ಜನರು, ಕೊಡಗು- 3.5ರಿಂದ 4 ಸಾವಿರ ಜನರು ಬಂದಿದ್ದರು.

ಮಂಗಳೂರಿನಲ್ಲಿ ಮಳೆಯ ವಾತಾವರಣವಿದ್ದರೂ 9 ರಿಂದ 10 ಸಾವಿರ ಜನರು ಪಾಲ್ಗೊಂಡಿದ್ದರು. ಉಡುಪಿ ಜಿಲ್ಲೆಯಲ್ಲಿ 5.5ರಿಂದ 6 ಸಾವಿರ, ಚಿಕ್ಕಮಗಳೂರಿನಲ್ಲಿ 4ರಿಂದ 5 ಸಾವಿರ ಜನರು, ಯಲ್ಲಾಪುರದಲ್ಲಿ 4 ಸಾವಿರಕ್ಕೂ ಹೆಚ್ಚು ಜನರು ಹೋರಾಟದಲ್ಲಿ ಭಾಗವಹಿಸಿದ್ದಾರೆ.

ಶಿವಮೊಗ್ಗದಲ್ಲಿ 6ರಿಂದ 7 ಸಾವಿರ ಜನರು ಭಾಗವಹಿಸಿದ್ದರು. ಒಟ್ಟಾರೆಯಾಗಿ ನಮ್ಮ ಮೊದಲ ಹಂತದ ಜನಾಕ್ರೋಶ ಯಾತ್ರೆಯಲ್ಲಿ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು ಎಂದು ವಿವರ ನೀಡಿದರು.

ಆಡಳಿತ ಪಕ್ಷದಲ್ಲಿ ಗಾಬರಿ, ಆತಂಕ

ಸಾಮಾಜಿಕ ಜಾಲತಾಣದಲ್ಲಿ ಈ ಯಾತ್ರೆಯನ್ನು 3.50 ಕೋಟಿ ಜನರು ವೀಕ್ಷಿಸಿದ್ದಾರೆ. ಈ ಯಾತ್ರೆಯು ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಿದೆ.

ನಮ್ಮ ಹೋರಾಟದ ಪರಿಣಾಮವಾಗಿ ಆಡಳಿತ ಪಕ್ಷದವರು ಆತಂಕಗೊಂಡಿದ್ದಾರೆ; ಗಾಬರಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದವರೂ ಸಹ ಏ. 17ರಂದು ಕೇಂದ್ರ ಸರಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ. ಇದೊಂದು ಕಪಟ ನಾಟಕವಷ್ಟೇ.

ರಾಜ್ಯದ ಮುಖ್ಯಮಂತ್ರಿಗಳಿಗೆ ಜ್ಞಾನೋದಯವಾಗುತ್ತಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬರಬೇಕಾಗಿದೆ. ಗ್ಯಾರಂಟಿಯಿಂದ ಜನರು ರಾಜ್ಯದಲ್ಲಿ ಸಂತೋಷದಲ್ಲಿದ್ದಾರೆ ಎಂಬ ಭ್ರಮೆಯಲ್ಲಿದ್ದರು; ಅದು ವಾಸ್ತವಿಕ ಸತ್ಯವಲ್ಲ ಎಂಬುದು ನಮ್ಮ ಹೋರಾಟದ ಪರಿಣಾಮವಾಗಿ ಅವರಿಗೆ ಅರ್ಥ ಆಗುತ್ತಿದೆ ಎಂದು ತಿಳಿಸಿದರು.

ಆಡಳಿತ ಪಕ್ಷದಲ್ಲೇ ಗೊಂದಲ ಇದೆ

ಜಾತಿ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದು 10 ವರ್ಷ ಕಳೆದ ಹಳೆಯ ವರದಿ. ಮುಖ್ಯಮಂತ್ರಿಗಳು ನೀವೇ ಇದ್ದೀರಿ. ನಿಮ್ಮದೇ ಸರಕಾರ ಇದೆ. ಮತ್ತೊಮ್ಮೆ ಸರ್ವೇ ಮಾಡಿ ಎಂದು ಆಗ್ರಹಿಸಿದರು.

ಮರು ಸಮೀಕ್ಷೆ ಮಾಡಿ, ವೈಜ್ಞಾನಿಕವಾಗಿ ಅದನ್ನು ಮಾಡಿ; ಎಲ್ಲರ ಸಭೆ ಕರೆದು ಜಾರಿಗೊಳಿಸಿ ಎಂದರು. ಅವೈಜ್ಞಾನಿಕ ಮತ್ತು ಹಳೆಯ ವರದಿ ಇದು. ಅದನ್ನು ಕಸದ ಬುಟ್ಟಿಗೆ ಹಾಕಬೇಕಿದೆ. ಎಂದು ಒತ್ತಾಯಿಸಿದರು.

ರಾಜ್ಯ ಸರಕಾರವು ತನ್ನ ನಿಲುವನ್ನು ಮೊದಲು ಸ್ಪಷ್ಟಪಡಿಸಲಿ. ಮುಖ್ಯಮಂತ್ರಿ ಒಂದು ಹೇಳಿದರೆ, ಉಪ ಮುಖ್ಯಮಂತ್ರಿ ಇನ್ನೊಂದು ಹೇಳುತ್ತಾರೆ.

ಎಂ.ಬಿ.ಪಾಟೀಲ್, ಪರಮೇಶ್ವರ್ ಬೇರೆ ಬೇರೆ ರೀತಿಯ ಹೇಳಿಕೆ ಕೊಡುತ್ತಾರೆ. ಆಡಳಿತ ಪಕ್ಷದಲ್ಲೇ ಗೊಂದಲ ಇದೆ ಎಂದು ತಿಳಿಸಿದರು. ನಿಜವಾದ ಕಳಕಳಿ ಇದ್ದರೆ ಮುಖ್ಯಮಂತ್ರಿಗಳು ವರದಿಯ ಒಳಿತು- ಕೆಡುಕುಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಿ ಎಂದು ತಿಳಿಸಿದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!