Cmsiddaramaiah gave good news to students...an important announcement

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ… ಮಹತ್ವದ ಘೋಷಣೆ

ಬೆಂಗಳೂರು (Harithalekhani): ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah) ಅವರು ಮಹತ್ವದ ಘೋಷಣೆ ಮಾಡಿದರು.

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.

ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ವಿವರಿಸಿದರು.

ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು.

ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

ಸಂವಿಧಾನ ವಿರೋಧಿಗಳನ್ನು ದೂರ ಇಡಿ

ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!