ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

BJP is not anti-Muslim: B.Y. Vijayendra

ಬೀದರ್ (Harithalekhani): ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು.

ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು.

ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಸರಕಾರದ ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ

ಪ್ರಧಾನಿ ನರೇಂದ್ರ ಮೋದಿಜೀ ಅವರು ತ್ರಿವಳಿ ತಲಾಖ್ ರದ್ದು ಮಾಡಿ ಮುಸಲ್ಮಾನ ಹೆಣ್ಮಕ್ಕಳಿಗೆ ನ್ಯಾಯ ದೊರಕಿಸಿದ್ದಾರೆ. ಆದರೆ, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ದೇಶಭಕ್ತರ ಪಕ್ಷ. ನಾವು ಕಾಂಗ್ರೆಸ್ಸಿನಿಂದ ಪಾಠ ಕಲಿಯಬೇಕಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ದಲಿತ ಶಾಸಕರ ಮನೆಗೆ ದೇಶದ್ರೋಹಿಗಳು ಬೆಂಕಿ ಹಚ್ಚಿದಾಗ ಆ ದೇಶದ್ರೋಹಿಗಳ ಪರ ನಿಂತ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ 150 ಕೋಟಿ ಹಣವನ್ನು ಹೊರರಾಜ್ಯಕ್ಕೆ ಕಳುಹಿಸಿದ ಸಂಬಂಧ ಪ್ರಿಯಾಂಕ್ ಖರ್ಗೆಯವರು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಕೇಳಿದರು.

ಸಿದ್ದರಾಮಯ್ಯನವರು ಹಿಂದೆ ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಇವತ್ತು ಜಾತಿ ಜನಗಣತಿ ಎಂದು ಹೇಳಿ ಮುಸಲ್ಮಾನರನ್ನು ಎತ್ತಿಕಟ್ಟಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಜನವಿರೋಧಿ, ರೈತ ವಿರೋಧಿ, ಭ್ರಷ್ಟ ಸರಕಾರ, ಇಂಥ ಹಿಂದೂ ವಿರೋಧಿ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರಾದ ನಾವು ಮಾಡಬೇಕಿದೆ ಎಂದು ವಿನಂತಿಸಿದರು. ಅದಕ್ಕಾಗಿ ಬಿಜೆಪಿಯ ಜನಾಕ್ರೋಶ ಯಾತ್ರೆ ಇಲ್ಲಿಗೆ ಬಂದಿದೆ ಎಂದು ತಿಳಿಸಿದರು.

ಈ ಸರಕಾರದ ವಿರುದ್ಧ ಮುಂದಿನ 3 ವರ್ಷಗಳ ಕಾಲ ನಾವು ಬೀದಿಗಿಳಿದು ಹೋರಾಟ ಮಾಡಬೇಕಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕೆಂದು ಕೈ ಮುಗಿದು ವಿನಂತಿಸುವುದಾಗಿ ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ, ಮಾಜಿ ಸಚಿವ ಮತ್ತು ಶಾಸಕ ಪ್ರಭು ಚೌಹಾಣ್, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]