BJP is not anti-Muslim: B.Y. Vijayendra

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

ಬೀದರ್ (Harithalekhani): ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು.

ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು.

ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಸರಕಾರದ ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ

ಪ್ರಧಾನಿ ನರೇಂದ್ರ ಮೋದಿಜೀ ಅವರು ತ್ರಿವಳಿ ತಲಾಖ್ ರದ್ದು ಮಾಡಿ ಮುಸಲ್ಮಾನ ಹೆಣ್ಮಕ್ಕಳಿಗೆ ನ್ಯಾಯ ದೊರಕಿಸಿದ್ದಾರೆ. ಆದರೆ, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ದೇಶಭಕ್ತರ ಪಕ್ಷ. ನಾವು ಕಾಂಗ್ರೆಸ್ಸಿನಿಂದ ಪಾಠ ಕಲಿಯಬೇಕಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ದಲಿತ ಶಾಸಕರ ಮನೆಗೆ ದೇಶದ್ರೋಹಿಗಳು ಬೆಂಕಿ ಹಚ್ಚಿದಾಗ ಆ ದೇಶದ್ರೋಹಿಗಳ ಪರ ನಿಂತ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ 150 ಕೋಟಿ ಹಣವನ್ನು ಹೊರರಾಜ್ಯಕ್ಕೆ ಕಳುಹಿಸಿದ ಸಂಬಂಧ ಪ್ರಿಯಾಂಕ್ ಖರ್ಗೆಯವರು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಕೇಳಿದರು.

ಸಿದ್ದರಾಮಯ್ಯನವರು ಹಿಂದೆ ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಇವತ್ತು ಜಾತಿ ಜನಗಣತಿ ಎಂದು ಹೇಳಿ ಮುಸಲ್ಮಾನರನ್ನು ಎತ್ತಿಕಟ್ಟಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಜನವಿರೋಧಿ, ರೈತ ವಿರೋಧಿ, ಭ್ರಷ್ಟ ಸರಕಾರ, ಇಂಥ ಹಿಂದೂ ವಿರೋಧಿ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರಾದ ನಾವು ಮಾಡಬೇಕಿದೆ ಎಂದು ವಿನಂತಿಸಿದರು. ಅದಕ್ಕಾಗಿ ಬಿಜೆಪಿಯ ಜನಾಕ್ರೋಶ ಯಾತ್ರೆ ಇಲ್ಲಿಗೆ ಬಂದಿದೆ ಎಂದು ತಿಳಿಸಿದರು.

ಈ ಸರಕಾರದ ವಿರುದ್ಧ ಮುಂದಿನ 3 ವರ್ಷಗಳ ಕಾಲ ನಾವು ಬೀದಿಗಿಳಿದು ಹೋರಾಟ ಮಾಡಬೇಕಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕೆಂದು ಕೈ ಮುಗಿದು ವಿನಂತಿಸುವುದಾಗಿ ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ, ಮಾಜಿ ಸಚಿವ ಮತ್ತು ಶಾಸಕ ಪ್ರಭು ಚೌಹಾಣ್, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]