BJP is not anti-Muslim: B.Y. Vijayendra

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

ಬೀದರ್ (Harithalekhani): ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು.

ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು.

ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಸರಕಾರದ ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ

ಪ್ರಧಾನಿ ನರೇಂದ್ರ ಮೋದಿಜೀ ಅವರು ತ್ರಿವಳಿ ತಲಾಖ್ ರದ್ದು ಮಾಡಿ ಮುಸಲ್ಮಾನ ಹೆಣ್ಮಕ್ಕಳಿಗೆ ನ್ಯಾಯ ದೊರಕಿಸಿದ್ದಾರೆ. ಆದರೆ, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ದೇಶಭಕ್ತರ ಪಕ್ಷ. ನಾವು ಕಾಂಗ್ರೆಸ್ಸಿನಿಂದ ಪಾಠ ಕಲಿಯಬೇಕಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ದಲಿತ ಶಾಸಕರ ಮನೆಗೆ ದೇಶದ್ರೋಹಿಗಳು ಬೆಂಕಿ ಹಚ್ಚಿದಾಗ ಆ ದೇಶದ್ರೋಹಿಗಳ ಪರ ನಿಂತ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ 150 ಕೋಟಿ ಹಣವನ್ನು ಹೊರರಾಜ್ಯಕ್ಕೆ ಕಳುಹಿಸಿದ ಸಂಬಂಧ ಪ್ರಿಯಾಂಕ್ ಖರ್ಗೆಯವರು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಕೇಳಿದರು.

ಸಿದ್ದರಾಮಯ್ಯನವರು ಹಿಂದೆ ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಇವತ್ತು ಜಾತಿ ಜನಗಣತಿ ಎಂದು ಹೇಳಿ ಮುಸಲ್ಮಾನರನ್ನು ಎತ್ತಿಕಟ್ಟಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಜನವಿರೋಧಿ, ರೈತ ವಿರೋಧಿ, ಭ್ರಷ್ಟ ಸರಕಾರ, ಇಂಥ ಹಿಂದೂ ವಿರೋಧಿ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರಾದ ನಾವು ಮಾಡಬೇಕಿದೆ ಎಂದು ವಿನಂತಿಸಿದರು. ಅದಕ್ಕಾಗಿ ಬಿಜೆಪಿಯ ಜನಾಕ್ರೋಶ ಯಾತ್ರೆ ಇಲ್ಲಿಗೆ ಬಂದಿದೆ ಎಂದು ತಿಳಿಸಿದರು.

ಈ ಸರಕಾರದ ವಿರುದ್ಧ ಮುಂದಿನ 3 ವರ್ಷಗಳ ಕಾಲ ನಾವು ಬೀದಿಗಿಳಿದು ಹೋರಾಟ ಮಾಡಬೇಕಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕೆಂದು ಕೈ ಮುಗಿದು ವಿನಂತಿಸುವುದಾಗಿ ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ, ಮಾಜಿ ಸಚಿವ ಮತ್ತು ಶಾಸಕ ಪ್ರಭು ಚೌಹಾಣ್, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!