The first phase of the Janakrosha Yatra was a success: BY Vijayendra

ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿ: ಬಿವೈ ವಿಜಯೇಂದ್ರ

ಬಾಗಲಕೋಟೆ (Harithalekhani): ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ.

ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಅವರು ಬಳಿಕ ಸಸಿಗೆ ನೀರೆರೆದರು.

ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ ಎಂದು ಹೇಳಿದರು. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ನಿಮ್ಮನ್ನು ನೆನಪಿಸಿಕೊಳ್ಳಬೇಕೇ ಎಂದು ಕೇಳಿದರು.

ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ. ಕಟ್ಟಬೇಕಿದೆ ಎಂದು ಟೀಕಿಸಿದರು.

ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು. ಅದಕ್ಕಾಗಿ ರಾಜ್ಯದ ಜನ ನಿಮ್ಮನ್ನು ನೆನಪಿಟ್ಟುಕೊಳ್ಳಬೇಕೇ ಎಂದರು.

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ 4ರಷ್ಟು ಮೀಸಲಾತಿ ಕೊಡುತ್ತಿದ್ದೀರಿ. ಯಾರಪ್ಪನ ದುಡ್ಡು ಸ್ವಾಮಿ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುತ್ತಾರಂತೆ. ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ.

ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಎಂದು ಕೇಳಿದರು.

ರಾಜ್ಯದಲ್ಲಿ ಯಾವುದೇ ಲೋಕಸಭಾ, ವಿಧಾನಸಭಾ ಚುನಾವಣೆ ಇಲ್ಲ. ಆದರೂ, ನಾವು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ. ಅಭಿವೃದ್ಧಿ ಕೆಲಸ, ಸರ್ವತೋಮುಖ ಅಭಿವೃದ್ಧಿಯ ಭರವಸೆ ನೀಡಿ ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದವರು. ಆದರೆ, ಸಿದ್ದರಾಮಯ್ಯನವರ ನೇತೃತ್ವದ ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ಸರಕಾರ ಇದೆ.

50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ ಎಂದು ಟೀಕಿಸಿದರು. ಪರಿಶಿಷ್ಟ ಜಾತಿ, ಜನಾಂಗದ 38 ಸಾವಿರ ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಹೆಚ್ಚಾಗಿದೆ ಎಂದು ಆಕ್ಷೇಪಿಸಿದರು.

ರಾಜಕೀಯ

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು" ಎಂದು

[ccc_my_favorite_select_button post_id="120333"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!