ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿ: ಬಿವೈ ವಿಜಯೇಂದ್ರ

The first phase of the Janakrosha Yatra was a success: BY Vijayendra

ಬಾಗಲಕೋಟೆ (Harithalekhani): ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ.

ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಅವರು ಬಳಿಕ ಸಸಿಗೆ ನೀರೆರೆದರು.

ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ ಎಂದು ಹೇಳಿದರು. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ನಿಮ್ಮನ್ನು ನೆನಪಿಸಿಕೊಳ್ಳಬೇಕೇ ಎಂದು ಕೇಳಿದರು.

ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ. ಕಟ್ಟಬೇಕಿದೆ ಎಂದು ಟೀಕಿಸಿದರು.

ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು. ಅದಕ್ಕಾಗಿ ರಾಜ್ಯದ ಜನ ನಿಮ್ಮನ್ನು ನೆನಪಿಟ್ಟುಕೊಳ್ಳಬೇಕೇ ಎಂದರು.

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ 4ರಷ್ಟು ಮೀಸಲಾತಿ ಕೊಡುತ್ತಿದ್ದೀರಿ. ಯಾರಪ್ಪನ ದುಡ್ಡು ಸ್ವಾಮಿ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುತ್ತಾರಂತೆ. ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ.

ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಎಂದು ಕೇಳಿದರು.

ರಾಜ್ಯದಲ್ಲಿ ಯಾವುದೇ ಲೋಕಸಭಾ, ವಿಧಾನಸಭಾ ಚುನಾವಣೆ ಇಲ್ಲ. ಆದರೂ, ನಾವು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ. ಅಭಿವೃದ್ಧಿ ಕೆಲಸ, ಸರ್ವತೋಮುಖ ಅಭಿವೃದ್ಧಿಯ ಭರವಸೆ ನೀಡಿ ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದವರು. ಆದರೆ, ಸಿದ್ದರಾಮಯ್ಯನವರ ನೇತೃತ್ವದ ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ಸರಕಾರ ಇದೆ.

50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ ಎಂದು ಟೀಕಿಸಿದರು. ಪರಿಶಿಷ್ಟ ಜಾತಿ, ಜನಾಂಗದ 38 ಸಾವಿರ ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಹೆಚ್ಚಾಗಿದೆ ಎಂದು ಆಕ್ಷೇಪಿಸಿದರು.

ರಾಜಕೀಯ

ಒಂದೇ ಒಂದು ಬಾರಿ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದಿರುವ ಗ್ರಹಣ ಸಂಪೂರ್ಣವಾಗಿ ಬಿಡಿಸುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ

ಒಂದೇ ಒಂದು ಬಾರಿ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದಿರುವ ಗ್ರಹಣ ಸಂಪೂರ್ಣವಾಗಿ ಬಿಡಿಸುತ್ತೇನೆ:

ಜೆಡಿಎಸ್ (JDS) ಪಕ್ಷಕ್ಕೆ ಐದು ವರ್ಷಗಳ ಕಾಲ ಒಂದೇ ಒಂದು ಬಾರಿ ಅವಕಾಶ ನೀಡಿ. ಈ ರಾಜ್ಯಕ್ಕೆ ಹಿಡಿದಿರುವ ಗ್ರಹಣವನ್ನು ಸಂಪೂರ್ಣವಾಗಿ ಬಿಡಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ (H.D. Kumaraswamy) ರಾಜ್ಯದ

[ccc_my_favorite_select_button post_id="120885"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]