ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

BJP is not anti-Muslim: B.Y. Vijayendra

ಬೀದರ್ (Harithalekhani): ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು.

ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು.

ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಸರಕಾರದ ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ

ಪ್ರಧಾನಿ ನರೇಂದ್ರ ಮೋದಿಜೀ ಅವರು ತ್ರಿವಳಿ ತಲಾಖ್ ರದ್ದು ಮಾಡಿ ಮುಸಲ್ಮಾನ ಹೆಣ್ಮಕ್ಕಳಿಗೆ ನ್ಯಾಯ ದೊರಕಿಸಿದ್ದಾರೆ. ಆದರೆ, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ದೇಶಭಕ್ತರ ಪಕ್ಷ. ನಾವು ಕಾಂಗ್ರೆಸ್ಸಿನಿಂದ ಪಾಠ ಕಲಿಯಬೇಕಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ದಲಿತ ಶಾಸಕರ ಮನೆಗೆ ದೇಶದ್ರೋಹಿಗಳು ಬೆಂಕಿ ಹಚ್ಚಿದಾಗ ಆ ದೇಶದ್ರೋಹಿಗಳ ಪರ ನಿಂತ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ 150 ಕೋಟಿ ಹಣವನ್ನು ಹೊರರಾಜ್ಯಕ್ಕೆ ಕಳುಹಿಸಿದ ಸಂಬಂಧ ಪ್ರಿಯಾಂಕ್ ಖರ್ಗೆಯವರು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಕೇಳಿದರು.

ಸಿದ್ದರಾಮಯ್ಯನವರು ಹಿಂದೆ ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಇವತ್ತು ಜಾತಿ ಜನಗಣತಿ ಎಂದು ಹೇಳಿ ಮುಸಲ್ಮಾನರನ್ನು ಎತ್ತಿಕಟ್ಟಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಜನವಿರೋಧಿ, ರೈತ ವಿರೋಧಿ, ಭ್ರಷ್ಟ ಸರಕಾರ, ಇಂಥ ಹಿಂದೂ ವಿರೋಧಿ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರಾದ ನಾವು ಮಾಡಬೇಕಿದೆ ಎಂದು ವಿನಂತಿಸಿದರು. ಅದಕ್ಕಾಗಿ ಬಿಜೆಪಿಯ ಜನಾಕ್ರೋಶ ಯಾತ್ರೆ ಇಲ್ಲಿಗೆ ಬಂದಿದೆ ಎಂದು ತಿಳಿಸಿದರು.

ಈ ಸರಕಾರದ ವಿರುದ್ಧ ಮುಂದಿನ 3 ವರ್ಷಗಳ ಕಾಲ ನಾವು ಬೀದಿಗಿಳಿದು ಹೋರಾಟ ಮಾಡಬೇಕಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕೆಂದು ಕೈ ಮುಗಿದು ವಿನಂತಿಸುವುದಾಗಿ ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ, ಮಾಜಿ ಸಚಿವ ಮತ್ತು ಶಾಸಕ ಪ್ರಭು ಚೌಹಾಣ್, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!