Cmsiddaramaiah gave good news to students...an important announcement

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ… ಮಹತ್ವದ ಘೋಷಣೆ

ಬೆಂಗಳೂರು (Harithalekhani): ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah) ಅವರು ಮಹತ್ವದ ಘೋಷಣೆ ಮಾಡಿದರು.

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.

ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ವಿವರಿಸಿದರು.

ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು.

ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

ಸಂವಿಧಾನ ವಿರೋಧಿಗಳನ್ನು ದೂರ ಇಡಿ

ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!